ಬಂಟ್ವಾಳ

ನೇತ್ರಾವತಿಯಲ್ಲಿ ತೇಲಿ ಬಂತು ಅಪರಿಚಿತ ಶವ

ಈ ಶವದ ವಾರೀಸುದಾರರು ಯಾರೆಂದು ಹೇಗೂ ಗೊತ್ತಿಲ್ಲ, ಸರ್ಕಾರಿ ಆಸ್ಪತ್ರೆಯಲ್ಲೂ ಶವಕ್ಕೆ ಜಾಗ ದೊರಕದೆ ಖಾಸಗಿ ಆಸ್ಪತ್ರೆಯನ್ನು ಆಶ್ರಯಿಸಬೇಕಾಯಿತು.

ಇದು ಬಿ.ಸಿ.ರೋಡ್ ಸಮೀಪ ತಲಪಾಡಿ ಎಂಬಲ್ಲಿ ನೇತ್ರಾವತಿ ನದಿಯಲ್ಲಿ ದೊರಕಿದ ಅಪರಿಚಿತ ಪುರುಷನ ಶವದ ಸ್ಥಿತಿ.

www.bantwalnews.com report

ಜಾಹೀರಾತು

ಬುಧವಾರ ಸ್ಥಳೀಯ ನಿವಾಸಿಗಳು ನೇತ್ರಾವತಿ ನದಿಯಲ್ಲಿ ತೇಲುತ್ತಿರುವುದನ್ನು ಕಂಡು ಕೂಡಲೇ ಬಂಟ್ವಾಳ ನಗರ ಠಾಣಾ ಪೊಲೀಸರಿಗೆ ಮಾಹಿತಿ ನೀಡಿದರು.

ತಕ್ಷಣವೇ ನಗರ ಠಾಣೆ ಪೊಲೀಸರು ಧಾವಿಸಿ ಬಂದು ಅಗ್ನಿಶಾಮಕ ದಳ ಮತ್ತು ಸ್ಥಳೀಯರ ಸಹಕಾರದಲ್ಲಿ ಶವವನ್ನು ಮೇಲೆತ್ತಿದರು. ಈ ಸಂದರ್ಭ ಇದು ಸುಮಾರು 45ರಿಂದ 50ರ ಹರೆಯದ ಕಪ್ಪು ಪ್ಯಾಂಟು ಧರಿಸಿದ್ದ ಅಪರಿಚಿತ ಗಂಡಸಿನ ಶವ ಎಂದು ಅಂದಾಜಿಸಲಾಯಿತು.  ಕೂಡಲೇ ಅದನ್ನು ಮಂಗಳೂರು ವೆನ್‌ಲಾಕ್ ಶವಾಗಾರಕ್ಕೆ ಕಳುಹಿಸಲಾಯಿತು.

ಆದರೆ ಮಂಗಳೂರು ವೆನ್ ಲಾಕ್ ನ ಶವಾಗಾರದವರೆಗೆ ಹೋದ ಶವ ಮರಳಿ ಪೊಲೀಸರ ಬಳಿಯೇ ಬಂತು!

ಕೊನೆಗೆ ಪೊಲೀಸರು ಶವವನ್ನು ದೇರಳಕಟ್ಟೆ ಕೆ.ಎಸ್.ಹೆಗ್ಡೆ ಖಾಸಗಿ ಆಸ್ಪತ್ರೆ ಶವಾಗಾರಕ್ಕೆ ಸಾಗಿಸಿದರು. ಬಂಟ್ವಾಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಜಾಹೀರಾತು
Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.