ಬಂಟ್ವಾಳ

ಬಂಟ್ವಾಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ರಜತವರ್ಷಾಚರಣೆ ಸಮಾರೋಪ

ಬಂಟ್ವಾಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ರಜತ ವರ್ಷಾಚರಣೆ ಹಿನ್ನೆಲೆಯಲ್ಲಿ ಬಂಟ್ವಾಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಪ್ರೆಸ್ ಕ್ಲಬ್ ಬಂಟ್ವಾಳ ಸಹಭಾಗಿತ್ವದಲ್ಲಿ ಬಿ.ಸಿ.ರೋಡಿನ ಲಯನ್ಸ್ ಸೇವಾ ಮಂದಿರದಲ್ಲಿ ಮಂಗಳವಾರ  ರಜತವರ್ಷಾಚರಣೆ ಸಮಾರೋಪ ಸಮಾರಂಭ ನಡೆಯಿತು.

ಈ ಸಂದರ್ಭ ಮುಖ್ಯ ಅತಿಥಿಗಳಾಗಿ ಮಾತನಾಡಿದ ಪ್ರಗತಿಪರ ಕೃಷಿಕ ರಾಜೇಶ್ ನಾಯ್ಕ್ ಉಳೇಪಾಡಿಗುತ್ತು ,  ಇಂದು ಬದಲಾಗುತ್ತಿರುವ ಪತ್ರಿಕೋದ್ಯಮ ಸನ್ನಿವೇಶಗಳು ಹಾಗೂ ಜನರ ಮನೋಸ್ಥಿತಿಯ ಕುರಿತು ವಿಶ್ಲೇಷಿಸಿದರು. ಜನಸಾಮಾನ್ಯರು ಸಕಾರಾತ್ಮಕ ವಿಚಾರಗಳ ಕುರಿತು ಆಸಕ್ತಿ ವಹಿಸಿದರೆ, ಮಾಧ್ಯಮಗಳೂ ಅದನ್ನೇ ನೀಡುತ್ತವೆ. ಇಂದು ಉತ್ತಮ ವಿಚಾರಗಳು ಬೆಳಕಿಗೆ ಬರಲು ಮಾಧ್ಯಮಗಳೊಂದಿಗೆ ಜನಸಾಮಾನ್ಯರ ಸಹಭಾಗಿತ್ವವೂ ಬೇಕಾಗಿದೆ ಎಂದು ಅವರು ಹೇಳಿದರು.

ಜಾಹೀರಾತು

ಇನ್ನೋರ್ವ ಮುಖ್ಯ ಅತಿಥಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಭೂಷಣ್ ಜಿ. ಬೊರಸೆ ಮಾತನಾಡಿ, ಪತ್ರಕರ್ತರಿಂದ ಪೊಲೀಸ್ ಅಧಿಕಾರಿಗಳೂ ಹಲವು ಬಾರಿ ಮಾಹಿತಿ ಪಡೆಯುವುದಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪತ್ರಕರ್ತರು ಮತ್ತು ಪೊಲೀಸ್ ನಡುವೆ ಉತ್ತಮ ಬಾಂಧವ್ಯ ಏರ್ಪಟ್ಟಿದೆ ಎಂದು ಹೇಳಿದರು.

ಬಂಟ್ವಾಳ ತಾಲೂಕು ಪಂಚಾಯಿತಿ ಅಧ್ಯಕ್ಷ ಚಂದ್ರಹಾಸ ಕರ್ಕೇರ ಪೂರ್ವಾಧ್ಯಕ್ಷರಾದ ಸ್ಥಾಪಕಾಧ್ಯಕ್ಷ ಕೆ. ಬಾಲಕೃಷ್ಣ ಗಟ್ಟಿ, ಜಯಾನಂದ ಪೆರಾಜೆ, ಇಬ್ರಾಹಿಂ ಅಡ್ಕಸ್ಥಳ, ವೆಂಕಟೇಶ ಬಂಟ್ವಾಳ, ಸಂದೀಪ ಸಾಲ್ಯಾನ್, ವಿಷ್ಣುಗುಪ್ತ ಪುಣಚ ಹಾಗೂ ಈಗಿನ ಅಧ್ಯಕ್ಷ ಮೌನೇಶ ವಿಶ್ವಕರ್ಮ ಅವರನ್ನು ಸನ್ಮಾನಿಸಿದರು. ಈ ಸಂದರ್ಭ ಮಾತನಾಡಿದ ಅವರು ರಾಜಕಾರಣಿಗಳು ಸರಿದಾರಿಯಲ್ಲಿ ನಡೆಯಲು ಪತ್ರಕರ್ತರ ಪಾತ್ರ ಮಹತ್ವದ್ದು ಎಂದರು.

ಜಾಹೀರಾತು

ಸಮಾರೋಪ ಭಾಷಣ ಮಾಡಿದ ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಎನ್. ರಾಜು, ಇಂದು ತಾಲೂಕು ಮಟ್ಟದಲ್ಲಿ ಕೆಲಸ ಮಾಡುವ ಪತ್ರಕರ್ತರ ಸ್ಥಿತಿ ಶೋಚನೀಯವಾಗಿದ್ದು, ಸೌಲಭ್ಯ ವಂಚಿತರಾಗಿದ್ದಾರೆ. ಇವರ ಕಲ್ಯಾಣಕ್ಕೆ ಆರೋಗ್ಯ ರಕ್ಷೆ, ಬಸ್ ಪಾಸ್ ನಂಥ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು, ಇದಕ್ಕೆ ಪತ್ರಕರ್ತರ ಸಂಘಟಿತ ಪ್ರಯತ್ನ ಅಗತ್ಯ ಎಂದರು. ಬಂಟ್ವಾಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ರಾಜ್ಯದಲ್ಲೇ ಗುರುತಿಸುವಂಥ ಸಾಧನೆ ಮಾಡಿದೆ ಎಂದು ಶ್ಲಾಘಿಷಿದರು.

ಈ ಸಂದರ್ಭ ಶುಭ ಹಾರೈಸಿದ ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಜಗನ್ನಾಥ ಶೆಟ್ಟಿ ಬಾಳ, ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಕೊಡುಗೆಯನ್ನು ಸ್ಮರಿಸಿದರು.

ಜಾಹೀರಾತು

ರಜತ ವರ್ಷಾಚರಣಾ ಸಮಿತಿ ಅಧ್ಯಕ್ಷ ಇಬ್ರಾಹಿಂ ಅಡ್ಕಸ್ಥಳ, ಪ್ರೆಸ್ ಕ್ಲಬ್ ಅಧ್ಯಕ್ಷ ಪ್ರಶಾಂತ್ ಪುಂಜಾಲಕಟ್ಟೆ, ಕಾರ್ಯನಿರತ ಪತ್ರಕರ್ತರ ಸಂಘದ ಸ್ಥಾಪಕಾಧ್ಯಕ್ಷ ಕೆ.ಬಾಲಕೃಷ್ಣ ಗಟ್ಟಿ, ಅಧ್ಯಕ್ಷ ಮೌನೇಶ ವಿಶ್ವಕರ್ಮ, ತಾಪಂ ಉಪಾಧ್ಯಕ್ಷ ಅಬ್ಬಾಸ್ ಆಲಿ, ಸಾಮಾಜಿಕ ಮುಖಂಡರಾದ ಕೆ.ಹರಿಕೃಷ್ಣ ಬಂಟ್ವಾಳ, ಲಯನ್ಸ್ ಕ್ಲಬ್ ನ ದಾಮೋದರ, ಜಿಪಂ ಸದಸ್ಯೆ ಕಮಲಾಕ್ಷಿ ಪೂಜಾರಿ, ತಾಪಂ ಸದಸ್ಯ ಪ್ರಭಾಕರ ಪ್ರಭು ಉಪಸ್ಥಿತರಿದ್ದರು.

ಬಂಟ್ವಾಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ರಜತ ವರ್ಷಾಚರಣಾ ಸಮಿತಿ ಸಂಚಾಲಕ ಹರೀಶ ಮಾಂಬಾಡಿ ಸ್ವಾಗತಿಸಿದರು. ಪತ್ರಕರ್ತ ವಿಷ್ಣುಗುಪ್ತ ಪುಣಚ ವಂದಿಸಿದರು. ಪತ್ರಕರ್ತ ರತ್ನದೇವ ಪುಂಜಾಲಕಟ್ಟೆ ನಿರ್ವಹಿಸಿದರು.

ಕಾರ್ಯಾಗಾರ:

ಜಾಹೀರಾತು

ಬೆಳಗ್ಗೆ ನಡೆದ ವಿಚಾರಸಂಕಿರಣ ಕಾರ್ಯಕ್ರಮವನ್ನು ಈ ಟಿ.ವಿ. ನಿರೂಪಕಿ ನವಿತಾ ಜೈನ್ ಉದ್ಘಾಟಿಸಿದರು. ಈ ಸಂದರ್ಭ  ಮಾತನಾಡಿದ ಅವರು ಬದಲಾಗುತ್ತಿರುವ ಪರಿಸ್ಥಿತಿಯಲ್ಲಿ ದೃಶ್ಯಮಾಧ್ಯಮದ ವಿಶ್ವಾಸಾರ್ಹತೆ ಉಳಿಸಿಕೊಂಡು ಹೋಗುವ ಜೊತೆಗೆ ಸವಾಲುಗಳನ್ನು ಎದುರಿಸಬೇಕಾದ ಅನಿವಾರ್ಯತೆ ಇದೆ ಎಂದರು. ಈ ಸಂದರ್ಭ ಅಧ್ಯಕ್ಷತೆ ವಹಿಸಿದ್ದ ರಜತ ವರ್ಷಾಚರಣಾ ಸಮಿತಿ ಗೌರವಾಧ್ಯಕ್ಷ ಬಾಲಕೃಷ್ಣ ಗಟ್ಟಿ, ದೃಶ್ಯಮಾಧ್ಯಮಗಳು ಬಂದರೂ ಪತ್ರಿಕೆಗಳಿಂದು ವಿಶ್ವಾಸಾರ್ಹತೆಯನ್ನು ಉಳಿಸಿಕೊಂಡು ಹೋಗಿದೆ ಎಂದರು. ಅತಿಥಿಯಾಗಿ ಭಾಗವಹಿಸಿದ್ದ ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಡಾ.ರೊನಾಲ್ಡ್ ಅನಿಲ್ ಫರ್ನಾಂಡಿಸ್ ಅವರನ್ನು ಗೌರವಿಸಲಾಯಿತು. ಈ ಸಂದರ್ಭ ಪ್ರೆಸ್ ಕ್ಲಬ್ ಅಧ್ಯಕ್ಷ ಪ್ರಶಾಂತ ಪುಂಜಾಲಕಟ್ಟೆ, ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಮೌನೇಶ ವಿಶ್ವಕರ್ಮ, ರಜತ ವರ್ಷಾಚರಣಾ ಸಮಿತಿ ಅಧ್ಯಕ್ಷ ಇಬ್ರಾಹಿಂ ಅಡ್ಕಸ್ಥಳ, ಕಸಾಪ ಮಾಜಿ ಅಧ್ಯಕ್ಷ ಬಿ.ತಮ್ಮಯ್ಯ, ಪುರಸಭಾಧ್ಯಕ್ಷ ರಾಮಕೃಷ್ಣ ಆಳ್ವ, ಮುಖ್ಯಾಧಿಕಾರಿ ಕೆ.ಸುಧಾಕರ್, ಜಿಪಂ ಸದಸ್ಯರಾದ ತುಂಗಪ್ಪ ಬಂಗೇರ, ಎಂ.ಎಸ್.ಮಹಮ್ಮದ್ ಉಪಸ್ಥಿತರಿದ್ದರು. ಮೌನೇಶ ವಿಶ್ವಕರ್ಮ ಸ್ವಾಗತಿಸಿದರು. ರಜತ ವರ್ಷಾಚರಣಾ ಸಮಿತಿ ಸಂಚಾಲಕ ವೆಂಕಟೇಶ ಬಂಟ್ವಾಳ ವಂದಿಸಿದರು. ರಂಗಕರ್ಮಿ  ಎಚ್. ಕೆ. ನಯನಾಡು ಕಾರ್ಯಕ್ರಮ ನಿರೂಪಿಸಿದರು. ಪತ್ರಕರ್ತರಾದ ಸಂದೀಪ ಸಾಲ್ಯಾನ್, ಯಾದವ ಕುಲಾಲ್, ಚಂದ್ರಶೇಖರ ಕಲ್ಮಲೆ, ಕಿಶೋರ್ ಪೆರಾಜೆ, ಇಮ್ತಿಯಾಜ್ ಶಾ, ವಾಮನ ಕರ್ಕೇರ, ಉದಯಶಂಕರ ನೀರ್ಪಾಜೆ, ಮಹಮ್ಮದ್ ಆಲಿ, ಜನಾರ್ದನ ವಿಟ್ಲ ವಿವಿಧ ಕಾರ್ಯಕ್ರಮಗಳಿಗೆ ಸಹಕರಿಸಿದರು.

ಬಳಿಕ ನಡೆದ ಕಾರ್ಯಾಗಾರದಲ್ಲಿ ಕರ್ನಾಟಕ ರಾಜ್ಯ ಮಾಧ್ಯಮ ಅಕಾಡೆಮಿ ಕಾರ್ಯದರ್ಶಿ ಬಿ.ವೆಂಕಟಸಿಂಗ್ ಮುದ್ರಣ ಮಾಧ್ಯಮದ ಕುರಿತು ಹಾಗೂ ನವಿತಾ ಜೈನ್ ದೃಶ್ಯ ಮಾಧ್ಯಮ ಕುರಿತು ವಿಷಯ ಮಂಡಿಸಿದರು.

ಟಿ.ವಿ.ಯಲ್ಲಿನ ಟಿ.ಆರ್.ಪಿ ಮಾನದಂಡ, ಜನಪ್ರಿಯ ಕಾರ್ಯಕ್ರಮಗಳು ಹಾಗೂ ಉತ್ತಮ ಕಾರ್ಯಕ್ರಮಗಳ ನಡುವಿನ ಲಕ್ಷ್ಮಣ ರೇಖೆಯ ಕುರಿತು ನವಿತಾ ಜೈನ್ ಮಾತನಾಡಿದರೆ, ಯಾವ ರೀತಿಯಲ್ಲಿ ಮುದ್ರಣ ಮಾಧ್ಯಮ ಇಂದಿಗೂ ಪ್ರಸ್ತುತ ಎಂದು ವೆಂಕಟ ಸಿಂಗ್ ಹೇಳಿದರು.  ಸಂವಾದ ಕಾರ್ಯಕ್ರಮದಲ್ಲಿ ಪತ್ರಕರ್ತ ಹರೀಶ ಕೆ.ಆದೂರು  ಉಪಸ್ಥಿತರಿದ್ದು ಪ್ರಶ್ನೆಗಳಿಗೆ ಉತ್ತರಿಸಿದರು. ಪುತ್ತೂರು, ಬಂಟ್ವಾಳ ಸಹಿತ ಜಿಲ್ಲೆಯ ವಿವಿಧ ಕಾಲೇಜುಗಳಿಂದ ವಿದ್ಯಾರ್ಥಿಗಳು, ಶಿಕ್ಷಕರು ಆಗಮಿಸಿ ಕಾರ್ಯಕ್ರಮದ ಪ್ರಯೋಜನ ಪಡೆದುಕೊಂಡರು.

ಜಾಹೀರಾತು

 

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Recent Posts