ಜೇಸಿಐ ಇಂಡಿಯಾದ ಅತ್ಯುನ್ನತ ಪ್ರಶಸ್ತಿಯಾದ ಔಟ್ ಸ್ಟಾಂಡಿಂಗ್ ನ್ಯಾಷನಲ್ ಎವಾರ್ಡ್ ವಿನ್ನರ್ ಪ್ರಶಸ್ತಿಯು ವಿಟ್ಲ ಜೆಸಿಐ 2016 ರ ಅಧ್ಯಕ್ಷ ಬಾಬು ಕೆ ವಿ ಯವರಿಗೆ ಲಬಿಸಿರುತ್ತದೆ. ಬೆಂಗಳೂರಿನ ದೇವನಹಳ್ಳಿ ಜೆಸಿಐಯ ಆತಿಥ್ಯದಲ್ಲಿ ನಡೆದ ಜೆಸಿಐ ರಾಷ್ಟ್ರೀಯ ಸಮ್ಮೇಳನದಲ್ಲಿ ಜೇಸಿಐ ಇಂಡಿಯಾದ ರಾಷ್ಟ್ರೀಯ ಅಧ್ಯಕ್ಷೆ ರಾಜಶ್ರೀ ಬಜೆ ಯವರು ಈ ಪ್ರಶಸ್ತಿ ನೀಡಿ ಗೌರವಿಸಿದರು.
2016 ರಲ್ಲಿ ವಿಟ್ಲದ ಶಾಲಾ ಕಾಲೇಜುಗಳಿಗೆ ನೀಡಿದ ಕೊಡುಗೆಗಳು, ಸಾರ್ವಜನಿಕರ ಉಪಯೋಗಕ್ಕಾಗಿ ನಿರ್ಮಿಸಿದ ಬಸ್ ಶಲ್ಟರ್, ಬಡವರಿಗೆ ಮನೆ ನಿರ್ಮಾಣ, ಭಾರತದ ಜೇಸಿಐ ಸಂಸ್ಥೆಗೆ ನೀಡಿದ ದೇಣಿಗೆ, ವಿಟ್ಲ ಘಟಕಕ್ಕೆ ಹೊಸ ಸದಸ್ಯರ ಸೇರ್ಪಡೆ ಹಾಗೂ ಇತರ ಸಮಾಜಮುಖಿ ಕಾರ್ಯಕ್ರಮಗಳನ್ನು ಪರಿಗಣಿಸಿ ಹಾಗೂ ಇತರ ಕಡೆಗಳಲ್ಲಿ ಮೂರು ಹೊಸ ಘಟಕಗಳನ್ನು ಸ್ಥಾಪಿಸಿದ್ದಕ್ಕಾಗಿ ಈ ಪ್ರಶಸ್ತಿ. ವಿಟ್ಲ ಜೇಸೀಐ ಗೆ 36 ವರ್ಷಗಳಲ್ಲಿ ಇದೇ ಪ್ರಥಮ ಬಾರಿಗೆ ಔಟ್ ಸ್ಟಾಂಡಿಂಗ್ ನ್ಯಾಷನಲ್ ಎವಾರ್ಡ್ ವಿನ್ನರ್ ಪ್ರಶಸ್ತಿ ಲಬಿಸಿರುತ್ತದೆ.
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.
Be the first to comment on "ವಿಟ್ಲ ಜೇಸಿ ಔಟ್ ಸ್ಟಾಂಡಿಂಗ್ ನ್ಯಾಷನಲ್ ಎವಾರ್ಡ್ ವಿನ್ನರ್"