ವಿಟ್ಲ

ಮಾ.19ರಂದು ದಲಿತ್ ಸೇವಾ ಸಮಿತಿ ವತಿಯಿಂದ ಅಂಗಾಂಗ ದಾನ, ನೇತ್ರದಾನ ನೋಂದಾವಣೆ

ದಕ್ಷಿಣ ಕನ್ನಡ ಜಿಲ್ಲಾ ದಲಿತ್ ಸೇವಾ ಸಮಿತಿ ವಿಟ್ಲ ಇದರ ವತಿಯಿಂದ ಅಂಗಾಂಗ ದಾನದ ಬಗ್ಗೆ ಮಾಹಿತಿ ಮತ್ತು ನೇತ್ರ ದಾನದ ಬಗ್ಗೆ ಹೆಸರು ನೊಂದಾವಣೆ ಕಾರ್ಯಕ್ರಮ ಮಾರ್ಚ್ 19ರ ಭಾನುವಾರ ವಿಟ್ಲದ ಸರ್ಕಾರಿ ಶಾಲೆಯ ಸಭಾಂಗಣದಲ್ಲಿ ನಡೆಯಲಿದೆ ಎಂದು ಜಿಲ್ಲಾ ದಲಿತ್ ಸೇವಾ ಸಮಿತಿಯ ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ್ ಯು ವಿಟ್ಲ ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಈಗಾಲೇ 10 ಮಂದಿ ನೇತ್ರಾದಾನ ಮಾಡಲು ಮುಂದೆ ಬಂದಿದ್ದಾರೆ. ನೇತ್ರದಾನ ಮಾಡಲು ಸಾರ್ವಜನಿಕರಿಗೂ ಹೆಸರು ನೊಂದಾವಣೆ ಮಾಡಲು ಅವಕಾಶ ಕಲ್ಪಿಸಲಾಗಿದೆ. ಕಾರ್ಯಕ್ರಮವನ್ನು ವಿಟ್ಲ ಎಸೈ ನಾಗರಾಜ್ ಉದ್ಘಾಟಿಸಲಿದ್ದು, ದಕ್ಷಿಣ ಕನ್ನಡ ಜಿಲ್ಲಾ ದಲಿತ್ ಸೇವಾ ಸಮಿತಿ ಜಿಲ್ಲಾಧ್ಯಕ್ಷ ಬಿ.ಕೆ ಸೇಸಪ್ಪ ಬೆದ್ರಕಾಡು ಅಧ್ಯಕ್ಷತೆ ವಹಿಸಲಿದ್ದಾರೆ. ವಿಟ್ಲ ಸುರಕ್ಷಾ ಹೆಲ್ತ್ ಸೆಂಟರ್‌ನ ಡಾ. ಗೀತಾಪ್ರಕಾಶ್ ಅಂಗಾಂಗ ದಾನದ ಬಗ್ಗೆ ಮಾಹಿತಿ ನೀಡಲಿದ್ದಾರೆ. ಪಡುಬೆಟ್ಟು ಶ್ರೀ ಆದಿನಾಗಬ್ರಹ್ಮ ಗಡಿಯಾಡಿ ಮೊಗೇರ್ಕಳ ಸೇವಾ ಟ್ರಸ್ಟ್‌ನ ಅಧ್ಯಕ್ಷ ರವೀಂದ್ರ ಪಡಬೆಟ್ಟು, ಬಂಟ್ವಾಳ ನಲಿಕೆಯವರ ಸಮಾಜ ಸೇವಾ ಸಂಘದ ಮಹಿಳಾ ಅಧ್ಯಕ್ಷೆ ಚಿನ್ನಮ್ಮ, ಬಂಟ್ವಾಳ ದಲಿತ್ ಸೇವಾ ಸಮಿತಿ ಮಹಿಳಾ ಘಟಕದ ಅಧ್ಯಕ್ಷೆ ಚಂದ್ರಾವತಿ ಎಮ್ ಮಾಣಿಲ, ಬಂಟ್ವಾಳ ನಲಿಕೆಯವರ ಸಮಾಜ ಸೇವಾ ಸಂಘದ  ಅಧ್ಯಕ್ಷ ರಮೇಶ್ ಮೊದಲಾದವರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಗೋಪಾಲ ನೇರಳಕಟ್ಟೆ, ಮೋಹನದಾಸ ಯು, ಸೋಮಪ್ಪ ಸುರುಳಿಮೂಲೆ, ಸುಪ್ರೀತ ಪಿಲಿಂಜ ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ