ವಿಶ್ವಕ್ಕೆ ದೊಡ್ಡ ಧರ್ಮಚಾವಡಿ ಭಾರತ: ಒಡಿಯೂರು ಸ್ವಾಮೀಜಿ

ಜನ, ಮನ, ಹಣ ಪರಿಶುದ್ಧವಾದರೆ ಮಾತ್ರ ಪರಿಶುದ್ಧವಾದ ಸಮಾಜ ನಿರ್ಮಾಣ ಸಾಧ್ಯ, ವಿಶ್ವಕ್ಕೇ ದೊಡ್ಡ ಧರ್ಮಚಾವಡಿ ಭಾರತ ಎಂದು ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿ ಹೇಳಿದರು.

ಸೋಮವಾರ ಒಡಿಯೂರು ರಥೋತ್ಸವ, ತುಳುನಾಡ ಜಾತ್ರೆ 2017 ಧರ್ಮಸಭೆಯಲ್ಲಿ ಅವರು ಆಶೀರ್ವಚನ ನೀಡಿದರು.

ಜಾಹೀರಾತು

ಎಲ್ಲಿ ಸಹಕಾರ ಇಲ್ಲವೋ ಅಲ್ಲಿ ಶಸ್ತ್ರಕ್ರಿಯೆ ಆಗಬೇಕು. ನ್ಯಾಯ ಧರ್ಮಸೂಕ್ಷ್ಮತೆಯಿಂದ ಕೂಡಿರಬೇಕು. ಧರ್ಮಸೂಕ್ಷ್ಮತೆ ಅರಿತು ನ್ಯಾಯಾಧೀಶರೂ ತೀರ್ಪು ನೀಡಬೇಕು. ಕಠಿಣವಾದ ಕಾನೂನುಗಳು ಬರಬೇಕು ಎಂದ ಅವರು  ಒಡಿಯೂರಿನ ಸಂಘಟನೆಗಳು ಸಾಗರೋತ್ತರ ತಲುಪಲು ಸಹಕಾರ ಬೇಕು ಎಂದು ಹೇಳಿದರು.

ಮನುಷ್ಯನ ಬದುಕು ಕ್ರಿಯಾಶೀಲವಾದರೆ ಸಂಸ್ಕಾರಯುವ ಬದುಕು ರೂಪಿಸಬೇಕು. ಕ್ರಿಯಾಶೀಲತೆ ಇಲ್ಲದಿದ್ದರೆ ಬದುಕು ಇಲ್ಲ. ಬದುಕು ನಿರಂತರವಾಗಿ ಹರಿಯುವ ನದಿಯ ನೀರಿನಂತೆ ಆಗಬೇಕು. ಅದಕ್ಕಾಗಿ ಸಂಸ್ಕಾರ ಬೇಕು. ದೇವರ ರಥವನ್ನು ನಾವೆಲ್ಲರೂ ಸೇರಿ ಎಳೆಯಬಹುದು. ಆದರೆ ನಮ್ಮ ದೇಹದಲ್ಲಿರುವ ರಥವನ್ನು ನಾವೇ ಎಳೆಯಬೇಕು, ಧರ್ಮ, ಅರ್ಥ, ಕಾಮ, ಮೋಕ್ಷ ಎಂಬ ನಾಲ್ಕು ಚಕ್ರಗಳು ಬದುಕಿನ ತೇರನ್ನು ಎಳೆಯಲು ಸಾಧ್ಯ ಎಂದರು.

ಜಾಹೀರಾತು

ರಾಷ್ಟ್ರ ಎಂದರೆ ನಮ್ಮ ಸಂಸ್ಕೃತಿ. ಅದರ ಬಗ್ಗೆ ಒಲವು ಇದೆ ಎಂದಾದರೆ ನಮ್ಮ ಬದುಕೂ ಚೆನ್ನಾಗಿರುತ್ತದೆ. ಧರ್ಮದ ಸಂರಕ್ಷಣೆ ನಮ್ಮ ಕರ್ತವ್ಯ ಎಂದಾದರೆ ಸಮಾಜ ಅಭಿವೃದ್ಧಿಯಾಗುತ್ತದೆ. ಒಡಿಯೂರು ರಥೋತ್ಸವ ಎಂದರೆ ಧರ್ಮ, ಸಂಸ್ಕೃತಿಯ ಜಾಗೃತಿ. ನಮ್ಮಲ್ಲಿ ಸೇವಾ ಮನೋಭಾವನೆಯನ್ನು ಮರೆಯಬಾರದು, ಯುವ ಶಕ್ತಿ ಜಾಗೃತವಾದಾಗ ಇದು ಸಾಧ್ಯ ಎಂದರು.

ಗ್ರಾಮ ವಿಕಾಸ ಕ್ಷೇತ್ರ ವಿಸ್ತಾರ: ಒಡಿಯೂರು ಗ್ರಾಮವಿಕಾಸ ಯೋಜನೆ ಇನ್ನೂ ವಿಸ್ತಾರವಾಗಿ ಬೆಳೆಸಬೇಕು ಎಂದು ವೇದಿಕೆಯಲ್ಲಿದ್ದ ಅತಿಥಿಗಳು ಕೋರಿಕೊಂಡ ಮಾತಿಗೆ ಮನ್ನಣೆ ನೀಡಿದ ಶ್ರೀಗಳು, ತುಳುನಾಡು ವ್ಯಾಪ್ತಿಯಿಡೀ ಗ್ರಾಮ ವಿಕಾಸ ಬೆಳೆಯಬೇಕು, ಸಾಗರೋತ್ತರ ಗುರುಸೇವಾ ಘಟಕಗಳೂ ಸ್ಥಾಪನೆಯಾಗಲು ಕಾರ್ಯಕರ್ತರು ಸನ್ನದ್ಧರಾಗಿದ್ದಾರೆ ಎಂದರು.

ಆಧ್ಯಾತ್ಮ ಅರಸಿ ಬರುವವರಿಗೆ ಆಧ್ಯಾತ್ಮ ಭವನ ನಿರ್ಮಿಸುವುದು ಹಾಗೂ ಹನುಮಗಿರಿಯಲ್ಲಿ ಆರೋಗ್ಯಧಾಮ ನಿರ್ಮಾಣದ ಯೋಜನೆಗಳನ್ನು ಸ್ವಾಮೀಜಿ ಪ್ರಸ್ತಾಪಿಸಿದರು.

ಜಾಹೀರಾತು

ಪ್ರಧಾನ ಉಪನ್ಯಾಸ ನೀಡಿದ ವಿದ್ವಾನ್ ಹಿರಣ್ಯ ವೆಂಕಟೇಶ್ವರ ಭಟ್ ಮಾತನಾಡಿ, ಸಂಸ್ಕೃತಿ ಮತ್ತು ಧರ್ಮ ಒಂದೇ ಆಗಿದ್ದು, ಭಾರತೀಯ ಜೀವನದಲ್ಲೇ ಹಾಸುಹೊಕ್ಕಾಗಿವೆ. ಸಮಾಜ ಮತ್ತು ಸಮಜ ಶಬ್ದಗಳೂ ನಿಕಟವಿದೆ. ಮನುಷ್ಯ ಉತ್ತಮ ಸಂಸ್ಕೃತಿನ್ನು ಹೊಂದಿರಬೇಕು ಎಂದು ಹೇಳಿದರು.

ಸಾಧ್ವಿ ಶ್ರೀ ಮಾತಾನಂದಮಯೀ , ನ್ಯಾಯಾಧೀಶ ಗೋಪಾಲಕೃಷ್ಣ ರೈ, ವೈದ್ಯ ಡಾ.ಸಿ.ಕೆ.ಬಲ್ಲಾಳ್, ಯುಎಇ ಬಂಟರ ಸಂಘ ಅಧ್ಯಕ್ಷ ಸರ್ವೋತ್ತಮ ಶೆಟ್ಟಿ, ಪುಣೆ ಬಂಟರ ಸಂಘ ಅಧ್ಯಕ್ಷ ಸಂತೋಷ್ ಶೆಟ್ಟಿ ಇನ್ನ, ಉಡುಪಿ ಒಡಿಯೂರು ಶ್ರೀ ಗುರುದೇವ ಗ್ರಾಮವಿಕಾಸ ಯೋಜನೆ ಅಧ್ಯಕ್ಷ ಕೆ.ಪ್ರಭಾಕರ ಶೆಟ್ಟಿ, ಮುಂಬೈ ಸೇವಾ ಬಳಗ ಉಪಾಧ್ಯಕ್ಷ ದಾಮೋದರ ಎಸ್. ಶೆಟ್ಟಿ, ನ್ಯಾಯಾಧೀಶ ಶಶಿಧರ ತುರುವೇಕೆರೆ, ಉದ್ಯಮಿ ಕುಸುಮಾಧರ ಶೆಟ್ಟಿ ಚೆಲ್ಯಡ್ಕ, ಕೃಷ್ಣ ಶೆಟ್ಟಿ, ವಾಮಯ್ಯ ಶೆಟ್ಟಿ, ಅಜಿತ್ ಕುಮಾರ್ ಪಂದಳ, ವಿಟ್ಲ ಸೇವಾ ಬಳಗ ಅಧ್ಯಕ್ಷ ಗಣೇಶ್ ರೈ, ಸಿದ್ದರಾಮಪ್ಪ, ಅಶೋಕ್ ಕುಮಾರ್ ಬಿಜೈ, ಜಯಂತ್ ಕೋಟ್ಯಾನ್, ನೀಲಕಂಠಪ್ಪ, ವಜ್ರಮಾತಾ ಮಹಿಳಾ ವಿಕಾಸ ಕೇಂದ್ರ ಅಧ್ಯಕ್ಷೆ ಸರ್ವಾಣಿ ಬಿ.ಶೆಟ್ಟಿ, ರೇವತಿ ಬಿ.ಶೆಟ್ಟಿ, ಸುಮಾ ರಾಜಶೇಖರ್, ರಾಧಾಕೃಷ್ಣ ಪಕಳ, ಸುಲೋಚನಾ ಜಿ.ಕೆ. ಭಟ್ ಉಪಸ್ಥಿತರಿದ್ದರು.

ನಿವೃತ್ತ ಯೋಧರಿಗೆ ಸನ್ಮಾನ

ಜಾಹೀರಾತು

ಇದೇ ಸಂದರ್ಭ ನಿವೃತ್ತ ಯೋಧರನ್ನು ಶ್ರೀಗಳು ಸನ್ಮಾನಿಸಿದರು. ಪೂವಪ್ಪ ಕಡಂಬಾರು, ಬೇತ ಗೋಪಾಲಕೃಷ್ಣ ಭಟ್, ಡಿ.ಶಿವರಾಮ ರಾವ್, ಸಂಜೀವ ಗೌಡ, ಸತೀಶ ಉಕ್ಕುಡ, ಹರೀಶ ಶೆಟ್ಟಿ, ಕೃಷ್ಣನ್ ಚೆರ್ವತ್ತೂರು, ತನಿಯಪ್ಪ ನಾಯ್ಕ್ ಗೌರವ ಸ್ವೀಕರಿಸಿದರು.

ಶ್ರೀ ಶಂಕರ ಟಿ.ವಿ.ಯಲ್ಲಿ ಒಡಿಯೂರು ಕ್ಷೇತ್ರಕ್ಕೆ ಸಂಬಂಧಿಸಿ ಪ್ರಸಾರವಾದ ಧಾರಾವಾಹಿಯ ಡಿವಿಡಿಯನ್ನು ಶ್ರೀಗಳಿಗೆ ಸಮರ್ಪಿಸಲಾಯಿತು. ಈ ಸಂದರ್ಭ ಸಾಹಿತಿಪತ್ರಕರ್ತ ಲಕ್ಷ್ಮೀ ಮಚ್ಚಿನ, ಚಿತ್ರೀಕರಣ ಮಾಡಿದ ಕೃಷ್ಣಕಾಂತ ಕಿಣಿ ಅವರನ್ನು ಸನ್ಮಾನಿಸಲಾಯಿತು.

ಒಡಿಯೂರು ಶ್ರೀ ಗ್ರಾಮವಿಕಾಸ ಯೋಜನೆ ಪ್ರಧಾನ ಸಂಚಾಲಕ ತಾರಾನಾಥ ಕೊಟ್ಟಾರಿ ಸ್ವಾಗತಿಸಿದರು. ಮಾತೇಶ್ ಭಂಡಾರಿ ವಂದಿಸಿದರು. ಯಶವಂತ ವಿಟ್ಲ ಕಾರ್ಯಕ್ರಮ ನಿರೂಪಿಸಿದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ವಿಶ್ವಕ್ಕೆ ದೊಡ್ಡ ಧರ್ಮಚಾವಡಿ ಭಾರತ: ಒಡಿಯೂರು ಸ್ವಾಮೀಜಿ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*