ಜಿಲ್ಲಾ ಸುದ್ದಿ

ನಿಂತಿದ್ದ ಲಾರಿಗೆ ಬೆಂಕಿ, ಬಸ್ಸಿಗೆ ಕಲ್ಲೆಸೆತ

ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮಂಗಳೂರಿನಲ್ಲಿ ಸೌಹಾರ್ದತಾ ಸಮಾವೇಶದಲ್ಲಿ ಭಾಗವಹಿಸುವುದನ್ನು ವಿರೋಧಿಸಿ ಸಂಘ ಪರಿವಾರ ಸಂಘಟನೆಗಳು ಹಾಗೂ ಬಿಜೆಪಿ ನೇತೃತ್ವದಲ್ಲಿ ಶನಿವಾರ ಹರತಾಳ ಆಚರಿಸುತ್ತಿದ್ದು, ಮಂಗಳೂರು ಸಹಿತ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಬಿಗು ಬಂದೋಬಸ್ತ್ ಏರ್ಪಡಿಸಲಾಗಿದೆ.

ಇದುವರೆಗೆ ಅಂದರೆ (ಬೆಳಗ್ಗೆ 9.30ಕ್ಕೆ) ದೊರೆತ ಮಾಹಿತಿಯಂತೆ ಅಲ್ಲಲ್ಲಿ ಬಸ್ ಗೆ ಕಲ್ಲೆಸೆತ, ಟಯರ್ ಗೆ ಬೆಂಕಿ, ಲಾರಿಗೆ ಬೆಂಕಿ ಇಕ್ಕುವ ಘಟನೆ ಹೊರತುಪಡಿಸಿದರೆ, ಬಿಗು ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. ಸಾರ್ವಜನಿಕರು ಯಾವುದೇ ಊಹಾಪೋಹಗಳಿಗೆ ಕಿವಿಗೊಡಬಾರದು. ಯಾವುದೇ ಕಿಡಿಗೇಡಿತನ ಕಂಡಲ್ಲಿ 100ಕ್ಕೆ ಕರೆ ಮಾಡಬಹುದಾಗಿದ್ದು, ಕೂಡಲೇ ಕ್ರಮ ಕೈಗೊಳ್ಳಲು ವ್ಯವಸ್ಥೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಕಲ್ಲೆಸೆತ, ಲಾರಿಗೆ ಬೆಂಕಿ

ಜಾಹೀರಾತು

ಶನಿವಾರ ಬೆಳಗ್ಗೆಯೇ ಬಂಟ್ವಾಳ ತಾಲೂಕಿನ ತುಂಬೆ ಸಮೀಪ ಕಡೆಗೋಳಿ ಎಂಬಲ್ಲಿ ಚಲಿಸುತ್ತಿದ್ದ ಸರಕಾರಿ ಬಸ್ ಗೆ ಕಿಡಿಗೇಡಿಗಳು ಕಲ್ಲೆಸೆದಿದ್ದಾರೆ. ವಿಟ್ಲದ ಕುದ್ದುಪದವು ಎಂಬಲ್ಲಿಯೂ ಕಲ್ಲೆಸೆತ ನಡೆದ ಬಗ್ಗೆ ವರದಿಯಾಗಿದೆ. ಬಂಟ್ವಾಳ ತಾಲೂಕಿನ ಕೆಲವೆಡೆ ರಸ್ತೆಯಲ್ಲಿ ಟಯರ್ ಸುಟ್ಟು ವಾಹನ ಸಂಚಾರಕ್ಕೆ ತಡೆಯೊಡ್ಡುವ ಪ್ರಯತ್ನ ನಡೆದಿದೆ.

ಒಕ್ಕೆತ್ತೂರು ಎಂಬಲ್ಲಿ (ವಿಟ್ಲ-ಮಂಗಳೂರು ರಸ್ತೆ) ನಿಲ್ಲಿಸಿದ ಲಾರಿಗೆ ದುಷ್ಕರ್ಮಿಗಳು ಬೆಂಕಿ ಇಟ್ಟ ಕಾರಣ, ಲಾರಿ ಸಂಪೂರ್ಣ ಭಸ್ಮವಾಗಿದೆ. ಇದು ಅಬೂಬಕ್ಕರ್ ಹಾಜಿ ಹೈವೆ ಎಂಬವರಿಗೆ ಸೇರಿದ ಲಾರಿಯಾಗಿದೆ. ಸ್ಥಳಕ್ಕೆ ಅಗ್ನಿಶಾಮಕದಳ ಸಿಬ್ಬಂದಿ ಆಗಮಿಸಿ ಬೆಂಕಿಯನ್ನು ನಂದಿಸಿದರು.

ಹರತಾಳ ಕರೆಯ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ವಿಟ್ಲ, ಕಲ್ಲಡ್ಕ ಪೇಟೆ ಬಹುತೇಕ ಬಂದ್ ಆಗಿದ್ದರೆ, ಬಿ.ಸಿ.ರೋಡ್, ಮೇಲ್ಕಾರ್ ಗಳಲ್ಲಿ ಕೆಲ ಅಂಗಡಿ ಮುಂಗಟ್ಟುಗಳು ತೆರೆದಿದ್ದವು.

ಜಾಹೀರಾತು

ಖಾಸಗಿ ವಾಹನ ಸಂಚಾರ ಅಬಾಧಿತವಾಗಿದ್ದರೆ, ಖಾಸಗಿ ಬಸ್ಸುಗಳು ವಿರಳವಾಗಿ ಸಂಚರಿಸುತ್ತಿದ್ದವು. ಪ್ರಥಮ ಪಿಯುಸಿ ಪರೀಕ್ಷೆಗೆ ತೆರಳುವ ವಿದ್ಯಾರ್ಥಿಗಳು ಬಸ್ಸುಗಳಿಲ್ಲದೆ ತೊಂದರೆಗೊಳಗಾದರು. ಸರಕಾರಿ ಬಸ್ಸುಗಳ ಸಂಚಾರವಿದ್ದು, ಅಂಗಡಿ, ಮುಂಗಟ್ಟುಗಳ ಮಾಲೀಕರು ಪರಿಸ್ಥಿತಿ ಅವಲೋಕಿಸಿ ಮುಂದಿನ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಹೆಚ್ಚು.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ