ಜಿಲ್ಲಾ ಸುದ್ದಿ

ಚಿಮೇನಿ ಓಪನ್ ಜೈಲಿನಲ್ಲಿ ಗೋಶಾಲೆ ಉದ್ಘಾಟನೆ

  • ರಾಮಚಂದ್ರಾಪುರ ಮಠದಿಂದ 20 ಗೋವುಗಳ ಕೊಡುಗೆ
ಶ್ರೀರಾಮಚಂದ್ರಾಪುರ ಮಠದಕಾಮದುಘಾ ಯೋಜನೆಯ ಗೋಸಂರಕ್ಷಣ ಅಭಿಯಾನದ ಪರಿಣಾಮವಾಗಿ ಕಾಸರಗೋಡು ಜಿಲ್ಲೆಯ ಚಿಮೇನಿ ಓಪನ್ ಜೈಲಿನಲ್ಲಿ ದೇಸೀ ಗೋಶಾಲೆ ಆರಂಭವಾಗಿದೆ.


ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳವರು ಬುಧವಾರ ಈ ಗೋಶಾಲೆಗೆ ತೆರಳಿ ೪ ಕಾಸರಗೋಡುಗಿಡ್ಡ ತಳಿಗಳನ್ನು ಜೈಲಿನ ಸುಪರಿಂಟೆಂಡೆಂಟ್ ಸುರೇಶ್‌ಎ.ಜಿ. ಅವರಿಗೆ ನೀಡಿ ಉದ್ಘಾಟಿಸಿದರು.  ಬಳಿಕ ಜೈಲಿನ ಅಧಿಕಾರಿಗಳೊಂದಿಗೆ ಸಂವಾದ ನಡೆಸಿದ ರಾಘವೇಶ್ವರ ಶ್ರೀಗಳು ಇದು ಕಾರಾಗೃಹವಲ್ಲ. ಕೈದಿಗಳ ಮನಃಪರಿವರ್ತನಾ ಕೇಂದ್ರವಾಗಿದೆ. ಕೈದಿಗಳಿಗೆ ಗುರುಕುಲವಾಗಿದೆ .ಗೋವನ್ನು ನಾವು ಸಾಕಿದರೆ ಗೋವು ನಮ್ಮನ್ನು ಸಾಕುತ್ತದೆ ಎಂದು ಹಾರೈಸಿದರು.
ಈ ಜೈಲಿನಲ್ಲಿ ಅಧಿಕಾರಿಗಳು 100 ಗೋವುಗಳಿರುವ ಗೋಶಾಲೆಯನ್ನು ನಿರ್ಮಿಸಲುಯೋಜನೆ ರೂಪಿಸಿದ್ದಾರೆ. ಆ ಸಂದರ್ಭ 100 ಗೋವುಗಳನ್ನು ಮಠದಿಂದ ಒದಗಿಸಲಾಗುವುದು ಎಂದು ಶ್ರೀಗಳು ತಿಳಿಸಿದರು.
ಕಾಮದುಘಾ ಕಾರ್ಯದರ್ಶಿ ಡಾ| ವೈ.ವಿ.ಕೃಷ್ಣಮೂರ್ತಿ ಅವರು ಮಾತನಾಡಿ ಈ ಗೋಶಾಲೆಯಲ್ಲಿ 20 ಗೋವುಗಳಿಗೆ ಅವಕಾಶವಿದೆ. ಇಂದು ಮಠದಿಂದ ಸಾಂಕೇತಿವಾಗಿ ೪ ಗೋವುಗಳನ್ನು  ನೀಡಲಾಗುತ್ತಿದೆ. ಉಳಿದ 16 ಗೋವುಗಳನ್ನು ಕೆಲವೇ ದಿನಗಳಲ್ಲಿ ಒದಗಿಸಲಾಗುವುದುಎಂದು ತಿಳಿಸಿದರು.

ಅಧಿಕಾರಿಗಳಾದ ಜಗದೀಶನ್, ಪೋತಲಖಂಡ ಆನಂದಾಶ್ರಮದ ಶ್ರೀ ಕೃಷ್ಣಾನಂದ ಸ್ವಾಮೀಜಿ, ಕಾಮದುಘಾತಂಡದ ಸದಸ್ಯರು ಉಪಸ್ಥಿತರಿದ್ದರು.
ಹಿನ್ನೆಲೆ :
ಕ್ರಿಮಿನಲ್‌ಅಪರಾಧವೆಸಗಿ, ದೀರ್ಘಜೈಲುವಾಸ ಅನುಭವಿಸಿ, ಮನಃಪರಿವರ್ತನೆಗಾಗಿ ಕೈದಿಗಳು ಈ ಓಪನ್ ಜೈಲಿನಲ್ಲಿದ್ದಾರೆ, ಒಟ್ಟು ೩೦೦ ಎಕರೆ ಜಾಗವಿದ್ದು ಸುಮಾರು ೧೦ ಎಕರೆ ಭೂಮಿಯಲ್ಲಿ ಗೋಆಧಾರಿತ ಕೃಷಿ ಚಟುವಟಿಕೆ ನಡೆಸಲಿದ್ದಾರೆ. ಇಲ್ಲಿರುವ ಕೈದಿಗಳು ತರಕಾರಿ ಇನ್ನಿತರ ಕೃಷ್ಯುತ್ಪನ್ನಗಳನ್ನು ಬೆಳೆಸಲಿದ್ದಾರೆ. ಕೃಷಿಗೆ ಪೂರಕವಾಗಿ, ಶ್ರೀರಾಮಚಂದ್ರಾಪುರ ಮಠದಗೋಕ್ರಾಂತಿಯಿಂದ ಪ್ರಭಾವಿತಗೊಂಡ ಅದಿಕಾರಿಗಳು ಇಲ್ಲಿ ಗೋಶಾಲೆ ನಿರ್ಮಿಸಲು ಸಿದ್ಧರಾದರು. ಅದರಂತೆ ಕೈದಿಗಳೇ ಇಲ್ಲಿ ಗೋಶಾಲೆ ನಿರ್ಮಿಸಿದ್ದಾರೆ.
ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts