ವಿಟ್ಲದಲ್ಲಿ ಎಡನೀರು ಮೇಳದ ಯಕ್ಷೋತ್ಸವ 6ರಿಂದ 11ವರೆಗೆ

ವಿಟ್ಲ ಎಡನೀರು ಗೋಪಾಲಕೃಷ್ಣ ಯಕ್ಷೋತ್ಸವ ಸಮಿತಿ ಆಶ್ರಯದಲ್ಲಿ ಎಡನೀರು ಶ್ರೀ ಗೋಪಾಲಕೃಷ್ಣ ಯಕ್ಷಗಾನ ಕಲಾ ಮಂಡಳಿ ವತಿಯಿಂದ ಮಾ.6ರಿಂದ 11ರವರೆಗೆ ಸಂಜೆ 6.30 ರಿಂದ 10.30 ರವರೆಗೆ ಕಾಲಮಿತಿಯ ಯಕ್ಷೋತ್ಸವ ಕಾರ್ಯಕ್ರಮ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ವಠಾರದಲ್ಲಿ ನಡೆಯಲಿದೆ ಎಂದು ಸಮಿತಿ ಗೌರವಾಧ್ಯಕ್ಷ ಮಾವೆ ದಿನಕರ ಭಟ್ ಹೇಳಿದರು.

ಮಾ.6 ರಂದ ಸಂಜೆ ೬ಗಂಟೆಗೆ ಯಕ್ಷಗಾನ ಪ್ರದರ್ಶನದ ಉದ್ಘಾಟನೆಯನ್ನು ಮಾಣಿಲ ಶ್ರೀ ಧಾಮ ಶ್ರೀ ಮಹಾಲಕ್ಷ್ಮೀ ಕ್ಷೇತ್ರದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ಉದ್ಘಾಟಿಸಲಿದ್ದು, ಅಧ್ಯಕ್ಷತೆಯನ್ನು ಪುತ್ತೂರು ಶಾಸಕಿ ಶಕುಂತಳಾ ಟಿ. ಶೆಟ್ಟಿ ವಹಿಸಲಿದ್ದಾರೆ. ಕಾಸರಗೋಡು ಹಿಂದೂ ಐಕ್ಯ ವೇದಿಕೆ ಉಪಾಧ್ಯಕ್ಷ ರವೀಶ ತಂತ್ರಿ, ವಿಟ್ಲ ಪಟ್ಟಣ ಪಂಚಾಯಿತಿ ಅಧ್ಯಕ್ಷ ಅರುಣ ಎಂ. ವಿಟ್ಲ ಭಾಗವಹಿಸಲಿದ್ದಾರೆ ಎಂದು ವಿಟ್ಲದಲ್ಲಿ ಗುರುವಾರ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದರು.

ಜಾಹೀರಾತು

ಮಾ.6ರಂದು ಪಾಂಚಜನ್ಯ-ಅಗ್ರಪೂಜೆ, ಮಾ.7ರಂದು ಅಕ್ಷಯಾಂಬರ-ಮೈಂದ ದ್ವಿವಿದ, ಮಾ.8ರಂದು ಗದಾಯುದ್ಧ-ರಕ್ತರಾತ್ರಿ, ಮಾ.9ರಂದು ದಕ್ಷಾದ್ವರ – ಗಿರಿಜಾ ಕಲ್ಯಾಣ, ಮಾ.10ರಂದು ಶಿವಪಂಚಾಕ್ಷರಿಮಹಿಮೆ, ಮಾ.11ರಂದು ಕದಂಬ ಕೌಶಿಕೆ ಪ್ರಸಂಗಗಳು ಪ್ರದರ್ಶನ ಗೊಳ್ಳಲಿದೆ. ವಿಶೀಷ ಆಕರ್ಷಣೆಯಾಗಿ ಅತಿಥಿ ಕಲಾವಿದರುಗಳು ಭಾಗವಹಿಸಲಿದ್ದಾರೆ. ಸುಮಾರು 1000 ಸಾವಿರ ಮಂದಿ ನಿತ್ಯ ಭಾಗವಹಿಸುವ ನಿರೀಕ್ಷೆಯನ್ನು ಇಟ್ಟುಕೊಳ್ಳಲಾಗಿದೆ ಎಂದು ಹೇಳಿದರು.

ಮಾ.11ರಂದು ಸಂಜೆ 6 ಗಂಟೆಗೆ ಸಮಾರೋಪ ಸಮಾರಂಭ ನಡೆಯಲಿದ್ದು, ಕಾಸರಗೋಡು ಎಡನೀರು ಶ್ರೀ ಕೇಶವಾನಂದ ಭಾರತೀ ಸ್ವಾಮೀಜಿಗಳು ಆಶೀರ್ವಚನ ನೀಡಲಿದ್ದಾರೆ. ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ, ಯಕ್ಷಸಿಂಧೂರ ಪ್ರತಿಷ್ಠಾನ ವಿಟ್ಲ, ಸಚಿಕೇತನ ಗೆಳೆಯರ ಬಳಗ ವಿಟ್ಲ, ಯಕ್ಷ ಮಿತ್ರರು ಮೈರ, ಯಕ್ಷ ಮಿತ್ರರು ವಿಟ್ಲ ಸೇರಿ ವಿವಿಧ ಸಂಘಟನೆಗಳು ಸಹಕಾರವನ್ನೂ ನೀಡುವ ಮೂಲಕ ಆರು ದಿನಗಳ ಕಾರ್ಯಕ್ರಮ ನಡೆಯಲಿದೆ ಎಂದು ವಿವರಿಸಿದರು.ಸಮಿತಿ ಅಧ್ಯಕ್ಷ ದಂಬೆಕಾನ ಪ್ರಭಾಕರ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ನಟೇಶ್ ವಿಟ್ಲ, ಕೋಶಾಧಿಕಾರಿ ರಮಾನಾಥ ವಿಟ್ಲ, ಸಂಯೋಜಕ ಕೈಯ್ಯೂರು ನಾರಾಯಣ ಭಟ್ ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ವಿಟ್ಲದಲ್ಲಿ ಎಡನೀರು ಮೇಳದ ಯಕ್ಷೋತ್ಸವ 6ರಿಂದ 11ವರೆಗೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*