ಜಿಲ್ಲಾ ಸುದ್ದಿ

ಮೃತ ಯೋಧ ಕುಟುಂಬಕ್ಕೆಆರ್ಥಿಕ ನೆರವು: ಮುಖ್ಯಮಂತ್ರಿಗೆ ಉಸ್ತುವಾರಿ ಸಚಿವರ ಮನವಿ

ಕಳೆದ ವರ್ಷ ಜುಲೈಯಲ್ಲಿ ಸೇವೆಯಲ್ಲಿದ್ದಾಗ ಮೃತಪಟಟ್ ವಾಯುಸೇನೆಯ ಯೋಧ, ಬೆಳ್ತಂಗಡಿ ತಾಲೂಕಿನ ಏಕನಾಥ ಅವರ ಕುಟುಂಬಕ್ಕೆ ಆರ್ಥಿಕ ನೆರವನ್ನು ಮಂಜೂರು ಮಾಡುವಂತೆ ಅರಣ್ಯ ಹಾಗೂ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈ ಅವರು ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ್ದಾರೆ.
ಚೆನ್ನೈ ತಾಂಬರಂ ವಾಯುನೆಲೆಯಿಂದ ಅಂಡಮಾನ್‍ಗೆ ವಾಯಸೇನೆಯ ವಿಮಾನದಲ್ಲಿ ಪ್ರಯಾಣಿಸುತ್ತಿದ್ದಾಗ ವಿಮಾನವು ಕಳೆದ ವರ್ಷ ಜುಲೈ 22ರಂದು ನಿಗೂಡವಾಗಿ ಕಾಣೆಯಾಗಿ, ಬಳಿಕ ಯೋಧರು ಬದುಕುಳಿಯುವ ಸಾಧ್ಯತೆ ಇಲ್ಲದ್ದರಿಂದ ವಾಯುಸೇನೆಯು ಏಕನಾಥ್ ಹಾಗೂ ಇತರ ಯೋಧರ  ಮರಣ ಪ್ರಮಾಣಪತ್ರ ನೀಡಿದೆ. ಯೋಧನ ಕುಟುಂಬವು ಆರ್ಥಿಕವಾಗಿ ಹಿಂದುಳಿದಿದ್ದು, ಮಕ್ಕಳ ಶೈಕ್ಷಣಿಕ ಹಾಗೂ ಕುಟುಂಬ ನಿರ್ವಹಣೆಯ ನೆಲೆಯಲ್ಲಿ ಏಕನಾಥ ಅವರ ಪತ್ನಿ ಜಯಂತಿ ಅವರಿಗೆ ನೆರವು ನೀಡುವಂತೆ ಉಸ್ತುವಾರಿ ಸಚಿವರು ಏಕನಾಥ ಅವರ ಕುಟುಂಬದ ಸದಸ್ಯರೊಂದಿಗೆ ಮಂಗಳವಾರ ಮುಖ್ಯಮಂತ್ರಿಯವರನ್ನು ಭೇಟಿ ಮಾಡಿ ಮನವಿ ಮಾಡಿದರು.
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ