ಕೇಲ್ದೋಡಿ ಶ್ರೀ ವೈದ್ಯನಾಥ ಕೊಡಮಣಿತ್ತಾಯ ಕ್ಷೇತ್ರದಲ್ಲಿ ಪ್ರಕಾಶ್ ಅಂಚನ್ ಹುಟ್ಟೂರ ಸನ್ಮಾನ


ಸರಕಾರ ಮಾಡಬೇಕಾದ ಕಾರ್ಯವನ್ನು ಪ್ರಕಾಶ್ ಅಂಚನ್ ಹಾಗೂ ಅವರ ಯುವಕರ ತಂಡ ಮಾಡಿದೆ. ಶಾಲೆ ನಿರ್ಮಾಣದ ಕಾರ್ಯ ಅವರಿಗೆ ಹೊರೆಯಾಗದಂತೆ ಎಲ್ಲರೂ ಕೈ ಜೋಡಿಸಬೇಕಾಗಿದೆ. ಹೊರರಾಜ್ಯಳಿಗೆ ಭೇಟಿ ನೀಡುವ ಮೂಲಕ ಬಂಟ್ವಾಳದ ಕೀರ್ತಿಯನ್ನು ಅವರು ದೇಶಾದ್ಯಂತ ಪಸರಿಸಿದ್ದಾರೆ ಎಂದು ಮಾಣಿಲ ಶ್ರೀಧಾಮದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ಹೇಳಿದರು.
ಬ್ರಹ್ಮಶ್ರೀ ನಾರಾಯಣ ಗುರು ಭಜನಾ ಮಂಡಳಿ ಪಂಜಿಕಲ್ಲು ಹಾಗೂ ಹುಟ್ಟೂರ ಅಬಿನಂದನ ಸಮಿತಿ ಆಶ್ರಯದಲ್ಲಿ ಕೇಲ್ದೋಡಿ ಶ್ರೀ ವೈದ್ಯನಾಥ ಕೊಡಮಣಿತ್ತಾಯ ಬ್ರಹ್ಮಬೈದರ್ಕಳ ಕ್ಷೇತ್ರದಲ್ಲಿ ಶುಕ್ರವಾರ ರಾತ್ರಿ ಸಾಮಾಜಿಕ, ಧಾರ್ಮಿಕ ಹಾಗೂ ಶೈಕ್ಷಣಿಕ ಕ್ಷೇತ್ರದಲ್ಲಿ ಸಾಧನೆ ಮಾಡಿದ ದುರ್ಗಾ ಫ್ರೆಂಡ್ಸ್ ಕ್ಲಬ್ ಅಧ್ಯಕ್ಷ ಪ್ರಕಾಶ್ ಅಂಚನ್‌ಗೆ ಹುಟ್ಟೂರ ಅಭಿನಂದನೆ ಸಲ್ಲಿಸಿ ಆಶೀರ್ವಚನ ನೀಡಿದರು.
ನಿಂದನೆ ಒಳ್ಳೆಯದು. ನಿಂದಕರಿರುವರೆಗೆ ನಾವು ಉತ್ತಮ ಸಾಧನೆ ಮಾಡಲು ಸಾಧ್ಯವಿದೆ. ಒಳಿತು ಮಾಡುವವರಿಗೆ ಕೆಡುಕು ಮಾಡುವವರು ಸಮಾಜದಲ್ಲಿ ಇದ್ದೇ ಇರುತ್ತಾರೆ. ಇಂತವರ ಬಗ್ಗೆ ತಲೆಕೆಡಿಸಿಕೊಳ್ಳದೆ ನಾಮ್ಮ ಸಾಧನೆಯ ಗುರಿಯನ್ನು ಮುಟ್ಟಬೇಕು ಎಂದು ಅವರು ಹೇಳಿದರು.
ಸಂಸದ ನಳೀನ್ ಕುಮಾರ್ ಕಟೀಲು ಮುಖ್ಯ ಅತಿಥಿಯಾಗಿ ಮಾತನಾಡಿ ದೇಶಾಧ್ಯಂತ ಏಕರೂಪದ ಶಿಕ್ಷಣ ಜಾರಿಗೊಳಿಸಬೇಕೆನ್ನುವುದು ಪ್ರಧಾನಿ ನರೇಂದ್ರ ಮೋದಿಯವರ ಕನಸು ಆಗಿದೆ. ಅದೇ ಹೋರಾಟದಲ್ಲಿರುವ ಪ್ರಕಾಶ್ ಅಂಚನ್ ಅವರಿಗೆ ನಮ್ಮ ಬೆಂಬಲವೂ ಇದೆ ಎಂದು ಘೋಷಿಸಿದರು.
ಇದು ಹೃದಯದ ಸನ್ಮಾನ. ಇದರಿಂದಾಗಿ ಪ್ರಕಾಶ್ ಅಂಚನ್ ಅವರ ಜವಾಬ್ದಾರಿ ಇನ್ನೂ ಹೆಚ್ಚಿದೆ. ದಡ್ಡಲಕಾಡು ಮಾತ್ರವಲ್ಲದೆ ದ.ಕ.ಜಿಲ್ಲೆಯ ಎಲ್ಲಾ ಸರಕಾರಿ ಶಾಲೆಗಳಿಗೆ ನೀವು ಹೋಗಬೇಕು ಎಂದ ಅವರು ಶಾಲೆ ಹತ್ತಾರು ಧರ್ಮದ ದೇವರಿರುವ ದೇಗುಲ ಎಂದರು.
ಪತ್ರಕರ್ತ ಗೋಪಾಲ ಅಂಚನ್ ಅಭಿನಂದನ ಭಾಷಣ ಮಾಡಿ ಪ್ರಕಾಶ್ ಅಂಚನ್ ಓರ್ವ ವ್ಯಕ್ತಿಯಲ್ಲ. ಅವರು ಒಂದು ಶಕ್ತಿ ಎಂದರು. ಶ್ರೇಷ್ಟ ಚಿಂತನೆ, ಶ್ರೇಷ್ಟ ಆಚರಣೆ ಯಾರಲ್ಲಿರುತ್ತದೆಯೋ ಅವರು ಶ್ರೇಷ್ಟ ವ್ಯಕ್ತಿಗಳಾಗುತ್ತಾರೆ. ತನ್ನ ಶ್ರೇಷ್ಟ ಚಿಂತನೆಯಿಂದಾಗಿ ಪ್ರಕಾಶ್ ಅಂಚನ್ ಶ್ರೇಷ್ಟ ವ್ಯಕ್ತಿಯಾಗಿದ್ದಾರೆ ಎಂದರು. ಪ್ರತೀ ವ್ಯಕ್ತಿಯಲ್ಲೂ ದೇವರನ್ನು ಕಾಣುವ ಗುಣ ಅವರಲ್ಲಿದ್ದು ಬ್ರಹ್ಮಶ್ರೀ ನಾರಾಯಣ ಗುರುಗಳ ಸಂದೇಶವನ್ನು ಅನುಷ್ಠಾನಗೊಳಿಸುತ್ತಿದ್ದಾರೆ ಎಂದರು.
ಸನ್ಮಾನ ಸ್ವೀಕರಿಸಿ ಮಾತನಾಡಿದ ಪ್ರಕಾಶ್ ಅಂಚನ್ ಪ್ರತಿಯೊಬ್ಬ ಬಡವನ ಮಗುವಿಗೂ ಶಿಕ್ಷಣ ಸಿಗುವರೆಗೆ, ಸರಕಾರಿ ಶಾಲೆಯಲ್ಲಿ ಕಲಿತ ವಿದ್ಯಾರ್ಥಿಗೆ ಸರಕಾರಿ ನೌಕರಿ ಸಿಗುವವರೆಗೆ ನನ್ನ ಹೋರಾಟ ನಿರಂತರವಾಗಿರುತ್ತದೆ ಎಂದರು.
ಪ್ರಗತಿಪರ ಕೃಷಿಕ ರಾಜೇಶ್ ನಾಕ್ ಉಳಿಪಾಡಿಗುತ್ತು, ಪ್ರಮುಖರಾದ ಚಂದಪ್ಪ ಅಂಚನ್, ಲೀಲಾಕ್ಷ ಕರ್ಕೇರಾ, ಸಮಿತಿಯ ಗೌರವಾಧ್ಯಕ್ಷ ಕೋಟಿ ಪೂಜಾರಿ ಕೇಲ್ದೊಡಿ ಗುತ್ತು, ಅಧ್ಯಕ್ಷ ಕರುಣೇಂದ್ರ ಪೂಜಾರಿ, ಪ್ರಧಾನ ಅರ್ಚಕ ಶ್ರೀಪತಿ ಭಟ್ ವೇದಿಕೆಯಲ್ಲಿದ್ದರು.
ಪುರುಷೋತ್ತಮ ಅಂಚನ್ ಸ್ವಾಗತಿಸಿ, ದಿನೇಶ್ ನಿರೂಪಿಸಿ ವಂದಿಸಿದರು.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಕೇಲ್ದೋಡಿ ಶ್ರೀ ವೈದ್ಯನಾಥ ಕೊಡಮಣಿತ್ತಾಯ ಕ್ಷೇತ್ರದಲ್ಲಿ ಪ್ರಕಾಶ್ ಅಂಚನ್ ಹುಟ್ಟೂರ ಸನ್ಮಾನ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*