ಬಂಟ್ವಾಳ

600 ಪ.ಜಾ, ಪಪಂ ಫಲಾನುಭವಿಗಳಿಗೆ ಉಚಿತ ಅಡುಗೆ ಅನಿಲ ಸೌಲಭ್ಯ

  • ಸಚಿವ ಬಿ.ರಮಾನಾಥ ರೈ ನೇತೃತ್ವದಲ್ಲಿ ಅರಣ್ಯ ಇಲಾಖೆಯಿಂದ ವಿತರಣೆ
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬ್ರಹ್ಮಶ್ರೀ ನಾರಾಯಣ ಗುರುಮಂದಿರದಲ್ಲಿ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಅವರ ಅರಣ್ಯ ಇಲಾಖೆ ವತಿಯಿಂದ ವಿಶಿಷ್ಠ ಕಾರ್‍ಯಕ್ರಮ ಶುಕ್ರವಾರ ದಿನವಿಡೀ ನಡೆಯಲಿದೆ.
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಫಲಾನುಭವಿಗಳಿಗೆ ಉಚಿತ ಅಡುಗೆ ಅನಿಲ ಸಿಲಿಂಡರ್ ವಿತರಿಸುವ ಕಾರ್‍ಯಕ್ರಮ ಇದು.
ಅರಣ್ಯದ ಅಂಚಿನಲ್ಲಿರುವ ಜನರಿಗೆ ಸೌಲಭ್ಯ ಒದಗಿಸುವ ಉದ್ದೇಶದಿಂದ ವಿವಿಧ ಯೋಜನೆಯಡಿ ಇಲಾಖೆ ಸಿಲಿಂಡರ್ ವಿತರಿಸುತ್ತದೆ. ಬಂಟ್ವಾಳ ವಲಯ ವ್ಯಾಪ್ತಿಯಲ್ಲಿ ಸುಮಾರು ೬೦೦ ಫಲಾನುಭವಿಗಳು ಇದ್ದು, ಇವರ ದಾಖಲೆಗಳನ್ನು ಶುಕ್ರವಾರ ಬೆಳಗ್ಗೆಯಿಂದ ಮಧ್ಯಾಹ್ನದವರೆಗೆ ಪರಿಶೀಲಿಸಲಾಗುವುದು ಎಂದು ಆರ್.ಎಫ್.ಒ. ಸುರೇಶ್ ಮಾಹಿತಿ ನೀಡಿದ್ದಾರೆ.
ಮಂಗಳೂರು ವಿಭಾಗದಲ್ಲಿ ೨ ಸಾವಿರ ಫಲಾನುಭವಿಗಳು ಇದ್ದು, ಬಂಟ್ವಾಳ ತಾಲೂಕಿನ ೪೪ ಪಂಚಾಯಿತಿಗಳಲ್ಲಿ ಆಯಾ ಸ್ಥಳೀಯ ಸಂಸ್ಥೆಗಳು, ಜನಪ್ರತಿನಿಧಿಗಳು ಆಯ್ಕೆ ಮಾಡುತ್ತಾರೆ. ಈಗ ಆಯ್ಕೆಯಾದ ಫಲಾನುಭವಿಗಳು ಶುಕ್ರವಾರ ದಾಖಲೆಗಳನ್ನ ನೀಡುವರು. ಅಪರಾಹ್ನ ೩ ಗಂಟೆಗೆ ಸಚಿವ ಬಿ.ರಮಾನಾಥ ರೈ ಸಾಂಕೇತಿಕವಾಗಿ ಅಡುಗೆ ಅನಿಲ ವಿತರಿಸುವರು.
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ