ಕಲ್ಲಡ್ಕ

ತುಂಬೆ ಡ್ಯಾಂ ಸಂತ್ರಸ್ತರಿಗೆ ನ್ಯಾಯೋಚಿತ ಪರಿಹಾರ ನೀಡಲು ಒತ್ತಾಯ

ತುಂಬೆ ಡ್ಯಾಂ ಸಂತ್ರಸ್ತ ರೈತರಿಗೆ ನ್ಯಾಯೋಚಿತ ಪರಿಹಾರ ನೀಡುವ ನಿಟ್ಟಿನಲ್ಲಿ ಸರಕಾರ ಸೂಕ್ತ ಕ್ರಮ ಕೈಗೊಳ್ಳಬೇಕು, ಜಿಲ್ಲೆಯ ರೈತರು ಸೂಕ್ತ ಪರಿಹಾರ ನೀಡಿದರೆ ಜಮೀನು ಬಿಟ್ಟುಕೊಡಲು ಬದ್ದರಿದ್ದಾರೆ ಎಂದು ಜಿ.ಪಂ. ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ ತುಂಬೆ ಆಗ್ರಹಿಸಿದರು.

ಮೆಲ್ಕಾರ್ ಬಿರ್ವ ಸಭಾಂಗಣದಲ್ಲಿ ನಡೆದ ತುಂಬೆ ಡ್ಯಾಂ ಸಂತ್ರಸ್ತ ರೈತರ ಹೋರಾಟ ಸಮಿತಿ ರೂಪೀಕರಣ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಪ್ರಸ್ತುತ ವರ್ಷ ತುಂಬೆ ನೂತನ ಡ್ಯಾಂನಲ್ಲಿ 5 ಮೀಟರ್ ನೀರು ಸಂಗ್ರಹಿಸಲಾಗಿದ್ದು, ಮುಳುಗಡೆ ರೈತರಿಗೆ ಪರಿಹಾರ ನೀಡಲು ೭ ಕೋಟಿ ರೂಪಾಯಿ ಬಿಡುಗಡೆಗೆ ಸರಕಾರ ಆದೇಶ ನೀಡಿದೆ ಎಂದರು. ಸಭೆಯಲ್ಲಿ ಪುರಸಭಾಧ್ಯಕ್ಷ ಪಿ ರಾಮಕೃಷ್ಣ ಆಳ್ವ, ಉಪಾಧ್ಯಕ್ಷ ಮುಹಮ್ಮದ್ ನಂದರಬೆಟ್ಟು, ಸದಸ್ಯ ಲೋಲಾಕ್ಷ, ಮಾಜಿ ಸದಸ್ಯ ಹಾಜಿ ಪಿ. ಮುಹಮ್ಮದ್ ರಫೀಕ್, ಬಂಟ್ವಾಳ ತಾ ಪಂ ಉಪಾಧ್ಯಕ್ಷ ಬಿ ಎಂ ಅಬ್ಬಾಸ್ ಅಲಿ, ಎಪಿಎಂಸಿ ಸದಸ್ಯರಾದ ಕೆ ಪದ್ಮನಾಭ ರೈ, ದಿವಾಮಕರ ಪಂಬದಬೆಟ್ಟು, ಸಜಿಪಮುನ್ನೂರು ಗ್ರಾ ಪಂ ಅಧ್ಯಕ್ಷ ಮುಹಮ್ಮದ್ ಶರೀಫ್ ನಂದಾವರ, ಸದಸ್ಯರಾದ ಯೂಸುಫ್ ಕರಂದಾಡಿ, ಕಬೀರ್ ಗಡಿಯಾರ, ಮಾಜಿ ಸದಸ್ಯ ಪರಮೇಶ್ವರ, ಕಳ್ಳಿಗೆ ಗ್ರಾ ಪಂ ಸದಸ್ಯ ಮಧುಸೂಧನ್ ಶೆಣೈ, ಕಿಸಾನ್ ಕೇತ್ ಕಾಂಗ್ರೆಸ್ ವಲಯ ಸಮಿತಿ ಸದಸ್ಯ  ಮನೋಜ್ ಆಳ್ವ ಮೊದಲಾದವರು ಭಾಗವಹಿಸಿದ್ದರು. ಪರಿಹಾರ ಸಮಿತಿ ಅಧ್ಯಕ್ಷರಾಗಿ ಯೂಸುಫ್ ಕರಂದಾಡಿ

ಜಾಹೀರಾತು

ಇದೇ ವೇಳೆ ತುಂಬೆ ಡ್ಯಾಂ ಮುಳುಗಡೆ ಸಂತ್ರಸ್ತರ ಪರಿಹಾರ ಸಮಿತಿಯನ್ನು ರಚಿಸಲಾಯಿತು. ಅಧ್ಯಕ್ಷರಾಗಿ ಯೂಸುಫ್ ಕರಂದಾಡಿ ಅವರನ್ನು ಸರ್ವಾನುಮತದಿಂದ ಆರಿಸಲಾಯಿತು. ಉಪಾಧ್ಯಕ್ಷರುಗಳಾಗಿ  ಎಂ ಪರಮೇಶ್ವರ, ದಿವಾಕರ ಪಂಬದಬೆಟ್ಟು, ಪ್ರಧಾನ ಕಾರ್ಯದರ್ಶಿಯಾಗಿ ಪಿ ರಾಮಕೃಷ್ಣ ಆಳ್ವ, ಜೊತೆ ಕಾರ್ಯದರ್ಶಿಯಾಗಿ ಕೆ ಎಂ ಅಬ್ದುಲ್ ರಹಿಮಾನ್, ಪತ್ರಿಕಾ ಕಾರ್ಯದರ್ಶಿಯಾಗಿ ಅಹ್ಮದ್ ಕಬೀರ್, ಕೋಶಾಕಾರಿಯಾಗಿ ರಾಜಾ ಬಂಟ್ವಾಳ ಅವರನ್ನು ಆರಿಸಲಾಯಿತು. ಸದಸ್ಯರಾಗಿ ಬಾಲಕೃಷ್ಣ ಕಲ್ಯಾರು, ದಿನೇಶ್ ರೈ, ಮನೋಹರ ಕುಡಿಕೆಲ್ಲಯಾಕೋಡಿ, ರಾಧಾಕೃಷ್ಣ ಪೆರಿಯೋಡಿಬೀಡು, ಸುರೇಶ ಗಟ್ಟಿ ಅರಮನೆಹಿತ್ಲು, ಪ್ರಕಾಶ ಆಚಾರ್ಯ ನಂದಾವರ, ಚಿತ್ರಾಕ್ಷಿ ಹೊಸಮನೆ, ಜಯಂತ ಪೂಜಾರಿ ಕಲ್ಯಾರು ಅವರನ್ನು ನೇಮಿಸಲಾಯಿತು.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts