ಆದಿದ್ರಾವಿಡ ವಧೂವರರ ಅನ್ವೇಷಣೆ – ಪೊದು ಸಂಧಾನ ಫೆ.26ರಂದು

ನವಚೇತನಾ ಸೇವಾ ಟ್ರಸ್ಟ್ ಬಂಟ್ವಾಳ ವತಿಯಿಂದ ದ.ಕ, ಕಾಸರಗೋಡು, ಉಡುಪಿ, ಚಿಕ್ಕಮಗಳೂರು, ಹಾಸನ, ಕೊಡಗು,ಕಾಸರಗೋಡು ಜಿಲ್ಲಾ ವ್ಯಾಪ್ತಿಯ ಆದಿದ್ರಾವಿಡ ವಧೂವರರ ಅನ್ವೇಷಣೆ (ಪೊದು ಸಂಧಾನ) ಫೆ.26ರಂದು ಬೆಳಗ್ಗೆ 10ರಿಂದ ಸಂಜೆ 5ವರೆಗೆ ಬಿ.ಸಿ.ರೋಡಿನ ಲಯನ್ಸ್ ಕ್ಲಬ್ ನಲ್ಲಿ ನಡೆಯುವುದು.

ಇದರಲ್ಲಿ ಆದಿದ್ರಾವಿಡ ಜಾತಿಯ ವಧೂವರರಿಗೆ ಮತ್ತು ಅವರ ಕುಟುಂಬಸ್ಥರಿಗೆ ಮಾತ್ರ ಭಾಗವಹಿಸಲು ಅವಕಾಶ. ಇತರರಿಗೆ ಅವಕಾಶ ಇರುವುದಿಲ್ಲ. ಒಂದು ಮನೆಯಲ್ಲಿ 18 ವರ್ಷ ಮೇಲ್ಪಟ್ಟು ಹೆಣ್ಣುಮಗಳು 21 ವರ್ಷ ಮೇಲ್ಪಟ್ಟ ಗಂಡು ಇದ್ದರೆ, ಇವತ್ತಿನವರೆಗೆ ಯಾವುದೇ ಹೆಣ್ಣು ನೋಡುವ ಅಥವಾ ಗಂಡು ನೋಡುವ ಅನ್ವೇಷಣೆ ನಡೆಯದೇ ಇದ್ದರೆ ಇಲ್ಲಿ ಭಾಗವಹಿಸಬಹುದು ಎಂದು ಕಾರ್ಯಕ್ರಮದ ರೂವಾರಿ ನವಚೇತನಾ ಸೇವಾ ಟ್ರಸ್ಟ್ ಅಧ್ಯಕ್ಷ ರಾಜ ಪಲ್ಲಮಜಲು ಬಿ.ಸಿ.ರೋಡ್ ಪ್ರೆಸ್  ಕ್ಲಬ್ ನಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಫುಲ್ ಸೈಜ್ ಎರಡು ಪ್ರತಿ ಭಾವಚಿತ್ರ,ವಯಸ್ಸಿನ ದೃಢಪತ್ರ ಶಾಲಾ ಸರ್ಟಿಫಿಕೇಟ್, ಜಾತಿ ಪ್ರಮಾಣಪತ್ರ, ತಂದೆ ತಾಯಿಯ ಬಳಿ(ಬರಿ), ಉದ್ಯೋಗದ ವಿವರವನ್ನು ಫೆ.5ರಿಂದ ಫೆ.19ರ ಸಂಜೆ 5ರೊಳಗೆ ನವಚೇತನಾ ಸೇವಾ ಟ್ರಸ್ಟ್ ಕಚೇರಿ, ಹಳೇ ತಾಲೂಕು ಪಂಚಾಯಿತಿ ಕಟ್ಟಡ, ಪತ್ರಿಕಾ ಭವನದ ಬಳಿ, ಬಿ.ಸಿ.ರೋಡ್ ಇಲ್ಲಿ ಹೆಸರು ನೋಂದಾಯಿಸಬಹುದು ಎಂದರು.

ಜಾಹೀರಾತು

ಸುದ್ದಿಗೋಷ್ಠಿಯಲ್ಲಿ ಮೋಹನ ಬಡಗಬೆಳ್ಳೂರು, ಡೊಂಬಯ್ಯ ಅಮ್ಯಲ್, ಸದಾಶಿವ ಕಟ್ಟೆಮಾರ್ ಮೊದಲಾದವರು ಉಪಸ್ಥಿತರಿದ್ದರು.

 

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಆದಿದ್ರಾವಿಡ ವಧೂವರರ ಅನ್ವೇಷಣೆ – ಪೊದು ಸಂಧಾನ ಫೆ.26ರಂದು"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*