ಕಲ್ಲಡ್ಕ

ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ’ದೀಪ ಪ್ರದಾನ’ ಕಾರ್ಯಕ್ರಮ


ಕಲ್ಲಡ್ಕ ಶ್ರೀರಾಮ ಪದವಿಪೂರ್‍ವ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ’ದೀಪ ಪ್ರದಾನ’ ಕಾರ್ಯಕ್ರಮ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು.
ಹಿರಿಯಡಗಲದ ಶ್ರೀ ಅಭಿನವ ಹಾಲಸ್ವಾಮೀಜಿ ಮಹಾಸಂಸ್ಥಾನ ಪೀಠಾಧಿಪತಿ ಉಪಸ್ಥಿತರಿದ್ದು ಆಶೀರ್‍ವಾದ ಮಾಡಿದರು.
ವಿದ್ಯಾರ್ಥಿ ಜೀವನದಲ್ಲಿ ಬೆಳೆಸಿಕೊಳ್ಳುವ ಮೌಲ್ಯವು ಜೀವನದ ಕೊನೆಯವರೆಗೂ ಉಳಿಯುವಂತದ್ದು, ಅವುಗಳನ್ನು ಬೆಳೆಸಿಕೊಳ್ಳುವುದು ಅಗತ್ಯ. ಶ್ರೀರಾಮ ವಿದ್ಯಾಕೇಂದ್ರದಲ್ಲಿನ ವಿದ್ಯಾರ್ಥಿಗಳ ಅಚ್ಚುಕಟ್ಟಿನ ರೀತಿ ನೀತಿಯನ್ನು ನೋಡಿ ಸಂತಸ ವ್ಯಕ್ತಪಡಿಸಿ ಹಿರಿಯರಾದ ಡಾ| ಪ್ರಭಾಕರ್ ಭಟ್ ಅವರಿಂದ ಎಳವೆಯಲ್ಲಿಯೇ ಪ್ರಭಾವಿತನಾಗಿದ್ದೆ ಎಂದರು.
ಇನ್ನೋರ್ವ ಅತಿಥಿ ಗುರುಮೀತ್ ಸಿಂಗ್ ನವದೆಹಲಿ ಇವರು ಮಾತನಾಡಿ ಕಾಲೇಜಿನ ವಿದ್ಯಾರ್ಥಿಗಳ ಆಚಾರ- ವಿಚಾರಗಳನ್ನು ಪ್ರಶಂಸಿಸಿದರು.
ತಿರುವನಂತಪುರಂ ಅನಂತ ಪದ್ಮನಾಭದೇವಸ್ಥಾನದ ಟ್ರಸ್ಟಿಯಾಗಿರುವ ಪ್ರಸಾದ್ ಪನಿಕ್ಕರರವರು ಗುರುಕುಲ ರೀತಿಯಲ್ಲಿ ನಡೆಯುವ ವಿದ್ಯಾರ್ಜನೆಯನ್ನು ಶ್ಲಾಘಿಸಿದರು.
ಕಾರ್‍ಯಕ್ರಮದಲ್ಲಿ ರಾಜ್ಯ ಬಿಜೆಪಿ ಪೇರೆಂಟ್ಸ್ ಬಾಡಿ ಮೆಂಬರ್ ಕಿಶೋರ್ ಕುಮಾರ್, ದಾಮೋದರ ಶೆಣೈ ಪಡುಬಿದ್ರಿ, ಪ್ರತಿಭಾ ಪಡುಬಿದ್ರಿ, ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾಗಿರುವ ಡಾ| ಪ್ರಭಾಕರ್ ಭಟ್ ಕಲ್ಲಡ್ಕ, ಸಂಚಾಲಕರಾದ ವಸಂತ ಮಾಧವ, ವಿದ್ಯಾಕೇಂದ್ರದ ಅಧ್ಯಕ್ಷರಾದ ನಾರಾಯಣ ಸೋಮಯಾಜಿ, ಡಾ| ಕಮಲಾ ಪ್ರಭಾಕರ್ ಭಟ್ ಉಪಸ್ಥಿತರಿದ್ದು ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.
ಪ್ರಾಂಶುಪಾಲರಾದ ವಸಂತ ಬಲ್ಲಾಳ್ ಶ್ರೀಮಾನ್ ಸ್ವಾಗತಿಸಿದರು. ವಿದ್ಯಾರ್ಥಿನಿ ಶರಣ್ಯ ಕಾರ್‍ಯಕ್ರಮ ನಿರೂಪಿಸಿ. ವಾತ್ಸಲ್ಯ ವಂದಿಸಿದರು.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ