ಪೆರಾಜೆ ನೇರಳಕಟ್ಟೆಯಲ್ಲಿ ವಾಲಿಬಾಲ್ ಪಂದ್ಯಾಟ

ಪೆರಾಜೆ-ನೇರಳಕಟ್ಟೆಯ ಯುವ ಕೇಸರಿ ಫ್ರೆಂಡ್ಸ್ ಇದರ ಆಶ್ರಯದಲ್ಲಿ ನೇರಳಕಟ್ಟೆಯಲ್ಲಿ ಇತ್ತೀಚೆಗೆ ನಡೆದ ವಾಲಿಬಾಲ್ ಪಂದ್ಯಾಟದಲ್ಲಿ ಮಾಣಿ ಯುವಕ ಮಂಡಲ ತಂಡವು ಕೇಸರಿ ಟ್ರೋಫಿ-2017ನ್ನು ಪಡೆದುಕೊಂಡಿತು. ಕಡೇಶ್ವಾಲ್ಯದ ಶ್ರೀ ಲಕ್ಷ್ಮೀ ನರಸಿಂಹ ಗೆಳೆಯರ ಬಳಗ ತಂಡ ದ್ವಿತೀಯ ಹಾಗೂ ಸೇರಾ ಉದಯ ಯುವಕ ಮಂಡಲ ತೃತೀಯ ಸ್ಥಾನವನ್ನು ತಮ್ಮದಾಗಿಸಿಕೊಂಡಿತು.

ಮಾಣಿ ಯುವಕ ಮಂಡಲ ತಂಡದ ರೈಯಾನ್ ಪಿಂಟೋ ಆಲ್‌ರೌಂಡರ್ ಪ್ರಶಸ್ತಿ ಪಡೆದುಕೊಂಡರೆ, ತಿಲಕ ಉತ್ತಮ ಎತ್ತುಗಾರ, ಹಾಗೂ ಕಡೇಶ್ವಾಲ್ಯ ತಂಡದ ಹರ್ಷಿತ್ ಉತ್ತಮ ಹೊಡೆತಗಾರ ಪ್ರಶಸ್ತಿಗಳನ್ನು ತಮ್ಮದಾಗಿಸಿಕೊಂಡರು.

ಜಾಹೀರಾತು

ಪೆರಾಜೆ ಯುವ ವೇದಿಕೆ ಸಂಚಾಲಕ ರಾಜಾರಾಮ್ ಕಾಡೂರು ಪಂದ್ಯಾಕೂಟವನ್ನು ಉದ್ಘಾಟಿಸಿದರು. ನೆಟ್ಲಮುಡ್ನೂರು ಗ್ರಾ.ಪಂ. ಸದಸ್ಯ ಲತೀಫ್ ನೇರಳಕಟ್ಟೆ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ನೆಟ್ಲಮುಡ್ನೂರು ಗ್ರಾ.ಪಂ. ಸದಸ್ಯ ಡಿ. ತನಿಯಪ್ಪ ಗೌಡ, ಡಾ. ವೈ. ಗಣರಾಜ್ ಎಲ್ಕಣ, ನೇರಳಕಟ್ಟೆ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಗೌರವಾಧ್ಯಕ್ಷ ವೆಂಕಪ್ಪ ರೈ ಕುರ್ಲೆತ್ತಿಮಾರು, ನೇರಳಕಟ್ಟೆ ಸಹಕಾರಿ ಸಂಘದ ನಿರ್ದೇಶಕ ಶ್ರೀನಿವಾಸ ಪೂಜಾರಿ, ನೇರಳಕಟ್ಟೆ ಶ್ರೀ ದುರ್ಗಾ ಪರಮೇಶ್ವರಿ ಭಜನಾ ಮಂದಿರದ ಅಧ್ಯಕ್ಷ ವಾಮನ ಕುಲಾಲ್, ಗಣೇಶನಗರ ಯಂಗ್ ಚಾಲೆಂಜರ್‍ಸ್ ಕಾರ್ಯದರ್ಶಿ ಮೋಹನ್ ಜೆ.ಎಂ., ಮೋಹನ್ ಕುಲಾಲ್ ಪೆರಾಜೆ, ಮಾಣಿ ಗ್ರಾ.ಪಂ. ಸದಸ್ಯ ಸುದೀಪ್ ಕುಮಾರ್ ಶೆಟ್ಟಿ, ಬೇಬಿ ನಾಕ್ ಬಿಎಸ್‌ಎನ್‌ಎಲ್, ದಲಿತ ಸೇವಾ ಸಮಿತಿ ಜಿಲ್ಲಾ ಸಂಚಾಲಕ ಗೋಪಾಲ ಮೊದಲಾದವರು ಭಾಗವಹಿಸಿದ್ದರು.

ಫ್ರೆಂಡ್ಸ್ ಪದಾಕಾರಿಗಳಾದ ದಿನೇಶ್, ದೀಪಕ್, ಪ್ರಶಾಂತ, ಮಹೇಶ್, ಅಜಯ್, ಎಂ. ದೀಪಕ್, ನಾಗರಾಜ್, ಶರತ್, ಸುಜಯ್, ಫಝಲ್, ಮಂಜುನಾಥ, ಶಶಿಧರ, ಪದ್ಮನಾಭ ಮೊದಲಾದವರು ಉಪಸ್ಥಿತರಿದ್ದರು.

ಚಂದ್ರಶೇಖರ್ ಪೆರಾಜೆ ಹಾಗೂ ನಾಗಪ್ಪ ಬೊಳ್ಳಾಯಿ ತೀರ್ಪುಗಾರರಾಗಿ ಸಹಕರಿಸಿದರು. ಯುವ ಕೇಸರಿ ಫ್ರೆಂಡ್ಸ್ ಅಧ್ಯಕ್ಷ ಪ್ರದೀಪ್ ಸ್ವಾಗತಿಸಿ, ಕಾರ್ಯದರ್ಶಿ ಗಣೇಶ್ ವಂದಿಸಿದರು. ಶಾಕಿರ್ ಕೆಂಪುಗುಡ್ಡೆ ಕಾರ್ಯಕ್ರಮ ನಿರೂಪಿಸಿದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಪೆರಾಜೆ ನೇರಳಕಟ್ಟೆಯಲ್ಲಿ ವಾಲಿಬಾಲ್ ಪಂದ್ಯಾಟ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*