ಬಂಟ್ವಾಳ ನ್ಯೂಸ್ ವರದಿ:
ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಉರಿಮಜಲು ಎಂಬಲ್ಲಿ ಗಾಂಜಾ ಮಾರುತ್ತಿದ್ದ ಖಚಿತ ವರ್ತಮಾನದ ಮೇರೆಗೆ ಬಂಟ್ವಾಳ ಡಿವೈಎಸ್ಪಿ ರವೀಶ್ ಸಿ.ಆರ್. ನೇತೃತ್ವದ ಪೊಲೀಸ್ ತಂಡ, ಪಿಎಸ್ಐ ನಾಗರಾಜ ಎಚ್. ಮತ್ತು ಸಿಬ್ಬಂದಿ ಜೊತೆ ಸೇರಿ ನಡೆಸಿದ ಕಾರ್ಯಾಚರಣೆಯಲ್ಲಿ ಗಾಂಜಾ ಮಾರುತ್ತಿದ್ದ ಮಹಮ್ಮದ್ ಹ್ಯಾರಿಸ್ ಯಾನೆ ಆಹುಲ್ ಹ್ಯಾರಿಸ್ (34) ಎಂಬಾತನನ್ನು ಬಂಧಿಸಿದೆ.
ಕಂಬಳಬೆಟ್ಟು ದರ್ಗಾ ಬಳಿ ಮನೆ ನಿವಾಸಿಯಾದ ಈತನಿಂದ 300 ಗ್ರಾಮ್ ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದೆ. ಕನ್ಯಾನದಲ್ಲಿ ಪತ್ತೆಯಾದ 13 ಕೆ.ಜಿ. ಗಾಂಜಾ ಪ್ರಕರಣದ ಆರೋಪಿಯಾಗಿರುವ ಈತ ತಲೆಮರೆಸಿಕೊಂಡಿದ್ದ. ಇವನ ಮೇಲೆ ಪುತ್ತೂರು ನಗರ ಠಾಣೆಯಲ್ಲಿಯೂ ಗಾಂಜಾ ಮಾರಾಟದ ಪ್ರಕರಣ ದಾಖಲಾಗಿರುತ್ತದೆ.
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ