ಬಂಟ್ವಾಳ

ಬಂಟ್ವಾಳ ಬಂಟರ ಭವನದಲ್ಲಿ ಬಂಟರ ಸಮಾಗಮ 2017

www.bantwalnews.com

 

ನಾವೆಷ್ಟು ಬೆಳೆದರೂ ಪ್ರೀತಿ, ವಿಶ್ವಾಸ, ವಿವೇಕದಿಂದ ಕೆಲಸ ಮಾಡಬೇಕು ಎಂದು ಹಿರಿಯ ಸಾಹಿತಿ ಏರ್ಯ ಲಕ್ಷ್ಮೀನಾರಾಯಣ ಆಳ್ವ ಹೇಳಿದ್ದಾರೆ. ಬಂಟ್ವಾಳದ ಬಂಟರ ಭವನದಲ್ಲಿ ಮಂಗಳವಾರ ನಡೆದ ಇಂಟರ್‌ನ್ಯಾಷನಲ್ ಬಂಟ್ಸ್ ವೆಲ್‌ಫೇರ್ ಟ್ರಸ್ಟ್‌ನ ಮೂರನೇ ವರ್ಷದ ಬಂಟ ಸಮಾಗಮ 2017 ಸಮಾರೋಪ ಸಮಾರಂಭದಲ್ಲಿ ಸದಾಶಯ ತ್ರೈಮಾಸಿಕ ವಿಶೇಷಾಂಕವನ್ನು ಅನಾವರಣಗೊಳಿಸಿ ಮಾತನಾಡಿದರು.

ಜಾಹೀರಾತು

ಪುತ್ತೂರು ಶಾಸಕ ಶಕುಂತಳಾ ಶೆಟ್ಟಿ ಮಾತನಾಡಿ, ಜಿಲ್ಲೆಯ ಜಾನಪದ ಕ್ರೀಡೆ ಕಂಬಳ ಹಾಗೂ ನೇತ್ರಾವತಿ ನದಿಯನ್ನು ಉಳಿಸುವ ನಿಟ್ಟಿನಲ್ಲಿ ನಮ್ಮೆಲ್ಲರ ಸ್ವರವು ಒಂದಾಗಬೇಕು. ತನ್ಮೂಲಕವಾಗಿ ಈ ಎರಡನ್ನೂ ಶಾಶ್ವತವಾಗಿ ಉಳಿಸುವ ಕೆಲಸ ಆಗಬೇಕೆಂದರು.

ವೇದಿಕೆಯಲ್ಲಿ ಉದ್ಯಮಿಗಳಾದ ಡಾ. ಎ.ಜೆ. ಶೆಟ್ಟಿ, ಡಾ. ಭಾಸ್ಕರ ಶೆಟ್ಟಿ, ಡಾ. ಸರ್ವೋತ್ತಮ ಶೆಟ್ಟಿ ಅಬುದಾಬಿ, ಪಾದೆ ಅಜಿತ್ ರೈ, ವಿಜಯನಾಥ ವಿಠಲ ಶೆಟ್ಟಿ, ಗುರ್ಮೆ ಸುರೇಶ್ ಶೆಟ್ಟಿ, ನಗ್ರಿ ರೋಹಿತ್ ಶೆಟ್ಟಿ, ಮೂಡಬಿದ್ರೆ ಆಳ್ವಾಸ್ ಶಿಕ್ಷಣ ಸಂಸ್ಥೆಯ ಮುಖ್ಯಸ್ಥ ಡಾ. ಮೋಹನ ಆಳ್ವ, ಬಂಟ್ವಾಳ ಬಂಟರ ಸಂಘದ ಅಧ್ಯಕ್ಷ ವಿವೇಕ್ ಶೆಟ್ಟಿ, ಪ್ರಗತಿಪರ ಕೃಷಿಕ ರಾಜೇಶ್ ನಾಯಕ್ ಉಳಿಪಾಡಿಗುತ್ತು, ಮುಂಬಯಿ ಬಂಟರ ಸಂಘದ ಅಧ್ಯಕ್ಷ ಎಲ್. ಪ್ರಭಾಕರ ಶೆಟ್ಟಿ, ಬೆಂಗಳೂರು ಬಂಟರ ಸಂಘದ ಅಧ್ಯಕ್ಷ ಚಂದ್ರಹಾಸ ರೈ, ಪೂನಾ ಬಂಟರ ಸಂಘದ ಅಧ್ಯಕ್ಷ ಸಂತೋಷ್ ಶೆಟ್ಟಿ, ಸಂಗೀತ ನಿರ್ದೇಶಕ ಗುರುಕಿರಣ್, ಅದಾನಿ ಯುಪಿಸಿಎಲ್‌ನ ಕಾರ್ಯನಿರ್ವಾಹಕ ನಿರ್ದೇಶಕ ಕಿಶೋರ್ ಆಳ್ವ, ಮಾಜಿ ಶಾಸಕ ಅಪ್ಪಣ್ಣ ಹೆಗ್ಡೆ, ಮುಂಬೈ ಸಂಘದ ಮಾಜಿ ಅಧ್ಯಕ್ಷರಾದ ಸಿ.ಎ. ಶಂಕರ ಶೆಟ್ಟಿ, ಐಕಳ ಹರೀಶ್ ಶಟ್ಟಿ, ಕರ್ನಿರೆ ವಿಶ್ವನಾಥ ಶೆಟ್ಟಿ, ರಶ್ಮಿ ಶಿಕ್ಷಣ ಸಂಸ್ಥೆಯ ಸವಣೂರು ಸೀತಾರಾಮ ರೈ, ಸುಳ್ಯ ಬಂಟರ ಯಾನೆ ನಾಡವರ ಸಂಘದ ಅಧ್ಯಕ್ಷ ಜಯಪ್ರಕಾಶ್ ರೈ, ಮುಂಬೈ ಬಂಟರ ಯಾನೆ ನಾಡವರ ಸಂಘದ ಖಜಾಂಚಿ ಸತೀಶ್ ಶೆಟ್ಟಿ, ಪ್ರಮೋದ್ ರೈ ಕೆದಂಬಾಡಿ, ಸದಾನಂದ ಶೆಟ್ಟಿ ರಂಗೋಲಿ ಬಿ.ಸಿ.ರೋಡು, ಅಭಿನಂದನ್ ಶೆಟ್ಟಿ, ಸಹ್ಯಾದ್ರಿ ಶಿಕ್ಷಣ ಸಂಸ್ಥೆಯ ಮಂಜುನಾಥ ಭಂಡಾರಿ, ನೇಮಿರಾಜ ರೈ ಬೋಳಂತೂರು, ನ್ಯಾಯವಾದಿ ಸೀತಾರಾಮ ಶೆಟ್ಟಿ, ದೇವಾನಂದ ಶೆಟ್ಟಿ ದಿಕ್ಸಿ, ಶಾಂತರಾಮ ಶೆಟ್ಟಿ ದಂಪತಿ, ಸಂತೋಷ್ ಶೆಟ್ಟಿ ಮೂಲ್ಕಿ, ಜಯಕರ ಆಳ್ವ ದಂಪತಿ, ಗೀತಾಭಾಸ್ಕರ ಶೆಟ್ಟಿ, ಸುಧಾಕರ ಶೆಟ್ಟಿ ಬಾರಕೂರು, ಪಟ್ಲ ಸತೀಶ್ ಶೆಟ್ಟಿ, ಕಿರಣ್ ಹೆಗ್ಡೆ, ತೋನ್ಸೆ ಮನೋಹರ್ ಶೆಟ್ಟಿ , ಮೈನಾ ಸದಾನಂದ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

ಟ್ರಸ್ಟ್ ಸ್ಥಾಪಕಾಧ್ಯಕ್ಷ ಸದಾನಂದ ಶೆಟ್ಟಿ ಸಭಾಧ್ಯಕ್ಷತೆ ವಹಿಸಿದ್ದರು. ಎಲ್ಲ ಸಮುದಾಯಕ್ಕೂ ಇಂಟರ್‌ನ್ಯಾಷನಲ್ ಟ್ರಸ್ಟ್ ಮೂಲಕ ಸಹಾಯ ಮಾಡಲಾಗುವುದು ಎಂದರು.

ಬೆಳಗ್ಗೆ ಸ್ಥಾಪಕಾಧ್ಯಕ್ಷ ಎ. ಸದಾನಂದ ಶೆಟ್ಟಿ ಮತ್ತು ಮೈನಾ ಶೆಟ್ಟಿ ದಂಪತಿಯವರು ದೀಪಪ್ರಜ್ವಲನೆ ಮಾಡುವ ಮೂಲಕ ಚಾಲನೆ ನೀಡಿದರು. ಬಳಿಕ ಬೋಳಂತೂರು ಗುತ್ತು ಗಂಗಾಧರ ರೈ ವೇದಿಕೆಯಲ್ಲಿ ವಿವಿಧ ಸಾಂಸ್ಕೃತಿಕ ಹಾಗೂ ಸ್ಪರ್ಧಾ ಕಾರ್ಯಕ್ರಮಗಳು ನೆರೆದ ಜನರನ್ನು ಮನರಂಜಿಸಿತು. ಮಿಸ್ಟರ್ ಬಂಟ್, ಮಿಸ್‌ಬಂಟ್, ಬಂಟ್ಸ್ ಕಪಲ್ ಸ್ಪರ್ಧೆ ನಡೆಯಿತು. ಭೂತಾಳ ಪಾಂಡ್ಯ ವೈಭವ ತುಳು ರೂಪಕ, ಪಟ್ಲ ಸತೀಶ್ ಶೆಟ್ಟಿ ಹಿಮ್ಮೇಳದೊಂದಿಗೆ ರಕ್ಷಿತ್ ಶೆಟ್ಟಿ ಪಡ್ರೆ ನಿರ್ದೇಶಿಸಿದ ಡಾ. ವರ್ಷಾ ಶೆಟ್ಟಿ ಮತ್ತು ಕು. ದೀಶಾ ಶೆಟ್ಟಿ ಅಭಿನಯದ ನೆನಪಾದಳಾ ಶಕುಂತಳಾ ಯಕ್ಷ ನಾಟ್ಯ ಪ್ರದರ್ಶನ ನಡೆಯಿತು. ಸದಾಶಯ ಸಂಪಾದಕರಾದ ಕದ್ರಿ ನವನೀತ್ ಶೆಟ್ಟಿ, ತೀರ್ಥಳ್ಳಿ ವಿಶ್ವನಾಥ ಶೆಟ್ಟಿ, ಯುವ ವಿಭಾಗದ ಅಧ್ಯಕ್ಷ ದೇವಿಚರಣ್ ಶೆಟ್ಟಿ ಮಹಿಳಾ ವಿಭಾಗದ ಅಧ್ಯಕ್ಷೆ ವಿಜಯಲಕ್ಷ್ಮೀ ಉಪಸ್ಥಿತರಿದ್ದರು.

ಮಾಜಿ ಸಚಿವ ಅಮರನಾಥ ಶೆಟ್ಟಿ ಸ್ವಾಗತಿಸಿದರು. ಸಂಘಟನಾ ಕಾರ್ಯದರ್ಶಿ ರಾಜಗೋಪಾಲ್ ರೈ ಪ್ರಾಸ್ತಾವನಗೈದರು. ಭಾಸ್ಕರ ರೈ ಕುಕ್ಕುವಳ್ಳಿ ಕಾರ್ಯಕ್ರಮ ನಿರೂಪಸಿದರು.

ಜಾಹೀರಾತು
Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.