ಬಂಟ್ವಾಳ

ಕಂಬಳ ಉಳಿಸುವ ಹೋರಾಟಕ್ಕೆ ಎಲ್ಲರ ಬೆಂಬಲ

ಕಂಬಳ ಉಳಿಸುವ ಪಕ್ಷಾತೀತ ಹೋರಾಟಕ್ಕೆ ನಮ್ಮೆಲ್ಲರ ಬೆಂಬಲವಿದೆ ಎಂದು ಬಂಟ್ವಾಳ ತಾಲೂಕಿನ ಕಂಬಳ ಕೋಣಗಳ ಮಾಲೀಕರು, ಕಂಬಳ ನಡೆಸುವವರು ಹಾಗೂ ಕಂಬಳ ಪ್ರೇಮಿಗಳು ಹೇಳಿದ್ದಾರೆ.

file photo

www.bantwalnews.com report

ಈ ಕುರಿತು ಬಿ.ಸಿ.ರೋಡಿನಲ್ಲಿ ಸುದ್ದಿಗೋಷ್ಠಿ ನಡೆಸಿದ ಪ್ರಮುಖರಾದ ಎಡ್ತೂರು ರಾಜೀವ ಶೆಟ್ಟಿ ಹಾಗೂ ಸೀತಾರಾಮ ಶೆಟ್ಟಿ, ಕಂಬಳ ನಿಷೇಧದ ಹಿಂದೆ ಪೇಟಾದ ಅನುಭವರಹಿತ ತಿಳುವಳಿಕೆ ಇದೆ. ಈ ಕುರಿತು ಈಗಾಗಲೇ ಎಂಟು ಮಂದಿ ಕೋರ್ಟಿಗೆ ಹೋಗಿದ್ದಾರೆ. ಕಂಬಳದ ಬಗ್ಗೆ ತಪ್ಪು ತಿಳುವಳಿಕೆಯಿಂದ ಮಾತನಾಡುವ ಪೇಟಾಕ್ಕೆ ಸರಿಯಾದ ಮಾರ್ಗದರ್ಶನ ದೊರೆಯಬೇಕು. ಕಂಬಳದಲ್ಲಿ ಯಾವುದೇ ಅಪಾಯವಿಲ್ಲ ಎಂದು ನ್ಯಾಯಾಲಯಕ್ಕೆ ಮನವರಿಕೆ ಆಗಬೇಕು ಎಂದರು.

ಜಾಹೀರಾತು

ಈ ಕುರಿತು ಗ್ರಾಮೀಣ ಭಾಗದಲ್ಲಿ ಕಂಬಳಾಸಕ್ತರ ಅಭಿಪ್ರಾಯ ಒಳಗೊಂಡ ಹೊತ್ತಗೆಯನ್ನು ಕೇಂದ್ರ ಕಾನೂನು ಸಚಿವರಿಗೆ ನೀಡಲಾಗುವುದು, ಕಂಬಳ ಕುರಿತು 28 ರಂದು ಮೂಡುಬಿದರೆಯಲ್ಲಿ ನಡೆಯುವ ಹೋರಾಟಕ್ಕೆ ಎಲ್ಲರೂ ಕೈಜೋಡಿಸಲಿದ್ದೇವೆ. 30ರಂದು ಹೈಕೋರ್ಟ್ ತೀರ್ಪು ಬಂದ ನಂತರ ಮುಂದೇನು ಎಂಬುದರ ಕುರಿತು ಯೋಚಿಸಲಾಗುವುದು ಎಂದರು.

ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಸುಗ್ರೀವಾಜ್ಞೆ ತಂದಾದರೂ ಕಂಬಳ ನಿಷೇಧ ರದ್ದುಗೊಳಿಸುವುದಾಗಿ ಆಶ್ವಾಸನೆ ನೀಡಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಅವರೂ ಈ ಬಗ್ಗೆ ವಿಶೇಷ ಮುತುವರ್ಜಿ ವಹಿಸಿದ್ದಾರೆ. ಹೀಗಾಗಿ ಕಂಬಳ ನಿಷೇಧ ರದ್ದಾಗಬಹುದು ಎಂಬ ವಿಶ್ವಾಸವನ್ನು ಅವರು ವ್ಯಕ್ತಪಡಿಸಿದರು.

ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಪಂಚಾಯಿತಿ ಸದಸ್ಯರಾದ ಬಿ.ಪದ್ಮಶೇಖರ ಜೈನ್, ಚಂದ್ರಪ್ರಕಾಶ ಶೆಟ್ಟಿ, ಕಾಂಗ್ರೆಸ್ ಬ್ಲಾಕ್ ಅಧ್ಯಕ್ಷ ಮಾಯಿಲಪ್ಪ ಸಾಲಿಯಾನ್, ಕಂಬಳ ಕ್ಷೇತ್ರದ ಪ್ರಮುಖರಾದ ವಲೇರಿಯನ್ ಅಪ್ಪು ಡೇಸಾ, ಭಕ್ತಕುಮಾರ ಶೆಟ್ಟಿ, ಕ್ಲಾಡಿ ಡಿಸೋಜ, ಕೃಷ್ಣಾಪುರ ಪರಮೇಶ್ವರ ಸಾಲಿಯಾನ್, ನಿರಂಜನ ರೈ ಮಠಂತಬೆಟ್ಟು, ಅವಿಲ್ ಮಿನೇಜಸ್, ಸತೀಶ್ಚಂದ್ರ ಸಾಲಿಯಾನ್, ಬಾಲಕೃಷ್ಣ ಸಾಲಿಯಾನ್, ನವೀನ್ ಚಂದ್ರ ಆಳ್ವ, ವಿವೇಕ್ ಪುರಸಭಾ ಸದಸ್ಯ ಸದಾಶಿವ ಬಂಗೇರ ಮೊದಲಾದವರು ಉಪಸ್ಥಿತರಿದ್ದರು.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts