ಭಗವಂತನ ಸೇವೆಯಲ್ಲಿ ಭಕ್ತರ ಭಾಗಿ: ಒಡಿಯೂರು ಸ್ವಾಮೀಜಿ

ಒಡಿಯೂರು ಶ್ರೀ ಗುರುದೇವ ಜ್ಞಾನಮಂದಿರದಲ್ಲಿ ಫೆ.5, 6ರಂದು ನಡೆದ ತುಳುವೆರೆ ತುಲಿಪು ಮತ್ತು ಒಡಿಯೂರು ರಥೋತ್ಸವ – ತುಳುನಾಡ ಜಾತ್ರೆ ಕಾರ್ಯಕ್ರಮಕ್ಕೆ ಸಂಬಂಧಿಸಿ ಕಾರ್ಯಕರ್ತರ ಅಭಿನಂದನಾ ಸಭೆ ಒಡಿಯೂರಿನಲ್ಲಿ ನಡೆಯಿತು.

www.bantwalnews.com report

ಜಾಹೀರಾತು

ಈ ಸಂದರ್ಭ ಆಶೀರ್ವಚನ ನೀಡಿದ ಶ್ರೀ ಗುರುದೇವಾನಂದ ಸ್ವಾಮೀಜಿ, ಕ್ಷಣಿಕವಾದ ಈ ಬದುಕಿನ ಪ್ರತಿಯೊಂದು ನಡೆಯಲ್ಲಿಯೂ ಪರೋಪಕಾರ, ನಿಸ್ವಾರ್ಥಯುಕ್ತ ಕಾರ್ಯ ಮಾಡಿದಾಗ ಮಾತ್ರ ಪರಮಾನಂದ ಪಡೆಯಲು ಸಾಧ್ಯವಿದೆ. ಉಸಿರಿರುವಾಗ ಮಾತ್ರ ಹಸಿರಾಗಿಸುವ, ಹೆಸರು ಉಳಿಯುವ ಸಾಧನೆ ಮಾಡಹುದು. ಭಕ್ತರು ತಮ್ಮ ಕರ್ತವ್ಯದಂತೆ ಒಡಿಯೂರ ರಥೋತ್ಸವದ ಸೇವೆಯಲ್ಲಿ ಸಹಭಾಗಿಗಳಾಗಿದ್ದಾರೆ. ಭಗವಂತನ ಸೇವೆಯೆಂಬ ಭಾವನೆಯಲ್ಲಿ ಪಾಲ್ಗೊಂಡಿದ್ದಾರೆ. ಶಿಸ್ತು, ಸಂಯಮವನ್ನು ಕಾಪಾಡಿಕೊಂಡು ಸ್ವಚ್ಛತೆಯ ಕಡೆಗೆ ಗಮನಹರಿಸಿರುವುದು ಈ ಬಾರಿಯ ವಿಶೇಷತೆಯೆನಿಸಿದೆ. ಯಾವುದೇ ಕಾರ್ಯಕ್ರಮಗಳಲ್ಲಿ ಸಣ್ಣಪುಟ್ಟ ಕುಂದುಕೊರತೆಗಳು ನಡೆಯುವುದು ಸಾಮಾನ್ಯವಾಗಿದೆ. ಇಂತಹ ಲೋಪಗಳು ಮುಂದಿನ ಬಾರಿ ಯಶಸ್ಸಿ ಪೂರಕವಾಗುತ್ತದೆ ಎಂದರು.

ಮುಂದಿನ ದಿನಗಳಲ್ಲಿ ಕ್ಷೇತ್ರದ ಸನಿಹದಲ್ಲಿ ಅಧ್ಯಾತ್ಮ ಭವನ ನಿರ್ಮಾಣವಾಗಲಿದೆ. ಪುಷ್ಕರಿಣಿ ನಿರ್ಮಾಣ, ತುಳು ಸಂಘಟಕರ ಸಮಾವೇಶವನ್ನು ಸಂಘಟಿಸುವ ಉದ್ದೇಶವಿದೆ ಎಂದು ತಿಳಿಸಿದರು.

ಶ್ರದ್ಧೆ ಮತ್ತು ಪರಿಶುದ್ಧ ಭಕ್ತಿಯ ರೂಪದಲ್ಲಿ ಒಡಿಯೂರು ರಥೋತ್ಸವ, ತುಳುನಾಡ ಜಾತ್ರೆ ಸಂಪನ್ನಗೊಂಡಿದೆ.  ಪ್ರತಿಯೊಂದು ವ್ಯವಸ್ಥೆಗಳಲ್ಲಿಯೂ ಅಚ್ಚುಕಟ್ಟುತನ ಇತ್ತು ಎಂದು ಶ್ರೀ ಸಂಸ್ಥಾನದ ಸಾಧ್ವಿ ಶ್ರೀ ಮಾತಾನಂದಮಯಿ ತಿಳಿಸಿದರು.

ಜಾಹೀರಾತು

ಸಭೆಯಲ್ಲಿ ನಾನಾ ಸಮಿತಿಗಳ ಪದಾಧಿಕಾರಿಗಳು ತಮ್ಮ ಅಭಿಪ್ರಾಯಗಳನ್ನು ಮಂಡಿಸಿದರು.

ಒಡಿಯೂರು ಶ್ರೀ ಗ್ರಾಮ ವಿಕಾಸ ಯೋಜನೆಯ ಪ್ರಧಾನ ಸಂಚಾಲಕ ಟಿ. ತಾರಾನಾಥ ಕೊಟ್ಟಾರಿ, ರಥೋತ್ಸವ ಸ್ವಾಗತ ಸಮಿತಿಯ ಸಂಚಾಲಕ ಜಯಂತ್ ಜೆ. ಕೋಟ್ಯಾನ್, ಒಡಿಯೂರು ಶ್ರೀ ವಿವಿಧ್ದೋದ್ದೇಶ ಸಹಕಾರಿ ಸಂಘದ ನಿರ್ದೇಶಕ ಚ್.ಕೆ.ಪುರುಷೋತ್ತಮ್, ಕ್ಷೇತ್ರದ ಕಾರ್ಯನಿರ್ವಾಹಕ ಉಗ್ಗಪ್ಪ ಶೆಟ್ಟಿ ಕೊಂಬಿಲ, ಒಡಿಯೂರು ಶ್ರೀ ವಜ್ರಮಾತಾ ಮಹಿಳಾ ವಿಕಾಸ ಕೇಂದ್ರದ ಅಧ್ಯಕ್ಷೆ ಸರ್ವಾಣಿ ಪಿ. ಶೆಟ್ಟಿ, ಪುತ್ತೂರು ಶ್ರೀ ಗುರುದೇವ ಮಹಿಳಾ  ವಿಕಾಸ ಸೇವಾ ಸಮಿತಿ ಅಧ್ಯಕ್ಷೆ ನಯನಾ ರೈ, ಪುತ್ತೂರು ಗುರುದೇವ ಸೇವಾ ಬಳಗದ ಮೋನಪ್ಪ ಶೆಟ್ಟಿ ಉಪಸ್ಥಿತರಿದ್ದರು.

ಗ್ರಾಮ ವಿಕಾಸ ಯೋಜನೆಯ ಸುರೇಶ್ ಶೆಟ್ಟಿ ಮುಗೆರೋಡಿ ಸ್ವಾಗತಿಸಿದರು. ಬೆಳ್ತಂಗಡಿ ತಾಲೂಕು ಗ್ರಾಮ ವಿಕಾಸ ಯೋಜನೆಯ ಅಧ್ಯಕ್ಷ ಯಶೋಧರ ಸಾಲಿಯಾನ್ ವಂದಿಸಿದರು. ಮಂಗಳೂರು ಒಡಿಯೂರುಶ್ರೀ ಗ್ರಾಮ ವಿಕಾಸ ಯೋಜನೆಯ ಮೇಲ್ವೀಚಾರಕ ವಿಶ್ವನಾಥ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಭಗವಂತನ ಸೇವೆಯಲ್ಲಿ ಭಕ್ತರ ಭಾಗಿ: ಒಡಿಯೂರು ಸ್ವಾಮೀಜಿ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*