ವಿಟ್ಲ

ಮಾ.17: ಕೆಲಿಂಜ: ಅನುಸ್ಮರಣೆ: ಧಾರ್ಮಿಕ ಪ್ರವಚನ

ಎಸ್‌ಕೆಎಸ್‌ಎಸ್‌ಎಫ್ ಕೆಲಿಂಜ ಶಾಖೆಯ ದಶ ವಾರ್ಷಿಕದ ಪ್ರಯುಕ್ತ ಸಮಸ್ತದ ಅಗಲಿದ ನೇತಾರರ ಅನುಸ್ಮರಣೆ ಹಾಗೂ ಕೇರಳದ ಅದ್ಭುತ ಪ್ರತಿಭೆ ಮಾಸ್ಟರ್ ಮುಹಮ್ಮದ್ ಸ್ವಾಲಿಹ್ ಬತ್ತೇರಿ ಅವರಿಂದ ಏಕದಿನ ಧಾರ್ಮಿಕ ಪ್ರವಚನ ಮಾ. ೧೭ರಂದು ಸಂಜೆ ಕೆಲಿಂಜ ಮುಹಿಯುದ್ದೀನ್ ಜುಮಾ ಮಸೀದಿಯ ವಠಾರದಲ್ಲಿ ನಡೆಯಲಿದೆ ಎಂದು ಅಬ್ಬಾಸ್ ದಾರಿಮಿ ಕೆಲಿಂಜ ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ನಮ್ಮ ಸಂಘಟನೆ ದಶವಾರ್ಷಿಕವನ್ನು ಆಚರಿಸುತ್ತಿದೆ. ಇದರ ಪ್ರಯುಕ್ತ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು ತಿಳಿಸಿದರು.

ಈ ಕಾರ್ಯಕ್ರಮದಲ್ಲಿ ಸಯ್ಯದ್ ಹುಸೈನ್ ಬಾ ಅಲವಿ ತಂಙಳ್ ದುವಾ ಆಶೀರ್ವಚನ ನೀಡಲಿದ್ದು, ಸಮಾರಂಭದ ಅಧ್ಯಕ್ಷತೆಯನ್ನು ಸಮಸ್ತದ ಉಪಾಧ್ಯಕ್ಷ ಶೈಖುನಾ ಅಬ್ದುಲ್ ಜಬ್ಬಾರ್ ಉಸ್ತಾದ್ ವಹಿಸಲಿದ್ದಾರೆ ಎಂದು ತಿಳಿಸಿದರು.

ಜಾಹೀರಾತು

ಪತ್ರಿಕಾಗೋಷ್ಠಿಯಲ್ಲಿ ಮಹಮ್ಮದ್ ಇಸ್ಮಾಯಿಲ್ ಮುನ್ನ, ಶರೀಫ್ ಕೆಲಿಂಜ, ರಫೀಕ್ ಪಾತ್ರತೋಟ ಮೊದಲಾದವರು ಉಪಸ್ಥಿತರಿದ್ದರು.

ಜಾಹೀರಾತು
Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.