ಬಂಟ್ವಾಳ

ಸಜೀಪನಡು ಗ್ರಾಮದಲ್ಲೊಂದು ವಿನೂತನ ರುದ್ರಭೂಮಿ ನಿರ್ಮಾಣ

ಬಂಟ್ವಾಳ ತಾಲೂಕಿನ ಸಜೀಪನಡು ಗ್ರಾಮದ ಕಂಚಿನಡ್ಕಪದವಿನ ಸಾರ್ವಜನಿಕ ರುದ್ರಭೂಮಿಯೀಗ ಪವಿತ್ರ ತಾಣವಾಗಿ ಮಾರ್ಪಾಡಾಗುತ್ತಿದೆ.
ಸುಮಾರು ೦.೮೫ ಎಕ್ರೆ ಸ್ಥಳದಲ್ಲಿ ನಿರ್ಮಿಸಲಾದ ಸಾರ್ವಜನಿಕ ಹಿಂದು ರುದ್ರಭೂಮಿಯಲ್ಲಿ ಮೂರ್ತಿಗಳ ರಚನಾ ಕಾರ್ಯ ನಡೆಯುತ್ತಿದೆ.


ರುದ್ರಭೂಮಿ ಸಮಿತಿ ಅಧ್ಯಕ್ಷ ಯಶವಂತ ದೇರಾಜೆ ಮಾರ್ಗದರ್ಶನ, ಅಭಿವೃದ್ಧಿ ಸಮಿತಿ ಅಧ್ಯಕ್ಷ ದೇವದಾಸ ಅಡಪ ಇರಾ ಅವರ ನೇತೃತ್ವದಲ್ಲಿ ಕಾರ್ಯ ಸಾಗಿದೆ.
ಸಜೀಪನಡು ಮಾತ್ರವಲ್ಲದೆ ಅಕ್ಕಪಕ್ಕದ ಸಜೀಪಪಡು, ಸಜೀಪಮೂಡ, ಸಜೀಪಮುನ್ನೂರು, ಚೇಳೂರು, ಇರಾ, ಮಂಚಿ ಗ್ರಾಮಗಳಲ್ಲಿನ ಶವ ಸಂಸ್ಕಾರಕ್ಕೆ ಇಲ್ಲಿ ಅವಕಾಶವಿದೆ. ಈ ಗ್ರಾಮಗಳ ಗ್ರಾಮಸ್ಥರು ರುದ್ರಭೂಮಿಯ ಅಭಿವೃದ್ಧಿ ಸಮಿತಿಯಲ್ಲಿದ್ದಾರೆ.
೩೦ ಲಕ್ಷ ರೂ. ವೆಚ್ಚ


ರುದ್ರಭೂಮಿಯನ್ನು ಸುಮಾರು ೩೦ ಲಕ್ಷ ರೂ. ವೆಚ್ಚದಲ್ಲಿ ಅಭಿವೃದ್ಧಿಗೊಳಿಸಲಾಗುತ್ತಿದೆ. ಈಗಾಗಲೇ ಸುಮಾರು ೪೦ ಅಡಿ ಎತ್ತರದ ಶಿವನ ವಿಗ್ರಹ, ಸತ್ಯ ಹರಿಶ್ಚಂದ್ರನ ಪ್ರತಿಮೆ ನಿರ್ಮಾಣಗೊಂಡಿದೆ. ೩೦ ಅಡಿ ಎತ್ತರದ ತ್ರಿಶೂಲಸ್ತಂಭ, ಡಮರು ರಚನೆ ಕಾರ್ಯ ಪ್ರಗತಿಯಲ್ಲಿದೆ.
ಶ್ರೀ ಕ್ಷೇತ್ರ ಧಮ೯ಸ್ಥಳ ವತಿಯಿಂದ ಒದಗಿಸಲಾದ ದಹನ ಚೇಂಬರ್ ಈಗ ಲಭ್ಯ. ಇನ್ನೊಂದು ದಹನ ಚೇಂಬರ್ ,ಪ್ರವೇಶದ್ವಾರ, ಶವಸಂಸ್ಕಾರದ ಮುನ್ನ ಅಂತಿಮ ದಶ೯ನಕ್ಕಾಗಿ ಮೃತದೇಹವನ್ನಿರಿಸಲು ಶವ ಹಾಗೂ ಸತ್ಯಹರೀಶ್ಚಂದ್ರ ಪ್ರತಿಮೆ ಯ ಸಮ್ಮುಖದಲ್ಲಿ ಕಟ್ಟೆಯೊಂದನ್ನು ನಿಮಿ೯ಸಲಾಗುವುದು ಎಂದು ಅಧ್ಯಕ್ಷ ಯಶವಂತ ಡಿ ತಿಳಿಸಿದ್ದಾರೆ.
ಪರಿಸರ ಸಂರಕ್ಷಣೆಯ ನಿಟ್ಟಿನಲ್ಲಿ ರುದ್ರಭೂಮಿಯ ಸುತ್ತಲೂ ವಿವಿಧ ಜಾತಿಯ ಸಸಿಗಳು, ತೆಂಗಿನ ಗಡವನ್ನು ನೆಟ್ಟು ಪಾಲನೆ ಮಾಡಲಾಗುತ್ತಿದೆ. ರುದ್ರಭೂಮಿಯ ಭದ್ರತೆಯ ದೃಷ್ಠಿಯಿಂದ ಅವರಣ ಗೋಡೆ, ತಡೆಗೋಡೆಯನ್ನು ನಿಮಿ೯ಸಲಾಗುವುದಲ್ಲದೆ, ಸುತ್ತಲೂ ಇಂಟರ್ ಲಾಕ್ ಅಳವಡಿಸಲಾಗುವುದು. ವಿಶೇಷವಾಗಿ ಈ ರುದ್ರಭೂಮಿಗೆ ಶವ ಸಾಗಿಸುವುದಕ್ಕಾಗಿ ಅಂಬುಲೆನ್ಸ್ ಸೇವೆಯನ್ನು ಉಚಿತವಾಗಿ ನೇತಾಜಿ ಯುವಕ ಸಂಘದಿಂದ ಕಲ್ಪಿಸಲಾಗಿದೆ.

ಜಾಹೀರಾತು

 

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts

ಮಂಗಳೂರು ಕಡಲ ತೀರ ʼಕಡಲ ಪವನ ಶಕ್ತಿ ಉತ್ಪಾದನಾ ವಲಯʼವಾಗಿ ಅಭಿವೃದ್ಧಿಪಡಿಸಲು ಕೇಂದ್ರಕ್ಕೆ ಮನವಿ

ನಿಯಮ 377ರ ಅಡಿಯಲ್ಲಿ ಸಮುದ್ರ ತೀರದ ಪವನ ಸಾಮರ್ಥ್ಯದ ಬಗ್ಗೆ ಲೋಕಸಭೆ ಗಮನಸೆಳೆದ ಸಂಸದ ಕ್ಯಾ. ಚೌಟ (more…)

23 minutes ago