ಬಂಟ್ವಾಳ

ಉರುಳಿದ ಕಾರು, ವಿಟ್ಲದ ಅರ್ಚಕ ಸ್ಥಳದಲ್ಲೇ ಸಾವು

ಬಂಟ್ವಾಳ ಎಸ್.ವಿ.ಎಸ್. ಕಾಲೇಜು ರಸ್ತೆಯ ವೈದ್ಯನಾಥ ದೇವಸ್ಥಾನ ಬಳಿ ಜಂಕ್ಷನ್ ಪಕ್ಕ 40 ಅಡಿ ಆಳಕ್ಕೆ ಗುರುವಾರ ರಾತ್ರಿ ಫಾರ್ಚೂನರ್ ವಾಹನವೊಂದು ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದು, ಚಾಲಕ ವಿಟ್ಲ ನಿವಾಸಿ, ಅನಂತೇಶ್ವರ ದೇವಳ ಅರ್ಚಕ ಕಾರ್ತಿಕ್ ಭಟ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

www.bantwalnews.com report

ಜಾಹೀರಾತು

ಕಟೀಲು ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಿ ಮನೆಗೆ ಮರಳುತ್ತಿದ್ದಾಗ ಈ ಘಟನೆ ಸಂಭವಿಸಿದೆ. ವಾಹನದಲ್ಲಿ ಕಾರ್ತಿಕ್ ಅವರ ತಂದೆ ವಿಜಯ ಭಟ್, ತಾಯಿ ದೀಪಾ ಭಟ್, ಮಕ್ಕಳಾದ ಅಥರ್ವ ಮತ್ತು ಆದ್ಯ ಕಾರಿನಲ್ಲಿದ್ದರು. ಇವರೆಲ್ಲ ಅಪಾಯದಿಂದ ಪಾರಾಗಿದ್ದಾರೆ.

ಬಂಟ್ವಾಳ ಟ್ರಾಫಿಕ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಎಸ್.ಐ.ಚಂದ್ರಶೇಖರಯ್ಯ ತನಿಖೆ ನಡೆಸುತ್ತಿದ್ದಾರೆ.

ಜಾಹೀರಾತು

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ