ಯಕ್ಷಗಾನ

ಸಿದ್ಧಕಟ್ಟೆ ಚೆನ್ನಪ್ಪ ಶೆಟ್ಟಿ ನೆನೆದು ಭಾವುಕರಾದ ಸೀತಾರಾಮ ಕುಮಾರ್ ಕಟೀಲ್

ಯಕ್ಷಮಿತ್ರರು ಕೈಕಂಬ ವತಿಯಿಂದ ಬಿ.ಸಿ.ರೋಡಿನಲ್ಲಿ ಸನ್ಮಾನ ಸಮಾರಂಭ, ಯಕ್ಷಗಾನ ಪ್ರದರ್ಶನ

www.bantwalnews.com report

ಸೀತಾರಾಮ ಕುಮಾರ್ ಅವರಿಗೆ ಸನ್ಮಾನ ಕಾರ್ಯಕ್ರಮ pic: Ram naresh Manchi

ಸಿದ್ಧಕಟ್ಟೆ ಚೆನ್ನಪ್ಪ ಶೆಟ್ಟರು ನನ್ನನ್ನು ಯಕ್ಷಗಾನಕ್ಕೆ ಕರೆತರದಿದ್ದರೆ ನಾನು ಇವನ್ನು ಹೋಟೆಲ್ ನಲ್ಲಿ ಕೆಲಸ ಮಾಡುತ್ತಿರಬೇಕಾಗಿತ್ತು. ಅವರು ನನ್ನ ಸರ್ವಾಂಗೀಣ ಬೆಳವಣಿಗೆಗೆ ಕಾರಣರಾದ ಗುರುಗಳು ಎಂದು ಹಿರಿಯ ಹಾಸ್ಯ ಕಲಾವಿದ ಸೀತಾರಾಮ ಕುಮಾರ್ ಕಟೀಲು ಹೇಳಿದರು.

ಜಾಹೀರಾತು

ಬಿ.ಸಿ.ರೋಡ್ ಕೈಕಂಬ ಯಕ್ಷಮಿತ್ರರು ಆಶ್ರಯದಲ್ಲಿ ಇಲ್ಲಿನ ರಂಗೋಲಿ ಹೋಟೆಲ್ ಹೊರಾಂಗಣದಲ್ಲಿ ಎಡನೀರು ಶ್ರೀ ಗೋಪಾಲಕೃಷ್ಣ ಕೃಪಾಪೋಷಿತ ಯಕ್ಷಗಾನ ಮಂಡಳಿಯ ಬಯಲಾಟ ಹಿಡಿಂಬ-ಕೀಚಕ-ಉತ್ತರ ಪ್ರದರ್ಶನ ಸಂದರ್ಭ ನಡೆದ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದ ಸಂದರ್ಭ ಭಾವುಕರಾದರು.

ಸುಬ್ರಾಯ ಹೊಳ್ಳ ಅವರ ಕೀಚಕ ಚಿತ್ರ: ರಾಮ್ ನರೇಶ್ ಮಂಚಿ

ಸಿದ್ಧಕಟ್ಟೆ ಅವತ್ತು ನನ್ನನ್ನು ಗುರುತಿಸದಿದ್ದರೆ ನಾನಿಂದು ಎಲ್ಲೋ ಇರುತ್ತಿದ್ದೆ. ಅವರಿಂದು ನಮ್ಮೊಂದಿಗಿಲ್ಲ ಎಂಬುದೇ ದು:ಖದ ಸಂಗತಿ ಎಂದು ಕಂಬನಿ ಮಿಡಿದರು.

ಯಕ್ಷಗಾನದಲ್ಲಿ ನಾನಿಂದು ಗುರುತಿಸಲ್ಪಡಲು ಸಹಕಲಾವಿದರೂ ಕಾರಣ. ಹಾಸ್ಯಗಾರರಾದ ನನಗೆ ಮಾತನಾಡಲು ಅವಕಾಶ ನೀಡಿ ಬೆಳೆಯಲು ಕಾರಣಕರ್ತರಾದರು ಎಂದು ಸೀತಾರಾಮ ಕುಮಾರ್ ಹೇಳಿದರು.

ಶಿವರಾಮ ಜೋಗಿ ಅವರ ಭೀಮ pic: Ram naresh manchi

ಕಸಾಪ ತಾಲೂಕು ಅಧ್ಯಕ್ಷ ಕೆ.ಮೋಹನ ರಾವ್, ಉದ್ಯಮಿ ಸತೀಶ ಭಂಡಾರಿ ಕುಳತಬೆಟ್ಟು, ಪುರಸಭಾಧ್ಯಕ್ಷ ರಾಮಕೃಷ್ಣ ಆಳ್ವ, ವಿಶ್ವನಾಥ ಶೆಟ್ಟಿ ಸೊರ್ನಾಡು ಉಪಸ್ಥಿತಿಯಲ್ಲಿ ಅವರನ್ನು ಸನ್ಮಾನಿಸಲಾಯಿತು.

ಯಕ್ಷಮಿತ್ರರು ಬಳಗದ ಶಂಕರ ಶೆಟ್ಟಿ, ಭುಜಂಗ ಸಾಲ್ಯಾನ್, ಸದಾಶಿವ ಕೈಕಂಬ, ದಿವಾಕರ ಶೆಟ್ಟಿ ಈ ಸಂದರ್ಭ ಉಪಸ್ಥಿತರಿದ್ದರು. ಕಿಶೋರ್ ಭಂಡಾರಿ ಕಾರ್ಯಕ್ರಮ ನಿರೂಪಿಸಿದರು.

ಉತ್ತರನಾಗಿ ದಿವಾಕರ ಸಂಪಾಜೆ pic: ram naresh manchi

ಇದೇ ಸಂದರ್ಭ ರವಿಚಂದ್ರ ಕನ್ನಡಿಕಟ್ಟೆ, ಚೈತನ್ಯ ಪದ್ಯಾಣ, ವಿನಯ ಆಚಾರ್ಯ ಕಡಬ ಹಿಮ್ಮೆಳದಲ್ಲಿ ಹಿಡಿಂಬಾ ವಿವಾಹ ಹಾಗೂ ಕೀಚಕ ಪ್ರಸಂಗ ಹಾಗೂ ಪದ್ಯಾಣ ಗಣಪತಿ ಭಟ್, ಶಂಕರನಾರಾಯಣ ಭಟ್ ಮತ್ತು ಜಯರಾಮ ಭಟ್ ಹಿಮ್ಮೇಳದಲ್ಲಿ ಉತ್ತರನ ಪೌರುಷ ಪ್ರಸಂಗ ಪ್ರದರ್ಶನ ಸೇರಿದ ನೂರಾರು ಪ್ರೇಕ್ಷಕರ ಸಮ್ಮುಖ ಕಂಡಿತು.

Pic Courtesy: Ram Naresh Manchi

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts

ಮಂಗಳೂರು ಕಡಲ ತೀರ ʼಕಡಲ ಪವನ ಶಕ್ತಿ ಉತ್ಪಾದನಾ ವಲಯʼವಾಗಿ ಅಭಿವೃದ್ಧಿಪಡಿಸಲು ಕೇಂದ್ರಕ್ಕೆ ಮನವಿ

ನಿಯಮ 377ರ ಅಡಿಯಲ್ಲಿ ಸಮುದ್ರ ತೀರದ ಪವನ ಸಾಮರ್ಥ್ಯದ ಬಗ್ಗೆ ಲೋಕಸಭೆ ಗಮನಸೆಳೆದ ಸಂಸದ ಕ್ಯಾ. ಚೌಟ (more…)

7 hours ago