ಬಂಟ್ವಾಳ

ಕಂಬಳ ಉಳಿಸುವ ಹೋರಾಟಕ್ಕೆ ಎಲ್ಲರ ಬೆಂಬಲ

ಕಂಬಳ ಉಳಿಸುವ ಪಕ್ಷಾತೀತ ಹೋರಾಟಕ್ಕೆ ನಮ್ಮೆಲ್ಲರ ಬೆಂಬಲವಿದೆ ಎಂದು ಬಂಟ್ವಾಳ ತಾಲೂಕಿನ ಕಂಬಳ ಕೋಣಗಳ ಮಾಲೀಕರು, ಕಂಬಳ ನಡೆಸುವವರು ಹಾಗೂ ಕಂಬಳ ಪ್ರೇಮಿಗಳು ಹೇಳಿದ್ದಾರೆ.

file photo

www.bantwalnews.com report

ಈ ಕುರಿತು ಬಿ.ಸಿ.ರೋಡಿನಲ್ಲಿ ಸುದ್ದಿಗೋಷ್ಠಿ ನಡೆಸಿದ ಪ್ರಮುಖರಾದ ಎಡ್ತೂರು ರಾಜೀವ ಶೆಟ್ಟಿ ಹಾಗೂ ಸೀತಾರಾಮ ಶೆಟ್ಟಿ, ಕಂಬಳ ನಿಷೇಧದ ಹಿಂದೆ ಪೇಟಾದ ಅನುಭವರಹಿತ ತಿಳುವಳಿಕೆ ಇದೆ. ಈ ಕುರಿತು ಈಗಾಗಲೇ ಎಂಟು ಮಂದಿ ಕೋರ್ಟಿಗೆ ಹೋಗಿದ್ದಾರೆ. ಕಂಬಳದ ಬಗ್ಗೆ ತಪ್ಪು ತಿಳುವಳಿಕೆಯಿಂದ ಮಾತನಾಡುವ ಪೇಟಾಕ್ಕೆ ಸರಿಯಾದ ಮಾರ್ಗದರ್ಶನ ದೊರೆಯಬೇಕು. ಕಂಬಳದಲ್ಲಿ ಯಾವುದೇ ಅಪಾಯವಿಲ್ಲ ಎಂದು ನ್ಯಾಯಾಲಯಕ್ಕೆ ಮನವರಿಕೆ ಆಗಬೇಕು ಎಂದರು.

ಜಾಹೀರಾತು

ಈ ಕುರಿತು ಗ್ರಾಮೀಣ ಭಾಗದಲ್ಲಿ ಕಂಬಳಾಸಕ್ತರ ಅಭಿಪ್ರಾಯ ಒಳಗೊಂಡ ಹೊತ್ತಗೆಯನ್ನು ಕೇಂದ್ರ ಕಾನೂನು ಸಚಿವರಿಗೆ ನೀಡಲಾಗುವುದು, ಕಂಬಳ ಕುರಿತು 28 ರಂದು ಮೂಡುಬಿದರೆಯಲ್ಲಿ ನಡೆಯುವ ಹೋರಾಟಕ್ಕೆ ಎಲ್ಲರೂ ಕೈಜೋಡಿಸಲಿದ್ದೇವೆ. 30ರಂದು ಹೈಕೋರ್ಟ್ ತೀರ್ಪು ಬಂದ ನಂತರ ಮುಂದೇನು ಎಂಬುದರ ಕುರಿತು ಯೋಚಿಸಲಾಗುವುದು ಎಂದರು.

ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಸುಗ್ರೀವಾಜ್ಞೆ ತಂದಾದರೂ ಕಂಬಳ ನಿಷೇಧ ರದ್ದುಗೊಳಿಸುವುದಾಗಿ ಆಶ್ವಾಸನೆ ನೀಡಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಅವರೂ ಈ ಬಗ್ಗೆ ವಿಶೇಷ ಮುತುವರ್ಜಿ ವಹಿಸಿದ್ದಾರೆ. ಹೀಗಾಗಿ ಕಂಬಳ ನಿಷೇಧ ರದ್ದಾಗಬಹುದು ಎಂಬ ವಿಶ್ವಾಸವನ್ನು ಅವರು ವ್ಯಕ್ತಪಡಿಸಿದರು.

ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಪಂಚಾಯಿತಿ ಸದಸ್ಯರಾದ ಬಿ.ಪದ್ಮಶೇಖರ ಜೈನ್, ಚಂದ್ರಪ್ರಕಾಶ ಶೆಟ್ಟಿ, ಕಾಂಗ್ರೆಸ್ ಬ್ಲಾಕ್ ಅಧ್ಯಕ್ಷ ಮಾಯಿಲಪ್ಪ ಸಾಲಿಯಾನ್, ಕಂಬಳ ಕ್ಷೇತ್ರದ ಪ್ರಮುಖರಾದ ವಲೇರಿಯನ್ ಅಪ್ಪು ಡೇಸಾ, ಭಕ್ತಕುಮಾರ ಶೆಟ್ಟಿ, ಕ್ಲಾಡಿ ಡಿಸೋಜ, ಕೃಷ್ಣಾಪುರ ಪರಮೇಶ್ವರ ಸಾಲಿಯಾನ್, ನಿರಂಜನ ರೈ ಮಠಂತಬೆಟ್ಟು, ಅವಿಲ್ ಮಿನೇಜಸ್, ಸತೀಶ್ಚಂದ್ರ ಸಾಲಿಯಾನ್, ಬಾಲಕೃಷ್ಣ ಸಾಲಿಯಾನ್, ನವೀನ್ ಚಂದ್ರ ಆಳ್ವ, ವಿವೇಕ್ ಪುರಸಭಾ ಸದಸ್ಯ ಸದಾಶಿವ ಬಂಗೇರ ಮೊದಲಾದವರು ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ