ಕಲ್ಲಡ್ಕ

ಕಲ್ಲಡ್ಕದಲ್ಲಿ ಮನೆಗಳಿಗೆ ನುಗ್ಗಿದ ಕಳ್ಳರು, ಚಿನ್ನಾಭರಣ ಕಳವು


ಕಲ್ಲಡ್ಕದಲ್ಲಿ ಎರಡು ಮನೆಗಳಿಗೆ ಮಂಗಳವಾರ ರಾತ್ರಿ ಕಳ್ಳರ ತಂಡ ನುಗ್ಗಿದೆ.
ಕಲ್ಲಡ್ಕ ನಿವಾಸಿ ಕೆ.ಸಿ.ನಿಝಾರ್ ಎಂಬವರ ಮನೆಯ ಕಿಟಕಿ ಸರಳು ಮುರಿದು ಪ್ರವೇಶಿಸಿ, ಕಪಾಟಿನಲ್ಲಿಟ್ಟಿದ್ದ ಲಕ್ಷಾಂತರ ರೂ. ಚಿನ್ನಾಭರಣ ಕಳವು ಮಾಡಲಾಗಿದೆ.
ಕಲ್ಲಡ್ಕ ಪೇಟೆಯಲ್ಲಿ ನಿಝಾರ್ ಅವರ ಮನೆ ಇದೆ. ಪತ್ನಿ, ಮಗುವಿನೊಂದಿಗೆ ವಾಸವಿರುವ ನಿಝಾರ್, ಮಂಗಳವಾರ ಮೆಲ್ಕಾರ್‌ನಲ್ಲಿರುವ ಮಾವನ ಮನೆಗೆ ತೆರಳಿದ್ದರು. ಬುಧವಾರ ಬೆಳಗ್ಗೆ ಮನೆಗೆ ವಾಪಾಸ್ ಆದಾಗ ಈ ಕಳವು ಕೃತ್ಯ ಬೆಳಕಿಗೆ ಬಂದಿದೆ.
ಕಳವಾದ ಚಿನ್ನಾಭರಣದ ಮೌಲ್ಯ ಸುಮಾರು ೨.೨೫ ಲಕ್ಷ ರೂ. ಎಂದು ಅಂದಾಜಿಸಲಾಗಿದೆ.
ಮನೆಯೊಳಗೆ ನುಗ್ಗಿದ ಕಳ್ಳರು ಬೆಡ್‌ರೂಂನಲ್ಲಿದ್ದ ಕಪಾಟಿನ ಬಾಗಿಲನ್ನು ಒಡೆದು ಜಾಲಾಡಿದ್ದು ಈ ಸಂದರ್ಭ ಕಪಾಟಿನಲ್ಲಿರಿಸಲಾಗಿದ್ದ ೧೨ ಪವನ್ ಚಿನ್ನಾಭರಣವನ್ನು ದೋಚಿದ್ದು ಕಂಡುಬಂತು. ನಿಝಾರ್ ಚಲನವಲನಗಳ ಬಗ್ಗೆ ಮಾಹಿತಿ ಇದ್ದವರೇ ಈ ಕೃತ್ಯ ನಡೆಸಿರುವ ಸಂಶಯ ವ್ಯಕ್ತವಾಗಿದೆ.


ಇನ್ನೊಂದು ಪ್ರಕರಣ:
ಮಂಗಳವಾರ ರಾತ್ರಿ ಕಲ್ಲಡ್ಕ ಮಸೀದಿ ಹಿಂಬದಿಯ ಇನ್ನೊಂದು ಮನೆಗೂ ಕಳ್ಳರು ನುಗ್ಗಿರುವ ಘಟನೆ ನಡೆದಿದೆ. ಮನೆಯ ಹಿಂಭಾಗಿಲನ್ನು ಒಡೆದು ಒಳ ನುಗ್ಗಿರುವ ಕಳ್ಳರು ಚಿನ್ನಾಭರಣಕ್ಕಾಗಿ ಕಪಾಟನ್ನು ಜಾಲಾಡಿದ್ದಾರೆ. ಆದರೆ ಸಿಗದಿರುವುದರಿಂದ ಕಳ್ಳರು ಬರೀ ಕೈಯಲ್ಲಿ ಹಿಂತಿರುಗಿದ್ದಾರೆ. ಮನೆಯೊಳಗೆ ರಕ್ತದ ಕಲೆಗಳು ಪತ್ತೆಯಾಗಿದ್ದು ಬಾಗಿಲು ಒಡೆಯುವ ಸಂದರ್ಭದಲ್ಲಿ ಕಳ್ಳರ ಕೈಗೆ ಗಾಯವಾಗಿರುವ ಸಾಧ್ಯತೆ ಇದೆ ಎಂದು ಶಂಕಿಸಲಾಗಿದೆ. ಈ ಎರಡೂ ಕೃತ್ಯಗಳನ್ನು ಒಂದೇ ತಂಡ ನಡೆಸಿರುವ ಅನುಮಾನವನ್ನು ಪೊಲೀಸರು ವ್ಯಕ್ತಪಡಿಸಿದ್ದಾರೆ.
ಬಂಟ್ವಾಳ ಉಪ ವಿಭಾಗದ ಡಿವೈಎಸ್ಪಿ ಡಾ. ರವೀಶ್ ಸಿ.ಆರ್., ಬಂಟ್ವಾಳ ನಗರ ಠಾಣೆಯ ಅಪರಾಧ ವಿಭಾಗದ ಎಸ್ಸೈ ಗಂಗಾಧರಪ್ಪ ಹಾಗೂ ಸಿಬ್ಬಂದಿ, ಶ್ವಾನ ದಳ, ಬೆರಳಚ್ಚು ತಜ್ಞರು ಭೇಟಿ ಪರಿಶೀಲನೆ ನಡೆಸಿದ್ದಾರೆ. ಈ ಬಗ್ಗೆ ಬಂಟ್ವಾಳ ನಗರ ಠಾಣೆಯ ಅಪರಾಧ ವಿಭಾಗದಲ್ಲಿ ದೂರು ದಾಖಲಾಗಿದೆ.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ