ಬಂಟ್ವಾಳ

ಸಮಾಜದಲ್ಲಿ ಎಲ್ಲಾ ಸಮುದಾಯಗಳಿಗೂ ಪ್ರಾತಿನಿಧ್ಯ ಅಗತ್ಯ- ರೈ

ಸಮಾಜದಲ್ಲಿ ಎಲ್ಲಾ ಸಮುದಾಯಗಳಿಗೂ ಪ್ರಾತಿನಿಧ್ಯ ಅಗತ್ಯ. ಇದರಿಂದ ಎಲ್ಲರ ಜೊತೆ ಗುರುತಿಸಿಕೊಂಡು ಸೇವೆ ಸಲ್ಲಿಸಲು ಅವಕಾಶ ಆಗುವುದು.  ಹಿಂದುಳಿದ ಸಮಾಜದವರು ನಾಯಕತ್ವದ ಗುಣಗಳನ್ನು ಬೆಳೆಸಿಕೊಂಡು ಮುಚೂಣಿಗೆ ಬರಲು ಪ್ರಯತ್ನ ನಡೆಸಿದಾಗ ಒಬ್ಬರಲ್ಲ ಒಬ್ಬರು ಮುಂದಕ್ಕೆ ಬರಲು ಸಾಧ್ಯವಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಹೇಳಿದರು.

ಅವರು ಫೆ. ೨೪ರಂದು  ಚೆಂಡ್ತಿಮಾರ್ ಶ್ರೀ ಮಹಾಲಿಂಗೇಶ್ವರ ಭಜನಾ ಮಂಡಳಿ ಹಾಗೂ ಆದಿದ್ರಾಡ ಸುಧಾರಕ ಸಂಘ ಆಶ್ರಯದಲ್ಲಿ ನಡೆದ ಧಾರ್ಮಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.  ಬಳಿಕ ವಿವಿಧ ಆಟೋಟ ಸ್ಪರ್ಧೆಯಲ್ಲಿ ವಿಜೇತರಿಗೆ ಬಹುಮಾನ ವಿತರಿಸಿದರು.

ಬಂಟ್ವಾಳ ಎಸ್‌ವಿಎಸ್ ಕಾಲೇಜು ಪ್ರೊ| ತುಕರಾಂ ಪೂಜಾರಿ ಮಾತನಾಡಿ  ಆಧುನಿಕ ಸಾಮಾಜಿಕ ವ್ಯವಸ್ಥೆಯಲ್ಲಿ ಹೆತ್ತವರನ್ನು ಮನೆಯಲ್ಲಿ ಉಳಿಸಿಕೊಂಡು ಪೋಷಿಸುವ ಮಕ್ಕಳ ಮನೋಸ್ಥಿತಿ ಕುಸಿತ ಆಗುತ್ತಿದೆ ಎಂದು ಅಭಿಪ್ರಾಯಪಟ್ಟರು.

ಜಾಹೀರಾತು

ಫರಂಗಿಪೇಟೆ ಸೇವಾಂಜಲಿ ಪ್ರತಿಷ್ಠಾನ ಅಧ್ಯಕ್ಷ ಕೆ.ಕೃಷ್ಣಕುಮಾರ್ ಪೂಂಜ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಸಜೀಪಮೂಡ ಗ್ರಾ.ಪಂ.ಸದಸ್ಯ ರಮೇಶ್ ಪಣೋಲಿಬೈಲು ಸಭಾ ಕಾರ್ಯಕ್ರಮ ಉದ್ಘಾಟಿಸಿದರು.  ಬಂಟ್ವಾಳ ಪುರಸಭಾ ಮಾಜಿ ಅಧ್ಯಕ್ಷೆ ವಸಂತಿ ಚಂದಪ್ಪ  ಪುರಸಭಾ ಸದಸ್ಯ ಪ್ರವೀಣ್ ಜಕ್ರಿಬೆಟ್ಟು, ಮುತ್ತೂರು ಶ್ರೀ ಸತ್ಯಪದ್ನಾಜಿ ಸಾರ ಮುಪ್ಪಣ್ಣ ದೈವಸ್ಥಾನದ ಆಡಳಿತ ಮೊಕ್ತೇಸರ ಹರಿಯಪ್ಪ , ಸಿಂಡಿಕೇಟ್ ಬ್ಯಾಂಕ್ ನಿವೃತ್ತ ಅಽಕಾರಿ ಶೀನ ಮೂಡಬಿದಿರೆ ಉಪಸ್ಥಿತರಿದ್ದರು. ಸಮಿತಿ ಅಧ್ಯಕ್ಷ ಜನಾರ್ದನ ಚಂಡ್ತಿಮಾರ್ ಪ್ರಸ್ತಾವನೆ ನೀಡಿ ಇಲ್ಲಿನ ವ್ಯವಸ್ಥೆಗಳ ಬಗ್ಗೆ ವಿವರಿಸಿದರು. ಸಂಜೀವ ಚಂಡ್ತಿಮಾರ್ ಸ್ವಾಗತಿಸಿ ಕಾರ್ಯಕ್ರಮ ನಿರ್ವಹಿಸಿದರು. ಶೀನ ಚಂಡ್ತಿಮಾರ್ ವಂದಿಸಿದರು.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts

ಮಂಗಳೂರು ಕಡಲ ತೀರ ʼಕಡಲ ಪವನ ಶಕ್ತಿ ಉತ್ಪಾದನಾ ವಲಯʼವಾಗಿ ಅಭಿವೃದ್ಧಿಪಡಿಸಲು ಕೇಂದ್ರಕ್ಕೆ ಮನವಿ

ನಿಯಮ 377ರ ಅಡಿಯಲ್ಲಿ ಸಮುದ್ರ ತೀರದ ಪವನ ಸಾಮರ್ಥ್ಯದ ಬಗ್ಗೆ ಲೋಕಸಭೆ ಗಮನಸೆಳೆದ ಸಂಸದ ಕ್ಯಾ. ಚೌಟ (more…)

5 hours ago