ಬಂಟ್ವಾಳ

ರಾಷ್ಟ್ರೀಯ ಮತದಾರರ ದಿನಾಚರಣೆಗೆ ಚಾಲನೆ

ಬಂಟ್ವಾಳ ತಾಲೂಕಿನ ಮೂರು ಗ್ರಾಮಗಳಲ್ಲಿ ರಾಷ್ಟ್ರೀಯ ಮತದಾರರ ದಿನಾಚರಣೆಗೆ ಬುಧವಾರ ಚಾಲನೆ ನೀಡಲಾಯಿತು.

ಬಂಟ್ವಾಳನ್ಯೂಸ್ ವರದಿ

ಜಾಹೀರಾತು

ಬಿ.ಸಿ.ರೋಡ್ ನ ಎಸ್.ಜಿ.ಎಸ್.ವೈ ಸಭಾಂಗಣದಲ್ಲಿ ತಹಶೀಲ್ದಾರ್ ಪುರಂದರ ಹೆಗ್ಡೆ ಮತದಾರರ ಗುರುತಿನ ಚೀಟಿಯನ್ನು ಸಾಂಕೇತಿಕವಾಗಿ ವಿತರಿಸಿದರು. ಇದೇ ಸಂದರ್ಭ ಮತದಾರರ ಪ್ರತಿಜ್ಞಾ ವಿಧಿ ನೆರವೇರಿಸಲಾಯಿತು. ಸಭಾಧ್ಯಕ್ಷತೆ ವಹಿಸಿ ಮಾತನಾಡಿದ ತಹಶೀಲ್ದಾರ್, ಪ್ರಜಾಪ್ರಭುತ್ವವನ್ನು ಬಲಪಡಿಸಲು ಯುವ ಜನತೆ ಚುನಾವಣಾ ಪ್ರಕ್ರಿಯೆಯಲ್ಲಿ ತೊಡಗಿಸಿಕೊಳ್ಳುವಂತೆ ವಿನಂತಿಸಿದರು.

ಚುನಾವಣಾ ಉಪತಹಶೀಲ್ದಾರ್ ಪರಮೇಶ್ವರ ನಾಯಕ್ ಸಂಸ್ಥಾಪನಾ ದಿನದ ಮಹತ್ವವನ್ನು ವಿವರಿಸಿದರು. ಈ ಸಂದರ್ಭ ಉಪತಹಶೀಲ್ದಾರ್ ಗಳಾದ ಭಾಸ್ಕರ್ ರಾವ್, ಲಲಿತಾ ಶೆಟ್ಟಿ, ಪಾಣೆಮಂಗಳೂರು ಕಂದಾಯ ನಿರೀಕ್ಷಕ ರಾಮ.ಕೆ , ಪ್ರಮುಖರಾದ ಪ್ರಮೋದ್ ಕುಮಾರ್ ಅಜ್ಜಿಬೆಟ್ಟು, ಕೇಶವ ದೈಪಲ ಉಪಸ್ಥಿತರಿದ್ದರು. ಬಿ.ಮೂಡ , ಬಂಟ್ವಾಳ ಕಸ್ಬಾ, ಪಾಣೆಮಂಗಳೂರು ಗ್ರಾಮ ವ್ಯಾಪ್ತಿಯ ಮತದಾರರಿಗೆ ಮತದಾರರ ಗುರುತಿನ ಚೀಟಿ ವಿತರಿಸಲಾಯಿತು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ