ಫರಂಗಿಪೇಟೆ

ಕಾಂಕ್ರೀಟ್ ರಸ್ತೆ ಕಾಮಗಾರಿಗೆ ಚಾಲನೆ

ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಯು.ಟಿ.ಖಾದರ್ ಅವರ ಪ್ರದೇಶಭಿವೃದ್ದಿ ನಿಧಿಯಲ್ಲಿ ಪುದು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸುಜೀರು ಪ್ರಾಥಮಿಕ ಆರೋಗ್ಯ ಕೇಂದ್ರದ ಬಳಿಯಿಂದ ಅರಸು ವೈದ್ಯನಾಥ ಮತ್ತು ಧೂಮಾವತಿ ಬಂಟ ದೈವಸ್ಥಾನದ ವರೆಗೆ ಸುಮಾರು 8 ಲಕ್ಷ ರುಪಾಯಿ ವೆಚ್ಚದಲ್ಲಿ ನಿರ್ಮಾಣಗೊಳ್ಳುತ್ತಿರುವ ಕಾಂಕ್ರೀಟ್ ರಸ್ತೆ ಕಾಮಾಗಾರಿಗೆ ಜಿ.ಪಂ. ಮಾಜಿ ಸದಸ್ಯ ಉಮ್ಮರ್ ಫಾರೂಕ್ ಹಾಗೂ ಸ್ಥಳೀಯ ಮುಖಂಡ ಚಂದಪ್ಪ ಅಂಚನ್ ಶಿಲಾನ್ಯಾಸ  ನೆರವೇರಿಸಿದರು.

ವಾಹನ ಸಂಚಾರಕ್ಕೆ ಅಯೋಗ್ಯವಾದ ರಸ್ತೆಯನ್ನು ಡಾಮಾರೀಕರಣಗೊಳಿಸುವಂತೆ ಸ್ಥಳೀಯರು ಜಿ.ಪಂ.ಮಾಜಿ ಸದಸ್ಯ ಉಮ್ಮರ್ ಫಾರೂಕ್ ನೇತೃತ್ವದಲ್ಲಿ ಸಚಿವ ಯು.ಟಿ. ಖಾದರ್ ಅವರಿಗೆ ಮನವಿ ಸಲ್ಲಿಸಿದ್ದರು. ಸ್ಥಳೀಯ ಪ್ರಮುಖ ಚಂದಪ್ಪ ಅಂಚನ್, ಪುದು ಗ್ರಾ.ಪಂ. ಉಪಾಧ್ಯಕ್ಷ ಹಾಶೀರ್ ಪೇರಿಮಾರ್, ತಾ.ಪಂ.ಸದಸ್ಯೆ ಪದ್ಮಶ್ರೀ ದುರ್ಗೇಶ್ ಶೆಟ್ಟಿ, ಮಾಜಿ ಸದಸ್ಯ ಆಸೀಪ್ ಇಕ್ಬಾಲ್, ಪಂಚಾಯಿತಿ ಸದಸ್ಯರಾದ ಅಖ್ತರ್ ಹುಸೈನ್, ರಮ್ಲಾನ್, ಝಾಹೀರ್ ಅಬ್ಬಾಸ್, ಲತೀಫ್, ದುರ್ಗೇಶ್ ಶೆಟ್ಟಿ, ಪ್ರಮುಖರಾದ ಎಂ.ಕೆ. ಮಹಮ್ಮದ್, ಮಜೀದ್ ಫರಂಗಿಪೇಟೆ, ಕಿಸೋರ್ ಸುಜೀರ್, ಸೌಕತ್ ಪಾಡಿ, ಇನ್ಶದ್ ಮಾರಿಪಳ್ಳ, ಜಾಫರ್ ಸುಜೀರು ಮತ್ತಿತರರು ಹಾಜರಿದ್ದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ