ವಾಮದಪದವು

ಮೂಡನಡುಗೋಡು ಗ್ರಾಮದ ಕುಜ್ಲುಬೆಟ್ಟುವಿನ ಗ್ರಾಮ ದೈವಗಳಿಗೆ ನೇಮೋತ್ಸವ

ಬಂಟ್ವಾಳ ತಾಲೂಕಿನ ಮೂಡನಡುಗೋಡು ಗ್ರಾಮದ ಕುಜ್ಲುಬೆಟ್ಟುವಿನ ಶ್ರೀ ನಾಗಬ್ರಹ್ಮ,ಶ್ರೀ ಅಣ್ಣಪ್ಪ ಪಂಜುರ್ಲಿ,ಶ್ರೀ ಕೊಡಮಣಿತ್ತಾಯ,ವ್ಯಾಘ್ರ ಚಾಮುಂಡಿ,ರಕ್ತೇಶ್ವರಿ,ಸಪರಿವಾರ ದೈವಗಳ ಗ್ರಾಮ ದೈವಸ್ಥಾನದಲ್ಲಿ ವರ್ಷಾವಧಿ ಆಶ್ಲೇಷ ಬಲಿ ಮತ್ತು ನೇಮೋತ್ಸವವು 17 ಶುಕ್ರವಾರ ಮತ್ತು 18 ಶನಿವಾರ ನಡೆಯಲಿದೆ. ಶುಕ್ರವಾರ ಪರನೀರು ನಾಗಬನದಲ್ಲಿ ಕಲಶಾಭಿಷೇಕ,ಆಶ್ಲೇಷ ಬಲಿ,ತಂಬಿಲ ಸೇವೆ ಮತ್ತು ರಕ್ತೇಶ್ವರಿ  ಮೈಸಂದಾಯ ದೈವಗಳಿಗೆ ಪರ್ವಪೂಜೆ ನಡೆದು ಮದ್ಯಾಹ್ನ ಅನ್ನಸಂತರ್ಪಣೆ ನಡೆಯಲಿದೆ,ದಿನಾಂಕ ಶನಿವಾರ ಬೆಳಿಗ್ಗೆ 10 ಗಂಟೆಗೆ ನಡ್ಯೋಡಿಗುತ್ತುವಿನಿಂದ ದೈವಗಳ ಭಂಡಾರವು ಕುಜ್ಲುಬೆಟ್ಟುವಿನ ಗ್ರಾಮ ದೈವಸ್ಥಾನಕ್ಕೆ ಬಂದು ಕಲಶಾಭಿಷೇಕ,ಪರ್ವಪೂಜೆ ನಡೆದು ಮದ್ಯಾಹ್ನ 1 ಗಂಟೆಗೆ ಅನ್ನಸಂತರ್ಪಣೆ ನಡೆಯಲಿದೆ,ಅಪರಾಹ್ನ 1 ಗಂಟೆಗೆ ರಕ್ತೇಶ್ವರಿ ಮೈಸಂದಾಯ ದೈವಗಳಿಗೆ ನೇಮೋತ್ಸವ ರಾತ್ರಿ ಗಂಟೆ 8ರಿಂದ ಕೊಡಮಣಿತ್ತಾಯ, ವ್ಯಾಘ್ರಚಾಮುಂಡಿ, ಅಣ್ಣಪ್ಪ ಪಂಜುರ್ಲಿ, ಕಲ್ಕುಡ-ಕಲ್ಲುರ್ಟಿ ಮತ್ತು ಗುಳಿಗ ದೈವಗಳಿಗೆ ನೇಮೋತ್ಸವ ನಡೆಯಲಿದೆ. ಭಗವತ್ಭಕ್ತರು ಕಾರ್‍ಯಕ್ರಮಕ್ಕೆ ಆಗಮಿಸಿ ಶ್ರೀ ದೈವ, ದೇವರುಗಳ ಸಿರಿಮುಡಿ ಗಂಧ ಪ್ರಸಾದ ಸ್ವೀಕರಿಸಿ ಗ್ರಾಮ ದೈವಗಳ ಕೃಪೆಗೆ ಪಾತ್ರರಾಗಬೇಕಾಗಿ ಎಂದು ಕ್ಷೇತ್ರದ ಆಡಳಿತ ಸಮಿತಿ ಮತ್ತು ನೇಮೋತ್ಸವ ಸಮಿತಿ ಪ್ರಕಟನೆಯಲ್ಲಿ ತಿಳಿಸಿದೆ.

ಜಾಹೀರಾತು
ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts