ರಾಜ್ಯ ಬಜೆಟ್: ಜಿಲ್ಲೆಗೆ ಏನೇನು?

ರಾಜ್ಯ ಬಜೆಟ್ ನಲ್ಲಿ ನಮಗೆಷ್ಟು ಪಾಲು ಎಂದು ನೋಡುವುದು ಸಹಜ. ಅದರಂತೆ ಸಿಎಂ ಸಿದ್ಧರಾಮಯ್ಯ ಇಂದು ಮಂಡಿಸಿದ ಬಜೆಟ್ ನಲ್ಲಿ ದಕ್ಷಿಣ ಕನ್ನಡ ಜಿಲ್ಲೆಗೆ ಏನೇನು ಸಿಕ್ಕಿದೆ ನೋಡೋಣ.

  • 50 ಕೋಟಿ ರೂ. ವೆಚ್ಚದಲ್ಲಿ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಸಂಪರ್ಕಿಸುವ ರಾಜ್ಯ ಹೆದ್ದಾರಿ-67ರ ಮಂಗಳೂರು-ಅತ್ರಾಡಿ ರಸ್ತೆಯಲ್ಲಿ 2.5 ಕಿ.ಮೀ. ಉದ್ದ ರಸ್ತೆಯ ಅಭಿವೃದ್ಧಿ ( ಕಾವೂರು-ಮರಕಡ ಮಹಾನಗರಪಾಲಿಕೆ ಗಡಿಯಿಂದ ಕೆಂಜಾರು ವಿಮಾನ ನಿಲ್ದಾಣದ ಪ್ರವೇಶ ದ್ವಾರದವರೆಗೆ ಚತುಷ್ಫಥ ರಸ್ತೆ).
  •  ಮಂಗಳೂರು ಅಂತಾರಾಷ್ಟ್ರೀಯ ವಿಮಾನನಿಲ್ದಾಣದ ವಿಸ್ತರಣೆಗೆ 286 ಎಕರೆ ಭೂಸ್ವಾಧೀನಕ್ಕಾಗಿ ಭಾರತ ವಿಮಾನ ನಿಲ್ದಾಣ ಪ್ರಾಧಿಕಾರಕ್ಕೆ ಪ್ರಸ್ತಾವನೆ- ರಾಜ್ಯ ಸರಕಾರದಿಂದ ಅಗತ್ಯ ಸೌಲಭ್ಯ
  • ಮೊಗವೀರರು, ಬೆಸ್ತರ ಸಮಗ್ರ ಅಭಿವೃದ್ಧಿಗಾಗಿ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದ ಸ್ಥಾಪನೆ
  • 10 ಕೋಟಿ ರೂ. ವೆಚ್ಚದಲ್ಲಿ ಜಿಲ್ಲಾ ವೆನ್‍ಲಾಕ್ ಆಸ್ಪತ್ರೆ ಮೇಲ್ದರ್ಜೆಗೆ
  •  3 ಕೋಟಿ ರೂ. ವೆಚ್ಚದಲ್ಲಿ ಮಂಗಳೂರಿನ ವೆನ್‍ಲಾಕ್ ಆಸ್ಪತ್ರೆಯಲ್ಲಿ ಬೆಂಗಳೂರಿನ ಇಂದಿರಾಗಾಂಧಿ ಮಕ್ಕಳ ಆಸ್ಪತ್ರೆಯ ಮಾದರಿಯಲ್ಲಿ ಪ್ರಾದೇಶಿಕ ಹಾಗೂ ಉನ್ನತ ಮಕ್ಕಳ ಆರೋಗ್ಯ ಸಂಸ್ಥೆಯ ಸ್ಥಾಪನೆ
  •  ಮಂಗಳೂರು ಮೀನುಗಾರಿಕಾ ಬಂದರಿನಲ್ಲಿ ದೋಣಿಗಳ ಸುರಕ್ಷಿತ ಇಳಿದಾಣಕ್ಕಾಗಿ 5 ಕೋಟಿ ರೂ. ವೆಚ್ಚದಲ್ಲಿ ಹಾಲಿ ಜೆಟ್ಟಿಯನ್ನು ಇನ್ನೂ 75 ಮೀಟರ್ ವಿಸ್ತರಣೆ
  •  ಕರಾವಳಿಯ ಮೀನುಗಾರರಿಗೆ ಮತ್ಸ್ಯಾಶ್ರಯ ಯೋಜನೆಯಡಿ 3000 ಮನೆಗಳ ನಿರ್ಮಾಣ
  •  ಕರಾವಳಿಯ 200 ಮಂಜುಗಡ್ಡೆ ಸ್ಥಾವರಗಳಿಗೆ, 35  ಶೈತ್ಯಾಗಾರಗಳಿಗೆ ವಿದ್ಯುಚ್ಛಕ್ತಿ ಮೇಲೆ ನೀಡುವ ಸಹಾಯಧನ ಪ್ರತೀ ಯುನಿಟ್ ವಿದ್ಯುತ್‍ಗೆ ರೂ. 1.75ಕ್ಕೆ ಹೆಚ್ಚಳ
  •  ಕರಾವಳಿಯ ನದಿಗಳನ್ನು ಜೋಡಿಸುವ ಪಶ್ಚಿಮವಾಹಿನಿ ಯೋಜನೆಗೆ 100 ಕೋಟಿ ರೂ.
  •  ಈ ವರ್ಷದಿಂದ ಮಂಗಳೂರು ತಾಲೂಕಿನ ಸಸಿಹಿತ್ಲು ಕಡಲ ತೀರದಲ್ಲಿ ರಾಷ್ಟ್ರೀಯ ವಾರ್ಷಿಕ ಸರ್ಫಿಂಗ್ ಉತ್ಸವ ಆಯೋಜನೆ 
  •  ಮೂಡಬಿದ್ರೆ ಹಾಗೂ ಕಡಬ ಪ್ರತ್ಯೇಕ ತಾಲೂಕು ಸ್ಥಾಪನೆ
  •  ಬಂಟ್ವಾಳದಲ್ಲಿ ನೂತನ ಆರ್.ಟಿ.ಓ. ಕಚೇರಿ ಸ್ಥಾಪನೆ
  •  ಮಂಗಳೂರಿನಲ್ಲಿ ಹಜ್‍ಭವನ ನಿರ್ಮಾಣಕ್ಕೆ 10 ಕೋಟಿ ರೂ. ಅನುದಾನ
  •  ಕರಾವಳಿ ಅಭಿವೃದ್ಧಿ ಪ್ರಾಧಿಕಾರಕ್ಕೆ 20 ಕೋಟಿ ರೂ. ಅನುದಾನ
  •  ಮಂಗಳೂರಿನಲ್ಲಿ ಸಮುದ್ರ ನೀರು ಸಂಸ್ಕರಣಾ ಘಟಕ ಸ್ಥಾಪನೆ
  •  ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಬ್ಯಾರಿ ಅಧ್ಯಯನ ಪೀಠ ಸ್ಥಾಪನೆ
  • ಪಿಲಿಕುಲ ಪ್ರಾದೇಶಿಕ ವಿಜ್ಞಾನ ಕೇಂದ್ರದಲ್ಲಿ 35.69 ಕೋಟಿ ರೂ. ವೆಚ್ಚದಲ್ಲಿ ಅತ್ಯಾಧುನಿಕ ತಾರಾಲಯ ಡಿಸೆಂಬರ್ 2017ರಲ್ಲಿ ಪ್ರಾರಂಭ
  •  ಮಂಗಳೂರು ಜಿಲ್ಲಾ ನ್ಯಾಯಾಲಯದ ಛಾವಣಿಯಲ್ಲಿ ಗ್ರಿಡ್ ಸಂಪರ್ಕವಿರುವ ಸೋಲಾರ್ ಛಾವಣಿ ಅಳವಡಿಕೆ
  •  ಗಲ್ಫ್ ರಾಷ್ಟ್ರಗಳಲ್ಲಿ ಕೆಲಸ ಮಾಡಿ ಹಿಂದಿರುಗುವ ನಿರುದ್ಯೋಗಿಗಳಿಗೆ ಸ್ವಯಂ ಉದ್ಯೋಗ ಕೈಗೊಳ್ಳಲು ಕೇರಳ ಮಾದರಿಯ ಕಾರ್ಯಕ್ರಮ

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ರಾಜ್ಯ ಬಜೆಟ್: ಜಿಲ್ಲೆಗೆ ಏನೇನು?"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*