ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರಕಾರ ಪತನವಾಗಲು ಅದು ಕುಂಬಾರ ಮಾಡಿದ ಮಡಿಕೆನಾ ಎಂದು ರಾಜ್ಯ ಇಂಧನ ಸಚಿವ ಡಿ.ಕೆ. ಶಿವಕುಮಾರ್ ಹೇಳಿಕೆಗೆ ಕುಲಾಲ, ಕುಂಬಾರ ಸಂಘಟನೆಗಳು ಆಕ್ರೋಶ ವ್ಯಕ್ತ ಪಡಿಸಿದ್ದು ಕುಂಬಾರ ಸಮುದಾಯದ ಕ್ಷಮೆ ಕೇಳುವಂತೆ ಆಗ್ರಹಿಸಿದೆ.
ಸರಕಾರದ ಮಂತ್ರಿಯಾಗಿದ್ದುಕೊಂಡು ಜವಬ್ದಾರಿ ಸ್ಥಾನದಲ್ಲಿರುವ ಡಿ.ಕೆ. ಶಿವಕುಮಾರ್ ಅವರು ಇಂತಹ ಮಾತನ್ನು ಆಡಬಾರದಿತ್ತು. ಇದು ಅವರು ಎರಡನೇ ಬಾರಿ ಕುಂಬಾರ ಜನಾಂಗಕ್ಕೆ ಮಾಡಿದ ಅವಮಾನ ಎಂದು ಕರ್ನಾಟಕ ರಾಜ್ಯ ಕುಂಬಾರರ ಮಹಾಸಂಘದ ಕಾರ್ಯಾಧ್ಯಕ್ಷ ಡಾ. ಎಂ.ಅಣ್ಣಯ್ಯ ಕುಲಾಲ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಖಂಡನಾ ಹೇಳಿಕೆಯನ್ನು ಜಿಲ್ಲಾಕಾರಿಗಳ ಮೂಲಕ ಸರಕಾರಕ್ಕೆ ತಲುಪಿಸಲು ಎಲ್ಲಾ ಕರಾವಳಿ, ಕುಲಾಲ ಕುಂಬಾರ ಯುವ ವೇದಿಕೆ ಸಂಘಟನೆಗಳು ನಿರ್ಧರಿಸಿವೆ.
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. --- ಹರೀಶ ಮಾಂಬಾಡಿ, ಸಂಪಾದಕ
NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.
Be the first to commenton "ಶಿವಕುಮಾರ್ ಹೇಳಿಕೆಗೆ ಕುಲಾಲ ಸಂಘಟನೆಗಳ ಆಕ್ರೋಶ"
Be the first to comment on "ಶಿವಕುಮಾರ್ ಹೇಳಿಕೆಗೆ ಕುಲಾಲ ಸಂಘಟನೆಗಳ ಆಕ್ರೋಶ"