ಜಿಲ್ಲಾ ಸುದ್ದಿ

ತೊಕ್ಕೊಟ್ಟು ಕರ್ಣಾಟಕ ಬ್ಯಾಂಕ್ ಕಚೇರಿಗೆ ಬೆಂಕಿ

ಪರಿಸರದಲ್ಲಿ ಮೂರನೇ ಬಾರಿ ನಡೆಯುತ್ತಿರುವ ಕೃತ್ಯ

www.bantwalnews.com report

ಜಾಹೀರಾತು

ತೊಕ್ಕೊಟ್ಟಿನಲ್ಲಿರುವ ಕರ್ಣಾಟಕ ಬ್ಯಾಂಕ್ ಕಚೇರಿಗೆ ಮಂಗಳವಾರ ರಾತ್ರಿ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದಾರೆ. ಇದರಿಂದ ಅಮೂಲ್ಯ ಕಡತಗಳು ಬೆಂಕಿಗಾಹುತಿಯಾಗಿರುವ ಶಂಕೆ ಇದೆ. ಕೂಡಲೇ ಅಗ್ನಿಶಾಮಕದಳಕ್ಕೆ ಮಾಹಿತಿ ನೀಡಿ, ಬೆಂಕಿ ನಂದಿಸಲಾಯಿತು. ವಾರದ ಹಿಂದೆಯಷ್ಟೇ ಸಮೀಪದ ಸಿಪಿಎಂ ಕಚೇರಿಗೆ ಕಿಚ್ಚಿಡಲಾಗಿತ್ತು.

ಘಟನೆ ವಿವರ:

ಮಂಗಳವಾರ ರಾತ್ರಿ ಸುಮಾರು 10.30ರ ವೇಳೆ ಈ ಘಟನೆ ನಡದಿದೆ. ಬೆಂಕಿ ಉರಿಯುತ್ತಿರುವುದನ್ನು ಕಂಡು ಸ್ಥಳೀಯರು ಬ್ಯಾಂಕ್ ಅಧಿಕಾರಿಗಳಿಗೆ ಮಾಹಿತಿ ನೀಡಿ ಕೂಡಲೇ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಲಾಗಿದೆ. ವಿಷಯ ತಿಳಿದು ಸ್ಥಳಕ್ಕೆಆಗಮಿಸಿದ ಅಗ್ನಿಶಾಮಕದಳ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ.

ಕಿಡಿಗೇಡಿಗಳು ಬ್ಯಾಂಕಿನ ಕಿಟಕಿ ಬಾಗಿಲು ತೆರೆದು ಒಳಗಡೆ ಬೆಂಕಿ ಹಾಕಿದ್ದು ಅನೇಕ ಅಮೂಲ್ಯ ಕಡತಗಳು ಬೆಂಕಿಯಲ್ಲಿ ಸುಟ್ಟು ಹೋಗಿವೆ.

ಒಂದು ವಾರದ ಅವಧಿಯಲ್ಲಿ ತೊಕ್ಕೊಟ್ಟು ಪರಿಸರದ ಮೂರು ಕಡೆ ಈ ರೀತಿ ಬೆಂಕಿ ಹಚ್ಚಿದ ಪ್ರಕರಣ ನಡೆದಿವೆ.

ಸಿಪಿಎಂ ಕಚೇರಿ, ತೊಕ್ಕೊಟ್ಟಿನ ಗೂಡಂಗಡಿಗಳಗೆ ಕಿಚ್ಚಿಡಲಾಗಿತ್ತು. ಸಿಪಿಎಂ ಕಚೇರಿಗೆ ಬೆಂಕಿಇಟ್ಟ ಕೃತ್ಯ ರಾಜಕೀಯ ಭಾಷಣಗಳಿಗೆ ಕಾರಣವಾಗಿತ್ತು. ಆದರೆ ಇದೀಗ ಯಾವುದೋ ಕಿಡಿಗೇಡಿಗಳು ಈ ಕೃತ್ಯ ನಡೆಸುತ್ತಿರುವುದಾಗಿ ಶಂಕೆ ಮೂಡಿದ್ದು  ಪೊಲೀಸರು ಪ್ರಬಲ ಕಾರ್ಯಾಚರಣೆ ನಡೆಸಿದರೆ ದುಷ್ಕೃತ್ಯ ಎಸಗಿದವರನ್ನು ಮಟ್ಟ ಹಾಕಲು ಸಾಧ್ಯ ಎನ್ನಲಾಗಿದೆ.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts

ಮಂಗಳೂರು ಕಡಲ ತೀರ ʼಕಡಲ ಪವನ ಶಕ್ತಿ ಉತ್ಪಾದನಾ ವಲಯʼವಾಗಿ ಅಭಿವೃದ್ಧಿಪಡಿಸಲು ಕೇಂದ್ರಕ್ಕೆ ಮನವಿ

ನಿಯಮ 377ರ ಅಡಿಯಲ್ಲಿ ಸಮುದ್ರ ತೀರದ ಪವನ ಸಾಮರ್ಥ್ಯದ ಬಗ್ಗೆ ಲೋಕಸಭೆ ಗಮನಸೆಳೆದ ಸಂಸದ ಕ್ಯಾ. ಚೌಟ (more…)

5 hours ago