ತೊಕ್ಕೊಟ್ಟು ಕರ್ಣಾಟಕ ಬ್ಯಾಂಕ್ ಕಚೇರಿಗೆ ಬೆಂಕಿ

ಪರಿಸರದಲ್ಲಿ ಮೂರನೇ ಬಾರಿ ನಡೆಯುತ್ತಿರುವ ಕೃತ್ಯ

www.bantwalnews.com report

ಜಾಹೀರಾತು

ತೊಕ್ಕೊಟ್ಟಿನಲ್ಲಿರುವ ಕರ್ಣಾಟಕ ಬ್ಯಾಂಕ್ ಕಚೇರಿಗೆ ಮಂಗಳವಾರ ರಾತ್ರಿ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದಾರೆ. ಇದರಿಂದ ಅಮೂಲ್ಯ ಕಡತಗಳು ಬೆಂಕಿಗಾಹುತಿಯಾಗಿರುವ ಶಂಕೆ ಇದೆ. ಕೂಡಲೇ ಅಗ್ನಿಶಾಮಕದಳಕ್ಕೆ ಮಾಹಿತಿ ನೀಡಿ, ಬೆಂಕಿ ನಂದಿಸಲಾಯಿತು. ವಾರದ ಹಿಂದೆಯಷ್ಟೇ ಸಮೀಪದ ಸಿಪಿಎಂ ಕಚೇರಿಗೆ ಕಿಚ್ಚಿಡಲಾಗಿತ್ತು.

ಘಟನೆ ವಿವರ:

ಜಾಹೀರಾತು

ಮಂಗಳವಾರ ರಾತ್ರಿ ಸುಮಾರು 10.30ರ ವೇಳೆ ಈ ಘಟನೆ ನಡದಿದೆ. ಬೆಂಕಿ ಉರಿಯುತ್ತಿರುವುದನ್ನು ಕಂಡು ಸ್ಥಳೀಯರು ಬ್ಯಾಂಕ್ ಅಧಿಕಾರಿಗಳಿಗೆ ಮಾಹಿತಿ ನೀಡಿ ಕೂಡಲೇ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಲಾಗಿದೆ. ವಿಷಯ ತಿಳಿದು ಸ್ಥಳಕ್ಕೆಆಗಮಿಸಿದ ಅಗ್ನಿಶಾಮಕದಳ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ.

ಕಿಡಿಗೇಡಿಗಳು ಬ್ಯಾಂಕಿನ ಕಿಟಕಿ ಬಾಗಿಲು ತೆರೆದು ಒಳಗಡೆ ಬೆಂಕಿ ಹಾಕಿದ್ದು ಅನೇಕ ಅಮೂಲ್ಯ ಕಡತಗಳು ಬೆಂಕಿಯಲ್ಲಿ ಸುಟ್ಟು ಹೋಗಿವೆ.

ಒಂದು ವಾರದ ಅವಧಿಯಲ್ಲಿ ತೊಕ್ಕೊಟ್ಟು ಪರಿಸರದ ಮೂರು ಕಡೆ ಈ ರೀತಿ ಬೆಂಕಿ ಹಚ್ಚಿದ ಪ್ರಕರಣ ನಡೆದಿವೆ.

ಜಾಹೀರಾತು

ಸಿಪಿಎಂ ಕಚೇರಿ, ತೊಕ್ಕೊಟ್ಟಿನ ಗೂಡಂಗಡಿಗಳಗೆ ಕಿಚ್ಚಿಡಲಾಗಿತ್ತು. ಸಿಪಿಎಂ ಕಚೇರಿಗೆ ಬೆಂಕಿಇಟ್ಟ ಕೃತ್ಯ ರಾಜಕೀಯ ಭಾಷಣಗಳಿಗೆ ಕಾರಣವಾಗಿತ್ತು. ಆದರೆ ಇದೀಗ ಯಾವುದೋ ಕಿಡಿಗೇಡಿಗಳು ಈ ಕೃತ್ಯ ನಡೆಸುತ್ತಿರುವುದಾಗಿ ಶಂಕೆ ಮೂಡಿದ್ದು  ಪೊಲೀಸರು ಪ್ರಬಲ ಕಾರ್ಯಾಚರಣೆ ನಡೆಸಿದರೆ ದುಷ್ಕೃತ್ಯ ಎಸಗಿದವರನ್ನು ಮಟ್ಟ ಹಾಕಲು ಸಾಧ್ಯ ಎನ್ನಲಾಗಿದೆ.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ತೊಕ್ಕೊಟ್ಟು ಕರ್ಣಾಟಕ ಬ್ಯಾಂಕ್ ಕಚೇರಿಗೆ ಬೆಂಕಿ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*