ಬಂಟ್ವಾಳ

ದಡಾರ-ರುಬೆಲ್ಲಾ ಲಸಿಕಾ ಅಭಿಯಾನಕ್ಕೆ ಚಾಲನೆ

ವದಂತಿಗೆ ಕಿವಿಗೊಡದೆ ತಮ್ಮ ಮಕ್ಕಳಿಗೆ ದಡಾರ ಮತ್ತು ರುಬೆಲ್ಲಾ ಲಸಿಕೆಯನ್ನು ನೀಡುವ ಮೂಲಕ ಅಭಿಯಾನವನ್ನು ಯಶಸ್ವಿಗೊಳಿಸಬೇಕು ಎಂದು ಬಂಟ್ವಾಳ ತಾಲೂಕು ಪಂಚಾಯತ್ ಅಧ್ಯಕ್ಷ ಚಂದ್ರಹಾಸ ಕರ್ಕೇರ ಕರೆ ನೀಡಿದರು.

www.bantwalnews.com report

ಜಾಹೀರಾತು

ಜೋಡುಮಾರ್ಗ ಆಶ್ರಮ ಶಾಲೆಯಲ್ಲಿ ಮಂಗಳವಾರ ದಡಾರ-ರುಬೆಲ್ಲಾ ಲಸಿಕಾ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಮಾರಣಾಂತಿಕ ರೋಗವಾದ ದಡಾರ ಮತ್ತು ರುಬೆಲ್ಲಾ ಮುಕ್ತ ದೇಶವನ್ನಾಗಿಸುವ ನಿಟ್ಟಿನಲ್ಲಿ ಕೇಂದ್ರ ಹಾಗೂ ರಾಜ್ಯ ಸರಕಾರ ಈ ಅಭಿಯಾನವನ್ನು ಹಮ್ಮಿಕೊಂಡಿದೆ. ಇದರ ಪ್ರಯೋಜನ ಪಡೆದು ತಮ್ಮ ಮಕ್ಕಳನ್ನು ದಡಾರ-ರುಬೆಲ್ಲಾ ರೋಗ ಮುಕ್ತರನ್ನಾಗಿಸಬೇಕು ಎಂದು ಹೇಳಿದರು.

ಉಪಸ್ಥಿತರಿದ್ದ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಸಿಪ್ರಿಯಾನ್ ಮೀರಾಂದ ಮಾತನಾಡಿ, ಇಂದಿನ ಮಕ್ಕಳು ದೇಶದ ಭವಿಷ್ಯದ ಸಂಪತ್ತಾಗಿದ್ದು, ಅವರ ಆರೋಗ್ಯ ದೇಶದ ಭವಿಷ್ಯವನ್ನು ನಿರ್ಧರಿಸಲಿದೆ. ಆದ್ದರಿಂದ ದಡಾರ ಮತ್ತು ರುಬೆಲ್ಲಾ ಕಾಯಿಲೆಗಳಿಂದ ಮಕ್ಕಳನ್ನು ಮುಕ್ತಗೊಳಿಸಲು ಸರಕಾರ ಹಮ್ಮಿಕೊಂಡಿರುವ ಈ ಲಸಿಕಾ ಅಭಿಯಾನದ ಯಶಸ್ವಿಗೆ ಸಮಾಜ ಪ್ರತೀಯೊಬ್ಬರು ಕೈಜೋಡಿಸಬೇಕು ಎಂದು ಕರೆ ನೀಡಿದರು.

ಬಂಟ್ವಾಳ ತಾಲೂಕು ಆರೋಗ್ಯಾಧಿಕಾರಿ ಡಾ. ದೀಪಾ ಪ್ರಭು ದಡಾರ ಮತ್ತು ರುಬೆಲ್ಲಾ ಕಾಯಿಲೆ ಹಾಗೂ ಲಸಿಕೆಯ ಕುರಿತು ಪ್ರಾಸ್ತಾವಿಕವಾಗಿ ಮಾತನಾಡಿದರು.

ಜಾಹೀರಾತು

ಆಶ್ರಮ ಶಾಲೆಯ ಮುಖ್ಯಸ್ಥ ಪ್ರಸಾದ್ ಉಪಸ್ಥಿತರಿದ್ದರು.

 

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ