ಕಲ್ಲಡ್ಕ

ಬಿಜೆಪಿ ಬೆಂಬಲಿತ ಅಭ್ಯರ್ಥಿ ಗೆಲುವಿನ ಅಭಿನಂದನಾ ಸಭೆ

ಎಪಿಎಂ.ಸಿ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಮಾಣಿ ಕ್ಷೇತ್ರದ ಬಿಜೆಪಿ ಬೆಂಬಲಿತ ಅಭ್ಯರ್ಥಿ ನೇಮಿರಾಜ ರೈ ಯವರ ಅಭಿನಂದನಾ ಸಭೆ ಕಲ್ಲಡ್ಕದ ಪಂಚವಟಿ ಸಭಾಂಗಣದಲ್ಲಿ ನಡೆಯಿತು.

https://bantwalnews.com report

ಜಾಹೀರಾತು

ಈ ಸಂದರ್ಭ ಸಂಸದ ನಳಿನ್ ಕುಮಾರ್ ಕಟೀಲು ಮಾತನಾಡಿ ಈ ಗೆಲುವು ಮುಂದಿನ ದಿನಗಳಲ್ಲಿ ಬಿಜೆಪಿ ಪಕ್ಷವನ್ನು ಸಂಘಟಿತ ಹೋರಾಟ ಮಾಡಲು ಸಹಕಾರಿಯಾಗುತ್ತದೆ.   ಪಕ್ಷದ ಎಲ್ಲಾ ಕಾರ್‍ಯಕರ್ತರ ಹುರುಪಿನ ಕೆಲಸದಿಂದ ಎಪಿಎಂಸಿ ಚುನಾವಣೆಯಲ್ಲಿ ಅಭೂತಪೂರ್ವ ಸಾಧನೆ ಮಾಡಲು ಸಾಧ್ಯವಾಯಿತು. ಕಾರ್‍ಯಕರ್ತರು ಮುಂದಿನ ದಿನಗಳಲ್ಲಿ ಕೇಂದ್ರ ಸರಕಾರದ ಜನಪರ ಯೋಜನೆಗಳನ್ನು ಗ್ರಾಮ ಮಟ್ಟದಲ್ಲಿ ಜನರಿಗೆ ತಿಳಿಸುವ ಕೆಲಸ ಮಾಡಬೇಕಾಗಿದೆ. ಅ ಮೂಲಕ ಮುಂಬರುವ ವಿಧಾನ ಸಭಾ ಚುನಾವಣೆಯಲ್ಲಿ ಪಕ್ಷವನ್ನು ಅಧಿಕಾರಕ್ಕೆ ತರಲು ಒಗ್ಗಟ್ಟಿನಿಂದ  ಕೆಲಸ ಮಾಡಬೇಕಾಗಿದೆ ಎಂದರು.

ಬಿಜೆಪಿ ಮುಖಂಡ ರಾಜೇಶ್ ನಾಯಕ್ ಉಳಿಪ್ಪಾಡಿ ಗುತ್ತು ,ಮಾಜಿ ಶಾಸಕರುಗಳಾದ ಪದ್ಮನಾಭ ಕೊಟ್ಟಾರಿ, ರುಕ್ಮಯ ಪೂಜಾರಿ, ಬಂಟ್ವಾಳ ಬಿಜೆಪಿ ಅಧ್ಯಕ್ಷ ದೇವದಾಸ ಶೆಟ್ಟಿ, ರಾಜ್ಯ ಸಹವಕ್ತಾರೆ ಸುಲೋಚನಾ ಜಿಕೆ ಭಟ್, ಕ್ಷೇತ್ರ ಪ್ರಧಾನ ಕಾರ್‍ಯದರ್ಶಿ ರಾಮ್‌ದಾಸ ಬಂಟ್ವಾಳತಾ.ಪಂ.ಸದಸ್ಯರಾದ ಮಹಾಬಲ ಆಳ್ವ, ಗೀತಾ ಚಂದ್ರಶೇಖರ್ಗೋಳ್ತಮಜಲು ಗ್ರಾ.ಪಂ.ಅಧ್ಯಕ್ಷೆ ಜಯಲಕ್ಮೀ ಭಟ್, ಪಕ್ಷದ ಪ್ರಮುಖರಾದ ಚೆನ್ನಪ್ಪ ಆರ್ ಕೋಟ್ಯಾನ್, ದ.ಕ.ಜಿಲ್ಲಾ. ಬಿಜೆಪಿ ಎಸ್.ಸಿ ಮೋರ್ಚಾ ಜಿಲ್ಲಾಧ್ಯಕ್ಷ ದಿನೇಶ್ ಅಮ್ಟೂರು, ಯುವ ಮೋರ್ಚಾದ ಅಧ್ಯಕ್ಷ ವಜ್ರನಾಥ ಕಲ್ಲಡ, ಮಹಿಳಾ ಮೋರ್ಚಾದ ಪ್ರಧಾನ ಕಾರ್‍ಯದರ್ಶಿ ಜಯಂತಿ ಮತ್ತಿತರರು ಉಪಸಿತರಿದ್ದರು. ಮೋನಪ್ಪ ದೇವಸ್ಯ ಸ್ವಾಗತಿಸಿ, ರಾಜೇಶ್ ಕೊಟ್ಟಾರಿ ವಂದಿಸಿದರು.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts