ಇಲ್ಲದವರಿಗೆ ಸಹಕಾರ ನೀಡುವುದು ಶ್ರೇಷ್ಠಕಾರ್ಯ: ನಿಜಾಮುದ್ದೀನ್ ಬಾಖವಿ

ದೇವರು ನೀಡಿದ ಸಂಪತ್ತಿನ ಅಲ್ಪಭಾಗವನ್ನಾದರೂ ದಾನ ಮಾಡುವುದರ ಮೂಲಕ ಉಳ್ಳವರೂ ಇಲ್ಲದವರೂ ಸಹಕಾರ ನೀಡಬೇಕು ಎಂದು ಕೇರಳ ಕಣ್ಣೂರಿನ ಪ್ರಸಿದ್ಧ ವಾಗ್ಮಿ ನಿಝಾಮುದ್ದೀನ್ ಬಾಖವಿ ಹೇಳಿದರು.

ಮಾರಿಪಳ್ಳ ಸುಜೀರು ಮಲ್ಲಿ ಹೈದ್ರೋಸಿಯಾ ಜುಮಾ ಮಸೀದಿಯ ಆಶ್ರಯದಲ್ಲಿ ದಫನ ಭೂಮಿ ಖರೀದಿಯ ಸಹಾಯಾರ್ಥವಾಗಿ ಇಲ್ಲಿನ ಶಂಸುಲ್ ಉಲಮಾ ವೇದಿಕೆಯಲ್ಲಿ ಶುಕ್ರವಾರ ರಾತ್ರಿ ನಡೆದ ಬೃಹತ್ ಏಕದಿನ ಧಾರ್ಮಿಕ ಮತ ಪ್ರಭಾಷಣದಲ್ಲಿ ಅವರು ಮಾತನಾಡಿದರು.

ಜಾಹೀರಾತು

ಜಮಾಅತ್‌ಗೊಂದು ದಫನ ಭೂಮಿ ಹೊಂದುದು ಇಂದಿನ ಕಾಲದಲ್ಲಿ ದುಬಾರಿಯಾಗಿದೆ ಪ್ರತೀ ಜಮಾಅತ್‌ನಲ್ಲೊಂದು ದಫನ ಭೂಮಿಯ ಅಗತ್ಯತೆ ಇದೆ ಎಂದು ಕರೆ ನೀಡಿದರು.

ಕಾರ್ಯಕ್ರಮವನ್ನು ಸಮಸ್ತ ಕೇರಳ ಮುಶಾವರದ ಉಪಾಧ್ಯಕ್ಷ ಅಬ್ದುಲ್ ಜಬ್ಬಾರ್ ಉಸ್ತಾದ್ ಮಿತ್ತಬೈಲ್ ಉದ್ಘಾಟಿಸಿದರು. ಸುಜೀರ್ ಮಲ್ಲಿ ಹೈದ್ರೋಶಿಯಾ ಜುಮಾ ಮಸೀದಿಯ ಗೌರವಾಧ್ಯಕ್ಷ ಮೌಲಾನ ಅಬ್ದುಲ್ ರಝಾಕ್ ಹಾಜಿ ಮಲೇಶ್ಯಾ ಅಧ್ಯಕ್ಷತೆ ವಹಿಸಿದ್ದರು. ಇದೇ ಸಂದರ್ಭದಲ್ಲಿ ಅಬ್ದುಲ್ ಜಬ್ಬಾರ್ ಉಸ್ತಾದ್ ಮಿತ್ತಬೈಲ್, ಹಿದಾಯ ಫೌಂಡೇಶನ್ ಸ್ಥಾಪಕಾಧ್ಯಕ್ಷ, ಸಮಾಜ ಸೇವಕ ಖಾಸಿಂ ಅಹ್ಮದ್, ಟಿ.ಕೆ. ಎಂಟರ್‌ಪ್ರೈಸಸ್ ಮಾಲಕ ಟಿ.ಕೆ.ಬಶೀರ್, ಅಬ್ದುಲ್ ರಝಾಕ್ ಹಾಜಿ ಮಲೇಶ್ಯಾ, ಕಾರ್ಯಕ್ರಮದ ಸ್ಥಳ ದಾನಿಯವರನ್ನು ಸನ್ಮಾನಿಸಿ ಗೌರವಿಸಲಾಯಿತು.

ಸಮಸ್ತ ಕಾಸರಗೋಡು ಜೊತೆ ಕಾರ್ಯದರ್ಶಿ ಚೆಂಗಳಂ ಅಬ್ದುಲ್ ಫೈಝಿ, ಮಾರಿಪಳ್ಳ ಬದ್ರಿಯ್ಯೀನ್ ಜುಮಾ ಮಸೀದಿ ಅಧ್ಯಕ್ಷ ಸಿ.ಮಹ್‌ಮೂದ್ ಹಾಜಿ, ಖತೀಬ್ ಖಲೀಲುರ್ರಹ್ಮಾನ್ ದಾರಿಮಿ, ಫರಂಗಿಪೇಟೆ ಜುಮಾ ಮಸೀದಿ ಅಧ್ಯಕ್ಷ ಮುಹಮ್ಮದ್ ಬಾವ, ಖತೀಬ್ ಉಸ್ಮಾನ್ ದಾರಿಮಿ ಸಹಿತ ಮೊದಲಾದವರು ಉಪಸ್ಥಿತರಿದ್ದರು.

ಜಾಹೀರಾತು

ಮುಹಮ್ಮದ್ ಹೈಮಾನ್ ಕಿರಾಅತ್ ಪಠಿಸಿದರು. ದಾರಿಮೀಸ್ ಅಸೋಸಿಯೇಶನ್ ಕರ್ನಾಟಕ ರಾಜ್ಯ ಉಪಾಧ್ಯಕ್ಷ ಮಾಹಿನ್ ದಾರಿಮಿ ಪಾತೂರು ಸ್ವಾಗತಿಸಿದರು.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಇಲ್ಲದವರಿಗೆ ಸಹಕಾರ ನೀಡುವುದು ಶ್ರೇಷ್ಠಕಾರ್ಯ: ನಿಜಾಮುದ್ದೀನ್ ಬಾಖವಿ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*