ಮಾ. 9-13: ಸರಪಾಡಿ ದೇವಳದ ವಾರ್ಷಿಕ ಜಾತ್ರೆ

ಬಂಟ್ವಾಳ ತಾ| ಸರಪಾಡಿ ಶ್ರೀ ಶರ‘ಶ್ವರ ದೇವಸ್ಥಾನದ ವರ್ಷಾವಽ ಜಾತ್ರೆ ಮತ್ತು ಉತ್ಸವಾದಿಗಳು ಮಾ. 9ರಿಂದ 13ರ ವರೆಗೆ ವರ್ಕಾಡಿ ದಿನೇಶ ಕೃಷ್ಣ ತಂತ್ರಿ ಅವರ ಮಾರ್ಗದರ್ಶನದಲ್ಲಿ ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಜರಗಲಿದೆ.

ಮಾ. 8ರಂದು ಮಧ್ಯಾಹ್ನ ಧ್ವಜಾರೋಹಣ, ರಾತ್ರಿ ಬಲಿ ಉತ್ಸವ, ಬಳಿಕ ಮೂಡಬಿದಿರೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ  ಅಧ್ಯಕ್ಷ ಡಾ| ಎಂ.ಮೋಹನ ಆಳ್ವ ಅ‘ಕ್ಷತೆಯಲ್ಲಿ  ಧಾರ್ಮಿಕ ಸಭೆ ನಡೆಯಲಿದೆ. ಸ‘ಯನ್ನು ಡಾ| ಎಚ್.ಶಂಕರನಾರಾಯಣ ರಾವ್ ಉದ್ಘಾಟಿಸಲಿದ್ದು, ವೇ|ಮೂ| ಪಂಜ ಭಾಸ್ಕರ ಭಟ್  ಧಾರ್ಮಿಕ ಪ್ರವಚನ ನೀಡಲಿದ್ದಾರೆ.

ಜಾಹೀರಾತು

ಅತಿಥಿಗಳಾಗಿ ಸಚಿವ ಬಿ.ರಮಾನಾಥ ರೈ, ಸಂಸದ ನಳಿನ್‌ಕುಮಾರ್ ಕಟೀಲು, ಕ್ಷೇತ್ರದ ಆಡಳಿತ ಮೊಕ್ತೇಸರ ಎನ್.ಸುಬ್ಬಣ್ಣ ಶೆಟ್ಟಿ, ಪ್ರಗತಿಪರ ಕೃಷಿಕ ರಾಜೇಶ್ ನಾಕ್ ಉಳಿಪ್ಪಾಡಿ, ಜಿ.ಪಂ.ಸದಸ್ಯ ಪದ್ಮಶೇಖರ್ ಜೈನ್, ಧಾರ್ಮಿಕ ಚಿಂತಕ ಯೋಗೀಶ್ ಭಟ್, ಉದ್ಯಮಿ ರೋಹಿನಾಥ್ ಪಾದೆ, ದೈವಜ್ಞ ನಾರಾಯಣ ಶಾಂತಿ, ವೈದ್ಯ ಡಾ| ಶಿವಪ್ರಸಾದ್ ಶೆಟ್ಟಿ ಭಾಗವಹಿಸಲಿದ್ದಾರೆ. ಬಳಿಕ ನಿಕ್ಕ್ ಗೊತ್ತುಂಡಾ ತುಳುನಾಟಕ ಪ್ರದರ್ಶನಗೊಳ್ಳಲಿದೆ.

ಮಾ.10 ರಂದು ಮಧ್ಯಾಹ್ನ ಕಲಶಾಭಿಷೇಕ, ನಿತ್ಯ ಬಲಿ, ರಾತ್ರಿ ಸುದರ್ಶನ ವಿಜಯ ಯಕ್ಷಗಾನ ಬಯಲಾಟ, ದೈವಂಗಳ ನೇಮ, ದೇವರ  ಬಲಿ, ಪಲ್ಲಕ್ಕಿ ಉತ್ಸವ ನಡೆಯಲಿದೆ.

ಮಾ. 11ರಂದು ಮಧ್ಯಾಹ್ನ ನಿತ್ಯ ಬಲಿ, ರಾತ್ರಿ ಪಂಜುರ್ಲಿ ನೇಮ, ದರ್ಶನ ಬಲಿ, ವಸಂತ ಕಟ್ಟೆಪೂಜೆ, ಚಂದ್ರಮಂಡಲೋತ್ಸವ, ಅಶ್ವತ್ಥ ಕಟ್ಟೆಪೂಜೆ ನಡೆಯಲಿದೆ. ಮಾ. 12ರಂದು ಬೆಳಗ್ಗೆ ಉತ್ಸವ, ಮಧ್ಯಾಹ್ನ ವಿಶೇಷ ಚೆಂಡೆ ವಾದನ, ಮನ್ಮಹಾರಥಾರೋಹಣ, ರಾತ್ರಿ ಗಾನ ನೃತ್ಯ ವೈವಿಧ್ಯ ಶಾಂತಿಗುಡ್ಡೆಯಲ್ಲಿ ಶ್ರೀ ರಕ್ತೇಶ್ವರಿ ನೇಮ, ವಲಸರಿ ಇಳಿಯುವುದು, ಮಹಾರಥೋತ್ಸವ ನಡೆಯಲಿದೆ.

ಮಾ. 13ರಂದು ಬೆಳಗ್ಗೆ ದೇವರ ದಿವ್ಯದರ್ಶನ, ತುಲಾಭಾರ ಸೇವೆ, ಮಧ್ಯಾಹ್ನ ಪಲ್ಲಪೂಜೆ, ಸಂಜೆ ಕೋಡಿ ಕಲ್ಲುರ್ಟಿ ಭಂಡಾರ ಬರುವುದು, ಕಲ್ಲುರ್ಟಿ ದೈವದ ನೇಮ, ಓಕುಳಿ, ದೇವರ ಬಲಿ ಉತ್ಸವ, ಅವ‘ತ ಸ್ನಾನ, ‘ಜಾವರೋಹಣ ನಡೆಯಲಿದೆ. ಪ್ರತಿ ದಿನ ಮ‘ಹ್ನ ಅನ್ನಸಂತರ್ಪಣೆ ನಡೆಯಲಿದೆ ಎಂದು ಕ್ಷೇತ್ರದ ಪ್ರಕಟನೆ ತಿಳಿಸಿದೆ.

ಜಾಹೀರಾತು

About the Author

Harish Mambady
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "ಮಾ. 9-13: ಸರಪಾಡಿ ದೇವಳದ ವಾರ್ಷಿಕ ಜಾತ್ರೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*