ಉಮಾಶಿವ ಕ್ಷೇತ್ರ ಭಕ್ತರಿಗೆ ನೆಮ್ಮದಿ ಕರುಣಿಸುವ ಕ್ಷೇತ್ರವಾಗಲಿ. ಗೇರುಕಟ್ಟೆ ಎಂಬುದು ಗುರುಕಟ್ಟೆ ಎಂದು ಹೊಸನಗರ ಶ್ರೀ ರಾಮಚಂದ್ರಾಪುರ ಮಠಾಧೀಶ ಶ್ರೀ ರಾಘವೇಶ್ವರ ಭಾರತೀ ಸ್ವಾಮೀಜಿ ಹೇಳಿದರು.
ಕಲ್ಲಡ್ಕದಲ್ಲಿರುವ ಶ್ರೀ ಉಮಾಶಿವ ಕ್ಷೇತ್ರಕ್ಕೆ ಭೇಟಿ ನೀಡಿದ ಅವರು ಬಳಿಕ ಭಕ್ತರನ್ನುದ್ದೇಶಿಸಿ ಮಾತನಾಡಿದರು.
ಇಲ್ಲಿ ಶಿವನ ಸಾನ್ನಿಧ್ಯವಿದೆ. ಶಿವ ಮುಕ್ತಿದಾಯಕ, ಪ್ರಳಯಕರ್ತ. ಆದುದರಿಂದ ಮುಕ್ತಿಧಾಮವೂ ಹೌದು ಎಂದು ಅವರು ಹೇಳಿದರು.
ಸೇವಾ ಸಮಿತಿ ಅಧ್ಯಕ್ಷ ರಾಕೋಡಿ ಈಶ್ವರ ಭಟ್, ಮಂಗಳೂರು ಹವ್ಯಕ ಮಂಡಲ ಅಧ್ಯಕ್ಷ ಸೇರಾಜೆ ಸುಬ್ರಹ್ಮಣ್ಯ ಭಟ್, ಕಲ್ಲಡ್ಕ ಹವ್ಯಕ ವಲಯ ಅಧ್ಯಕ್ಷ ಯು.ಎಸ್.ಚಂದ್ರಶೇಖರ ಭಟ್ ನೆಕ್ಕಿತರವು ಮೊದಲಾದವರು ಉಪಸ್ಥಿತರಿದ್ದರು.
ನಿಯಮ 377ರ ಅಡಿಯಲ್ಲಿ ಸಮುದ್ರ ತೀರದ ಪವನ ಸಾಮರ್ಥ್ಯದ ಬಗ್ಗೆ ಲೋಕಸಭೆ ಗಮನಸೆಳೆದ ಸಂಸದ ಕ್ಯಾ. ಚೌಟ (more…)