ಬಂಟ್ವಾಳ

ಲೋಕ ಅದಾಲತ್: 156 ಕೇಸ್ ಇತ್ಯರ್ಥ

ತಾಲೂಕು ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ವಕೀಲ ಸಂಘ ಬಂಟ್ವಾಳ ಆಶ್ರಯದಲ್ಲಿ ಬಂಟ್ವಾಳ ಹಿರಿಯ ಸಿವಿಲ್ ನ್ಯಾಯಾಲಯ ಆವರಣದಲ್ಲಿ ನಡೆದ ರಾಷ್ಟ್ರೀಯ ಲೋಕ್ ಅದಾಲತ್‌ನಲ್ಲಿ 156 ವಿವಾದ ಪೂರ್ವ ವ್ಯಾಜ್ಯಗಳು ಇತ್ಯರ್ಥವಾಗಿದೆ ಎಂದು ವಕೀಲರ ಸಂಘದ ಪ್ರಕಟಣೆ ತಿಳಿಸಿದೆ.

ತಾಲೂಕಿನ ಸಿಂಡಿಕೆಟ್ ಬ್ಯಾಂಕಿನ 8 ಶಾಖೆಗಳ ಮುಖ್ಯಸ್ಥರು ಈ ಅದಾಲತ್‌ನಲ್ಲಿ ಭಾಗವಹಿಸಿದ್ದು ಒಟ್ಟು 1,26,34,046 ರೂಪಾಯಿ ಸಾಲ ಮರುಪಾವತಿಯಾಗಿದೆ. ಜೊತೆಗೆ ಎಸ್‌ಬಿಐ ಮತ್ತು ಕಾರ್ಪೊರೇಶನ್ ಬ್ಯಾಂಕ್‌ಗಳ ಮುಖ್ಯಸ್ಥರು ಭಾಗವಹಿಸಿದ್ದು ಗ್ರಾಹಕರ ಸಾಲ ಮರು ಪಾವತಿಯಾಗಿದೆ. ಹಾಗೆಯೇ ಹತ್ತು ಕ್ರಿಮಿನಲ್, 16 ಸಿವಿಲ್ ಪ್ರಕರಣಗಳು ಇತ್ಯರ್ಥವಾಗಿವೆ ಎಂದು ಪ್ರಕಟಣೆ ತಿಳಿಸಿದೆ.

ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶರಾದ ಚಂದ್ರಶೇಖರ್ ಯು., ಪ್ರಧಾನ ಸಿವಿಲ್ ನ್ಯಾಯಾಧೀಶರಾದ ಆರ್. ಮಹೇಶ್ ಉಪಸ್ಥಿತರಿದ್ದು ನ್ಯಾಯವಾದಿಗಳಾದ ಅಶ್ವತ್ ಎನ್. ಮತ್ತು ಚಂದ್ರಶೇಖರ ಕೆ.ವಿ. ಅವರು ಸಂಧಾನಕಾರರಾಗಿ ಭಾಗವಹಿಸಿದ್ದರು. ಸಂಘದ ಅಧ್ಯಕ್ಷ ವೆಂಕಟರಮ ಶೆಣೈ, ಪ್ರಧಾನ ಕಾರ್ಯದರ್ಶಿ ರಾಜರಾಮ ನಾಯಕ್, ಕೋಶಾಧಿಕಾರಿ ವೀರೇಂದ್ರ ಎಂ., ಗೌರವ ಸಲಹೆಗಾರ ಎಂ.ಅಶ್ವನಿ ಕುಮಾರ್ ರೈ, ಪ್ಯಾನಲ್ ವಕೀಲರಾದ ಸತೀಶ್ ಬಿ. ಮತ್ತು ಸಕೀನಾ, ಸಿಂಡಿಕೆಟ್ ಬ್ಯಾಂಕಿನ ರೀಜನಲ್ ಕಚೇರಿಯ ಹಿರಿಯ ಮೆನೇಜರ್ ಸದಾಶಿವ, ವಸೂಲಾತಿ ಅಧಿಕಾರಿ ದೇವರಾಯ ಶೆಣೈ, ಬಂಟ್ವಾಳ ಶಾಖೆಯ ಸ್ವಪ್ನ ಭಾಸ್ಕರ್ ಮೊದಲಾದವರು ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ