ಶ್ರೀರಾಮ ವಿದ್ಯಾಕೇಂದ್ರದಲ್ಲಿ ಕಿಷ್ಕಿಂಧಾ ಆಟಿಕಾವನ-ತೂಗುಸೇತುವೆ

ಮಕ್ಕಳ ಮಾನಸಿಕ, ಬೌದ್ಧಿಕ ವಿಕಸನಕ್ಕೆ ಪೂರಕವಾಗಿ ಶಾರೀರಿಕ ಚಟುವಟಿಕೆಗಳನ್ನು ಹಾಗೂ ಪರಿಸರದ ಬಗ್ಗೆ ಉತ್ತಮ ಭಾವನೆಗಳನ್ನು ಜಾಗೃತ ಮಾಡುವ ಹೊರಾಂಗಣ ಚಟುವಟಿಕೆಗಳು ಅವಶ್ಯಕವಾಗಿದ್ದು, ’ಕಿಷ್ಕಿಂಧಾಆಟಿಕಾವನ ಮಗುವಿನ ಸೃಜನಾತ್ಮಕ ಚಟುವಟಿಕೆಗಳಿಗೆ ಪೂರಕವಾಗಿ ನಿರ್ಮಿಸಲಾಗಿದೆ ಎಂದು ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು ಅಧ್ಯಕ್ಷ ಡಾ| ಪ್ರಭಾಕರ ಭಟ್ ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದ ಪ್ರಾಥಮಿಕ ಶಾಲಾ ವಿಭಾಗದಲ್ಲಿ ನೂತನವಾಗಿ ನಿರ್ಮಿಸಲಾದ ಮಕ್ಕಳ ಆಟಿಕಾ ಉದ್ಯಾನವನದ ಉದ್ಘಾಟನಾ ಸಂದರ್ಭ ಹೇಳಿದರು.

ಆಟಿಕಾವನದಲ್ಲಿ ತೆರೆದಿಡಲಾದ ಕರಿಹಲಗೆ ಗೋಡೆಯಲ್ಲಿ ಮಗು ಯಾವಾಗ ಬೇಕಾದರೂ ಚಿತ್ರ ಮಾಡುವ        ಸೃಜನಶೀಲತೆಗೆ ಅವಕಾಶಕ್ಕಾಗಿ ವಿಕಸನದ ಭಿತ್ತಿ ಪತ್ರ ನಿರ್ಮಿಸಲಾಗಿದೆ. ವಿರಚನಕುಟೀರದಲ್ಲಿ ಮಣ್ಣಿನಲ್ಲಿ ಆಟವಾಡುವ ಆಸಕ್ತಿಗೆ ಪೂರಕವಾಗಿ, ಮೂರ್ತಿ ರಚನೆ, ಮಣ್ಣಿನ ಮಾದರಿಗಳನ್ನು ಮಾಡುವುದಕ್ಕೆ ಅವಕಾಶ ನೀಡಲಾಗಿದೆ. ಶಾರೀರಿಕ ವಿಕಸನಕ್ಕೆ ಬೇಕಾದ ಭಾವನಾತ್ಮಕ ಸಂಗತಿಗಳನ್ನು ಇಲ್ಲಿ ಅಳವಡಿಸಲಾಗಿದೆ. ನೇತ್ರಾವತಿ ಜಲಧಾರೆಯನ್ನು ನಿರ್ಮಿಸಿದ್ದು, ನೀರಿನ ಅವಶ್ಯಕತೆಯನ್ನು ತಿಳಿದುಕೊಳ್ಳುವ ಹಾಗೆ ಮಾಡಲಾಗಿದೆ. ತೂಗುಸೇತುವೆ ನಿರ್ಮಾಣ ವಿಶೇಷ ಆಕರ್ಷಣೆಯಾಗಿದ್ದು,     ಗಿರೀಶ್ ಭಾರದ್ವಾಜ್ ಮಾರ್ಗದರ್ಶನದಲ್ಲಿ ರೂಪಿಸಲಾಗಿದೆ ಎಂದು ವಿವರಿಸಿದರು.

ಹಲವು ಭಾವನಾತ್ಮಕ ಸಂಗತಿಗಳನ್ನು ಜೋಡಿಸಿ ಆಟಿಕವನವನ್ನು ನಿರ್ಮಾಣ ಮಾಡಲಾಗಿದೆ. ಮಗು ಎಲ್ಲಾ ಹಂತದಲ್ಲೂ ಬೆಳೆಯಬೇಕು. ಸಂತೋಷದಿಂದ ನಲಿನಲಿದು ಕಲಿಯಬೇಕು. ಆನಂದದ ಕಲಿಕೆಗೆ ಪೂರಕವಾಗುವಂತೆ ಎಳೆಯ ವಯಸ್ಸಿನ ಮಕ್ಕಳ ಮೆದುಳಿನ ಬೆಳವಣಿಗೆಗೆ ಪೂರಕವಾಗಿ ವಿವಿಧ ಚಟುವಟಿಕೆಗಳಿಗೆ ಅವಕಾಶ ಮಾಡಿಕೊಡಲಾಗಿದೆ. ಮಗುವಿನ ಮನಸ್ಸನ್ನು ಅರಳಿಸುವ ಶಿಕ್ಷಣ ನೀಡುವುದು ಅವಶ್ಯವಾಗಿದೆ ಎಂದು ತಿಳಿಸಿದರು.

ಜಾಹೀರಾತು

ಶ್ರೀರಾಮ ವಿದ್ಯಾಕೇಂದ್ರದ ಆಟಿಕಾವನದಲ್ಲಿ ವಿಶೇಷವಾಗಿ ನಿರ್ಮಿಸಲಾದ ತೂಗುಸೇತುವೆಯನ್ನು ಪದ್ಮಶ್ರೀ ಪುರಸ್ಕೃತ ತೂಗುಸೇತುವೆಯ ಸರದಾರ ಗಿರೀಶ್ ಭಾರದ್ವಾಜ್ ಉದ್ಘಾಟಿಸಿದರು. ಮಕ್ಕಳ ಸೃಜನಶೀಲ ಚಟುವಟಿಕೆಗಳಿಗೆ ಅವಕಾಶ ನೀಡುವ ವಿಕಸನದ ಭಿತಿಯನ್ನು ಉದ್ಯಮಿ ರಾಜೇಂದ್ರ ಮೈಸೂರು ಚಿತ್ರ ಬಿಡಿಸುವ ಮೂಲಕ ಅನಾವರಣಗೊಳಿಸಿದರು. ಮಣ್ಣಿನ ಮಡಿಕೆ-ಮಾದರಿಗಳನ್ನು ತಯಾರಿಸುವ ವಿರಚನಕುಟೀರಕ್ಕೆ ಉದ್ಯಮಿ ವಸಂತ ಶೆಟ್ಟಿ ಚಾಲನೆ ನೀಡಿದರು. ನಾಮಫಲಕವನ್ನು ಲಯನ್ ಅರುಣ್ ಶೆಟ್ಟಿ ಅನಾವರಣಗೊಳಿಸಿದರು. ಬಟನ್ ಅದುಮುವ ಮೂಲಕ ಉದ್ಯಮಿ ಪ್ರಕಾಶ್ ಶೆಟ್ಟಿ ಬೆಂಗಳೂರು ನೇತ್ರಾವತಿ ಜಲಧಾರೆಯನ್ನು ಹರಿಸಿದರು. ಮಕ್ಕಳ ಆಟಕ್ಕಾಗಿ ನಿರ್ಮಿಸಲಾದ ವೈವಿಧ್ಯಮಯ ಉಯ್ಯಾಲೆಗಳಿಗೆ ವೀಣಾ ಶಶಿಧರ ಮಾರ್ಲ ಚಲಾವಣೆ ಮಾಡಿದರು.

ಈ ಸಂದರ್ಭದಲ್ಲಿ ಉದ್ಯಮಿಗಳಾದ ಸುಧಾಕರ ಶೆಟ್ಟಿ, ವಿಜಯಕುಮಾರ್ ಶೆಟ್ಟಿ, ಬಾಲಕೃಷ್ಣ ಶೆಟ್ಟಿ, ರಮಾನಂದ ಶೆಟ್ಟಿ, ಡಾ| ಕಮಲಾ ಪ್ರಭಾಕರ ಭಟ್, ಚೆನ್ನಪ್ಪ ಕೋಟ್ಯಾನ್, ಆಡಳಿತ ಮಂಡಳಿ ಅಧ್ಯಕ್ಷ ನಾರಾಯಣ ಸೋಮಯಾಜಿ, ಸಂಚಾಲಕ ವಸಂತ ಮಾಧವ, ಮುಖ್ಯೋಪಾಧ್ಯಾಯ ರವಿರಾಜ್, ಕಾಲೇಜಿನ ಅಭಿವೃದ್ಧಿ ಸಮಿತಿ ಅಧ್ಯಕ್ಷ ಶಶಿಧರ ಮಾರ್ಲ, ಪ್ರಾಥಮಿಕ ಶಾಲಾಭಿವೃದ್ಧಿ ಸಮಿತಿ ಕಾರ್ಯದರ್ಶಿ ಜಯರಾಮ ರೈ, ಪ್ರೌಢಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ವಿಶ್ವನಾಥ ಪ್ರಭು ಮೊದಲಾದವರು ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಶ್ರೀರಾಮ ವಿದ್ಯಾಕೇಂದ್ರದಲ್ಲಿ ಕಿಷ್ಕಿಂಧಾ ಆಟಿಕಾವನ-ತೂಗುಸೇತುವೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*