bantwalnews.com report
ವಿಟ್ಲ – ಪುತ್ತೂರು ರಸ್ತೆಯ ಕಲ್ಲಕಟ್ಟ ಎಂಬಲ್ಲಿ ಭಾನುವಾರ ಮಧ್ಯರಾತ್ರಿ ಸಂಭವಿಸಿದ ಅಪಘಾತವೊಂದರಲ್ಲಿ ಯುವಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಬಂಟ್ವಾಳ ತಾಲೂಕು ಕಾವಳಪಡೂರು ಗ್ರಾಮದ ಕರೆಂಕಿ ಎಂಬಲ್ಲಿನ ನಿವಾಸಿ ಪುಷ್ಪರಾಜ್ (20) ಮೃತಪಟ್ಟವರು.
ಸಮೀಪದಲ್ಲಿ ಬೀಗರ ಔತಣ ಮುಗಿಸಿ ಮರಳುತ್ತಿದ್ದಾಗ ಈ ಘಟನೆ ಸಂಭವಿಸಿದೆ.ಪುಷ್ಪರಾಜ್ ಚಲಾಯಿಸುತ್ತಿದ್ದ ಬೈಕ್ ಕಲ್ಲಕಟ್ಟ ಸಮೀಪ ಮನೆಯೊಂದಕ್ಕೆ ನುಗ್ಗಿತು. ಈ ಸಂದರ್ಭ ಕಿಟಕಿಯ ಮೇಲಿನ ಸ್ಲ್ಯಾಬ್ ಗೆ ಅವರ ತಲೆ ಬಡಿದು ತೀವ್ರ ಗಾಯಗೊಂಡ ಅವರು ಸ್ಥಳದಲ್ಲೇ ಅಸು ನೀಗಿದರು. ವಿಟ್ಲ ಠಾಣಾ ಎಸ್.ಐ. ನಾಗರಾಜ್ ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

Be the first to comment on "ಬೈಕ್ ಅಪಘಾತ, ಯುವಕ ಸಾವು"