ಸಜಿಪನಡು ಚಟ್ಟೆಕ್ಕಲ್ ಜಲಾಲಿಯ್ಯ ಮಸೀದಿ ವಾರ್ಷಿಕೋತ್ಸವ, ಸ್ನೇಹ ಸಂಗಮ

ಸಮಾಜದಲ್ಲಿ ಮಾನವೀಯ ಮೌಲ್ಯಗಳನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಧರ್ಮದ ಸಂದೇಶಗಳನ್ನು ಮಕ್ಕಳಿಗೆ ತಲುಪಿಸುವ ಕೆಲಸಗಳು ಹಿರಿಯರಿಂದ ಆಗಬೇಕಾಗಿದೆ ಎಂದು ಮಾಣಿಲ ಶ್ರೀಧಾಮದ ಮೋಹನದಾಸ ಸ್ವಾಮೀಜಿ ಹೇಳಿದರು.

ಸಜಿಪನಡು ಚಟ್ಟೆಕ್ಕಲ್ ಜಲಾಲಿಯ್ಯ ಮಸೀದಿಯ ೫ನೆ ಜಲಾಲಿಯ್ಯ ವಾರ್ಷಿಕೋತ್ಸವದ ಪ್ರಯುಕ್ತ ಶುಕ್ರವಾರ ಸಂಜೆ ನಡೆದ ಸ್ನೇಹ ಸಂಗಮ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಬಣ್ಣ, ಧರ್ಮದ ಹೆಸರಿನಲ್ಲಿ ನಡೆಯುವ ಕಚ್ಚಾಟಗಳನ್ನು ಬಿಟ್ಟು ಮನುಷ್ಯರಾದ ನಾವು ಒಬ್ಬೊಬ್ಬರನ್ನು ಅರ್ಥಹಿಸಿ ಪ್ರೀತಿ ಸೌಹಾರ್ದತೆಯಿಂದ ಜೀವನ ನಡೆಸಬೇಕಾಗಿದೆ. ಜಾತಿ, ಧರ್ಮ ಬೇದ ಭಾವ ಬಿಟ್ಟು ಜನರು ಒಟ್ಟಾದಾಗ ಸಮಾಜದಲ್ಲಿ ಮಾನವೀಯ ಮೌಲ್ಯಗಳು ನೆಲೆನಿಲ್ಲುತ್ತದೆ ಎಂದು ಹೇಳಿದರು.

ಜಾಹೀರಾತು

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬಂಟ್ವಾಳ ತಾಲೂಕು ಪಂಚಾಯತ್ ಅಧ್ಯಕ್ಷ ಚಂದ್ರಹಾಸ ಕರ್ಕೇರ ವಹಿಸಿ ಮಾತನಾಡಿದರು. ಸೈಯದ್ ಮುಶ್ತಾಖುರ್ರಹ್ಮಾನ್ ತಂಙಳ್ ಚಟ್ಟೆಕ್ಕಲ್ ದುಅ ನೆರವೇರಿಸಿದರು. ಸಂತ ತೋಮಾಸ್ ಇಗರ್ಜಿ ಅಮ್ಮೆಂಬಳ ಚೇಳೂರು ಧರ್ಮಗುರು ಫಾದರ್ ವಲೇರಿಯನ್ ಫ್ರೇಂಕ್, ಬಂಟ್ವಾಳ ಉಪ ವಿಭಾಗದ ಡಿವೈಎಸ್ಪಿ ಡಾ. ರವೀಶ್ ಸಿ.ಆರ್., ಸಿಐ ಬಿ.ಕೆ.ಮಂಜಯ್ಯ, ಟ್ರಾಫಿಕ್ ಎಸ್ಸೈ ಚಂದ್ರಶೇಖರಯ್ಯ, ಸಜಿಪನಡು ಗ್ರಾಪಂ ಅಧ್ಯಕ್ಷ ಮುಹಮ್ಮದ್ ನಾಸೀರ್, ಇರಾ ಗ್ರಾಪಂ ಅಧ್ಯಕ್ಷ ಅಬ್ದುಲ್ ರಝಾಕ್, ಸಜಿಪ ಮೂಡಾ ಗ್ರಾಪಂ ಅಧ್ಯಕ್ಷ ಎಂ.ಕೆ.ಗಣಪತಿ ಭಟ್, ಜಿಪಂ ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ, ತಾಪಂ ಸದಸ್ಯ ಸಂಜೀವ ಪೂಜಾರಿ, ತಾಪಂ ಮಾಜಿ ಅಧ್ಯಕ್ಷ ಯಶವಂತ ದೇರಾಜೆ, ಇರಾ ಗ್ರಾಪಂ ಸದಸ್ಯ ಕೆ.ಟಿ.ಸುಧಾಕರ, ಪ್ರಕಾಶ್ ಶೆಟ್ಟಿ ಶ್ರೀಶೈಲಾ, ಗೋಳಿಪಡ್ಪು ಜುಮಾ ಮಸೀದಿ ಅಧ್ಯಕ್ಷ ಬಿ.ರಫೀಕ್, ಸದರ್ ಮುಹಮ್ಮದ್ ಶರೀಫ್ ಸಖಾಫಿ, ಎಸ್ಸೆಸ್ಸೆಫ್ ಬಂಟ್ವಾಳ ಡಿವಿಶನ್ ಅಧ್ಯಕ್ಷ ಅಬ್ದುಲ್ ರಶೀದ್ ಹಾಜಿ ವಗ್ಗ, ಪಾಣೆಮಂಗಳುರು ಸೆಕ್ಟರ್ ಅಧ್ಯಕ್ಷ ಅಕ್ಬರ್ ಮದನಿ, ಚಟ್ಟೆಕಲ್ ಅಧ್ಯಕ್ಷ ಇಸ್ಮಾಯೀಲ್, ಗರೀಬ್ ನವಾಝ್ ಕಮಿಟಿ ಅಧ್ಯಕ್ಷ ಅಬ್ದುಲ್ ರವೂಫ್ ಮೊದಲಾದವರು ಉಪಸ್ಥಿತರಿದ್ದರು. ಸಿರಾಜುದ್ದೀನ್ ಸಖಾಫಿ ಪ್ರಸ್ತಾವಿಸಿ ಸ್ವಾಗತಿಸಿದರು. ಇದೇ ವೇಳೆ ಆಲಡ್ಕದಿಂದ ಚಟ್ಟೆಕ್ಕಲ್ ವರೆಗೆ ಬೈಕ್ ರ್‍ಯಾಲಿ ನಡೆಯಿತು.

ಮಧ್ಯಾಹ್ನ ಚಟ್ಟೆಕ್ಕಲ್ ಜಲಾಲಿಯ್ಯ ಮಸೀದಿಯಲ್ಲಿ ಜುಮಾ ಉದ್ಘಾಟನೆ ನೆರವೇರಿತು. ಸೈಯದ್ ಸೀದಿಕೋಯ ತಂಙಳ್ ನೇತೃತ್ವ ವಹಿಸಿದ್ದರು. ಸೈಯದ್ ಅಬ್ದುಲ್ ಕರೀಂ ತಂಙಳ್, ಸೈಯದ್ ಇಂಬಿಚ್ಚಿಕೋಯ ತಂಙಳ್, ಸೈಯದ್ ಯು.ಎಸ್.ಶಿಹಾಬುದ್ದೀನ್ ತಂಙಳ್, ಸೈಯದ್ ಖಾಸಿಂ ಕೋಯ ತಂಙಳ್, ಸೈಯದ್ ಸಿ.ಟಿ.ಎಂ. ಕುಂಞಿ ಕೋಯ ತಂಙಳ್, ಸೈಯದ್ ಅಮೀರ್ ಅಸ್ಸಖಾಫ್ ತಂಙಳ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಸಜಿಪನಡು ಚಟ್ಟೆಕ್ಕಲ್ ಜಲಾಲಿಯ್ಯ ಮಸೀದಿ ವಾರ್ಷಿಕೋತ್ಸವ, ಸ್ನೇಹ ಸಂಗಮ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*