ಗೋವನ್ನು ಉಳಿಸುವ ಕಾರ್ಯಕ್ಕೆ ಕೈಜೋಡಿಸಿ: ರಾಘವೇಶ್ವರ ಸ್ವಾಮೀಜಿ

ಎರಡು ದಿನಗಳ ಬಳಿಕ ಇದೇ ಸ್ಥಳದಲ್ಲಿ ವಿಶ್ವದಲ್ಲಿ ಹೊಸದೊಂದು ಶಕ್ತಿ ಉದಯವಾಗಲಿದೆ. ಅದು ಗೋವಿನ ಸುತ್ತ ಭದ್ರ ಕೋಟೆ ಕಟ್ಟಿ, ಗೋವಿನ ಕಾವಲಿಗೆ ನಿಲ್ಲಲಿದೆ. ತನ್ಮೂಲಕ ಗೋಹತ್ಯೆಯನ್ನು ಸಂಪೂರ್ಣವಾಗಿ ನಿಲ್ಲಿಸುವ ಶಕ್ತಿ ತೋರಲಿದೆ ಎಂದು ಎಂದು ಶ್ರೀ ರಾಮಚಂದ್ರಾಫುರ ಮಠದ ಶ್ರೀ ರಾಘವೇಶ್ವರ ಭಾರತಿ ಸ್ವಾಮೀಜಿ ಹೇಳಿದರು.

ಕೂಳೂರಿನ ಮಂಗಲಭೂಮಿಗೆ ಮಂಗಲ ಗೋಯಾತ್ರೆಯ ಪುರಪ್ರವೇಶದಲ್ಲಿ ಗೋಧ್ವಜ ಸ್ವೀಕರಿಸಿ ಅವರು ಆಶೀರ್ವಚನ ನೀಡಿದರು.

ಜಾಹೀರಾತು

ಗೋಯಾತ್ರೆ ಸಂಚರಿಸಿದಲ್ಲೆಲ್ಲ ಹೊಸ ಹೊಸ ಪ್ರೇರಣೆ ನೀಡಿದೆ. ಗೋವಿದ್ದರೆ ನಾವು ಎಂಬ ಸಂದೇಶವನ್ನು ಸಮಾಜಕ್ಕೆ ತೋರಿಸಿಕೊಟ್ಟಿದೆ. ಸಮಸ್ತ ಸಂತ ಶಕ್ತಿ ಇದರ ಹಿಂದಿದೆ. ಜಾತಿ ಭೇದ ಮರೆತು ಗೋಮಾತೆಯ ರಕ್ಷಣೆಗೆ ಮುಂದಾಗೋಣ ಎಂದು ಕರೆ ನೀಡಿದರು.

ಗೋಹತ್ಯೆ ನಿಲ್ಲಿಸಬೇಕೆಂದು ಅಲ್ಲಲ್ಲಿ ಧ್ವನಿ ಕೇಳಿ ಬರುತ್ತಿದೆ. ಇದು ಚುಕ್ಕಿಗಳಿದ್ದಂತೆ. ಈ ಚುಕ್ಕಿಗಳನ್ನು ಗೆರೆ ಎಳೆದು ಒಂದು ಮಾಡಿ ಗೋರಕ್ಷಣೆಯ ಹಿಂದೆ ಮಹಾನ್ ಶಕ್ತಿ ಇದೆ ಎಂದು ಪ್ರದರ್ಶಿಸಬೇಕಿದೆ ಎಂದು ಹೇಳಿದರು.

ಇಲ್ಲಿ ನಡೆಯುವ ಕಾರ್ಯಕ್ರಮಗಳಲ್ಲಿ ಉಪಸ್ಥಿತಿ ಮಾತ್ರ ನಮ್ಮ ಬೇಡಿಕೆ. ಬೇರೆ ಯಾವುದೇ ಬೇಡಿಕೆ ಇಲ್ಲಿಲ್ಲ ಎಂದು ಶ್ರೀಗಳು ಭಾವುಕರಾಗಿ ನುಡಿದರು.

ಜಾಹೀರಾತು

ವಜ್ರದೇಹಿ ಮಠದ ಶ್ರೀ ರಾಜಶೇಖರಾನಂದ ಸ್ವಾಮೀಜಿ ಮಾತನಾಡಿ, “ವಿಶ್ವದಾಖಲೆಯ ಕಾರ್ಯಕ್ರಮಕ್ಕೆ ವೇದಿಕೆ ಸಜ್ಜಾಗಿದೆ. ಸ್ವಾತಂತ್ರ್ಯ ಸಂಗ್ರಾಮದಲ್ಲಿ ಪಾಲ್ಗೊಳ್ಳುವ ಅವಕಾಶ ಇಲ್ಲದಿದ್ದ ನಮಗೆ ಇದೀಗ ಗೋ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಪಾಲ್ಗೊಳ್ಳುವ ಅವಕಾಶ ಲಭಿಸಿದೆ. ಇದರಲ್ಲಿ ಯಾರಿಗೂ ಸಾವಿನ ಭಯವಿಲ್ಲ. ಯಾಕೆಂದರೆ ನಾಳೆ ಇಲ್ಲಿ ಸಾವಿರದ ಸಂತರೇ ಈ ಸಂಗ್ರಾಮದಲ್ಲಿ ಪಾಲ್ಗೊಳ್ಳಲಿದ್ದಾರೆ” ಎಂದು ಹೇಳಿದರು.

ಗೋಮಂಗಲ ಯಾತ್ರೆಗೆ ಸರ್ಕಾರದಿಂದ ಸಾಕಷ್ಟು ಅಡ್ಡಿ ಆತಂಕಗಳು ಎದುರಾದವು. ಆದರೆ ಈ ಮಂಗಲ ಕಾರ್ಯಕ್ಕೆ ಯಾವುದೇ ತೊಂದರೆಯಾಗಿಲ್ಲ. ಇಷ್ಟು ದೊಡ್ಡ ಕಾರ್ಯಕ್ರಮವಾಗುತ್ತಿದ್ದರೂ, ಸರ್ಕಾರದ ಒಬ್ಬನೇ ಒಬ್ಬ ಸಚಿವ ಇದರಲ್ಲಿ ಪಾಲ್ಗೊಂಡಿಲ್ಲ. ಇದು ವಿಷಾದದ ಸಂಗತಿ ಎಂದರು.

ಮೂಡಬಿದರೆಯ ಜೈನಮಠದ ಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಮಾತನಾಡಿ, ಹುಲಿಯ ಬದಲು ಗೋವು ದೇಶದ ಪ್ರಾಣಿಯಾಗಲಿ. ಈ ಮೂಲಕ ಅದರ ಹತ್ಯೆ ನಿಲ್ಲಲ್ಲಿ ಎಂದರು.

ಜಾಹೀರಾತು

ಗರ್ತಿಕೆರೆ ನಾರಾಯಣಗುರು ಮಹಾಸಂಸ್ಥಾನದ  ರೇಣುಕಾನಂದ ಸ್ವಾಮೀಜಿ ಮಾತನಾಡಿ, ಗೋರಕ್ಷಣೆಗೆ ಹೋರಾಡುತ್ತಿರುವ ಶ್ರೀ ರಾಘವೇಶ್ವರ ಸ್ವಾಮೀಜಿಯವರು ಆಧುನಿಕ ಭಗೀರಥನೆನಿಸಿಕೊಂಡಿದ್ದಾರೆ ಎಂದು ಅಭಿಪ್ರಾಯಪಟ್ಟರು.

ಬಲ್ಯೊಟ್ಟು ಗುರುಸೇವಾಶ್ರಮದ ಶ್ರೀ ವಿಖ್ಯಾತಾನಂದ ಸ್ವಾಮೀಜಿ, ಬ್ರಹ್ಮಕುಮಾರಿ ವಿಶ್ವೇಶ್ವರಿ ಅಕ್ಕ, ಕಲ್ಲಡ್ಕ ಡಾ.ಪ್ರಭಾಕರ ಭಟ್ ವೇದಿಕೆಯಲ್ಲಿದ್ದರು. ಗೋಮಂಗಲ ಯಾತ್ರೆಯ ದಿಗ್ದರ್ಶಕ ಡಾ.ವೈ.ವಿ.ಕೃಷ್ಣಮೂರ್ತಿ ಸಪ್ತ ರಾಜ್ಯಗಳಲ್ಲಿ ಸಂಚರಿಸಿದ ಗೋಯಾತ್ರೆಯ ಸಾಧನಾ ವರದಿ ನೀಡಿದರು. ಮಹೇಶ್ ಕಜೆ ಕಾರ್ಯಕ್ರಮ ನಿರೂಪಿಸಿದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಗೋವನ್ನು ಉಳಿಸುವ ಕಾರ್ಯಕ್ಕೆ ಕೈಜೋಡಿಸಿ: ರಾಘವೇಶ್ವರ ಸ್ವಾಮೀಜಿ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*