ಯುವಕನ ಅಪಹರಣ ಪ್ರಮುಖ ಆರೋಪಿ ಜೋಗಿಹನೀಫ್ ಬಂಧನ

ವಿಟ್ಲ ಕಸಬ ಗ್ರಾಮದ ಒಕ್ಕೆತ್ತೂರು ನಿವಾಸಿ ಅಬ್ದುಲ್ ರಝಾಕ್ ಮೋನು ಎಂಬವರನ್ನು ಕಾರಿನಲ್ಲಿ ಅಪಹರಿಸಿದ ಕೇಪು ಗ್ರಾಮದ ನೀರ್ಕಜೆ ಕುಕ್ಕೆಬೆಟ್ಟು ನಿವಾಸಿ ಹನೀಫ್ ಯಾನೆ ಜೋಗಿ ಹನೀಫ್ (36) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.

ಜಾಹೀರಾತು

ಹನೀಫ್ ಗಾಂಜಾ ದಂಧೆಯಲ್ಲಿ ತೊಡಗಿದವನಾಗಿದ್ದು ಈತನ ಮೇಲೆ ಗಾಂಜಾ ಮಾರಾಟ, ಸೇವನೆ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಕೇಸ್‌ಗಳಿವೆ. ಅಲ್ಲದೆ ಹಲ್ಲೆ ಸೇರಿದಂತೆ ಇತರ ಹಲವು ಪ್ರಕರಣಗಳು ಈತನ ಮೇಲಿದ್ದು ವಿಟ್ಲ ಪೊಲೀಸ್ ಠಾಣೆಯ ರೌಡಿ ಶೀಟರ್ ಕೂಡಾ ಆಗಿದ್ದಾನೆ. ಅಪಹರಣ ಪ್ರಕರಣದಲ್ಲಿ ಭಾಗಿಯಾದ ಹನೀಫ್‌ನ ಇನ್ನಿಬ್ಬರು ಸಹಚರರು ತಲೆ ಮರೆಸಿಕೊಂಡಿದ್ದು ಅವರ ಬಂಧನಕ್ಕೆ ಬಲೆ ಬೀಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು ನ್ಯಾಯಾಂಗ ಬಂಧನ ವಿಧಿಸಿದೆ.

ಈತ ಹಾಗೂ ಇತರ ಇಬ್ಬರು ಸೇರಿ ಮಾ. 19ರಂದು ರಾತ್ರಿ ವಿಟ್ಲ ಕಸ್ಬಾ ಗ್ರಾಮದ ಒಕ್ಕೆತ್ತೂರು ನಿವಾಸಿ ಅಬ್ದುಲ್ ರಝಾಕ್ ಮೋನು ಎಂಬವರನ್ನು ಕಾರಿನಲ್ಲಿ ಅಪಹರಿಸಿದ್ದರು.

ಏನಾಗಿತ್ತು:

ಜಾಹೀರಾತು

ರಝಾಕ್ ತನ್ನ ಸ್ನೇಹಿತ ಮನ್ಸೂರು ಎಂಬಾತನ ಬೈಕ್‌ನಲ್ಲಿ ವಿಟ್ಲದಿಂದ ಒಕ್ಕೆತ್ತೂರಿಗೆ ತೆರಳುತ್ತಿದ್ದಾಗ ಕಾರಿನಲ್ಲಿ ಬಂದ ಮೂವರ ತಂಡ ರಝಾಕ್‌ನಲ್ಲಿ ಅಪಹರಿಸಿತ್ತು. ಕೂಡಲೇ ಮನ್ಸೂರು ನೀಡಿದ ಮಾಹಿತಿಯಂತೆ ವಿಟ್ಲ ಠಾಣೆ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿದ್ದರು. ಅಪಹರಣಕಾರರ ತಂಡ ಕಾರಿನಲ್ಲಿ ವಿಟ್ಲದಿಂದ ಕಲ್ಲಡ್ಕ ಮೂಲಕ ಬಿಸಿರೋಡು ತೆರಳಿ ಅಲ್ಲಿಂದ ಬಜ್ಬೆ ಮಾರ್ಗವಾಗಿ ಮಂಗಳೂರಿಗೆ ತೆರಳಿದ ಮಾಹಿತಿಯನ್ನು ಪೊಲೀಸ್ ಇಲಾಖೆ ಸಂಗ್ರಹಿಸಿ ಬೆನ್ನತ್ತಲು ಪ್ರಯತ್ನಿಸಿತ್ತು. ರಜಾಕ್ ಗೆ ಚೂರಿಯಿಂದ ಗಾಯಗೊಳಿಸಿ, 10 ಸಾವಿರ ರೂ ನಗದು, ಮೊಬೈಲ್ ಫೋನ್ ದರೋಡೆ ಮಾಡಿದ್ದಅಪಹರಣಾಕಾರರು, ಪೊಲೀಸ್ ಕಾರ್ಯಾಚರಣೆ ನಡೆಸುತ್ತಿರುವ ಮಾಹಿತಿ ಅರಿತು ರಜಾಕ್ ಅವರನ್ನು ದೇರಳಕಟ್ಟೆಯಲ್ಲಿ ಇಳಿಸಿ ಪರಾರಿಯಾಗಿದ್ದರು.

ಸತತ ಹುಡುಕಾಟದ ಬಳಿಕ ಪ್ರಕರಣದ ಪ್ರಮುಖ ಆರೋಪಿ ಹನೀಫ್ ಯಾನೆ ಜೋಗಿ ಹನೀಫ್ ಕೋಡಪದವು ಬಸ್ ನಿಲ್ದಾಣದ ಬಳಿ ಇರುವ ಬಗ್ಗೆ ಪಡೆದ ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿದ ಪೊಲೀಸರು ಆತನನ್ನು ಬಂಧಿಸಿದ್ದಾರೆ. ಆತನಿಂದ ರಝಾಕ್‌ನ ಮೊಬೈಲ್ ಫೋನ್, 4 ಸಾವಿರ ರೂ. ನಗದು, ಹಲ್ಲೆ ನಡೆಸಿದ ಆಯುಧಗಳನ್ನು ವಶಕ್ಕೆ ಪಡೆದಿದ್ದಾರೆ.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಭೂಷಣ್ .ಜಿ. ಬೊರಸೆ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ವೇದಮೂರ್ತಿ ಮಾರ್ಗದರ್ಶನದಂತೆ ಬಂಟ್ವಾಳ ಡಿವೈಎಸ್ಪಿ ಡಾ. ರವೀಶ್ ಸಿ.ಆರ್. ನೇತೃತ್ವದಲ್ಲಿ ಬಂಟ್ವಾಳ ವೃತ್ತ ನಿರೀಕ್ಷಕ ಬಿ.ಕೆ.ಮಂಜಯ್ಯ, ವಿಟ್ಲ ಎಸ್ಸೈ ನಾಗರಾಜ್ ಎಚ್.ಇ., ಸಿಬ್ಬಂದಿಯಾದ ಬಾಲಕೃಷ್ಣ ಗೌಡ, ಪ್ರವೀಣ್ ರೈ, ರಕ್ಷಿತ್ ರೈ, ಲೋಕೇಶ್, ಪ್ರವೀಣ್ ಕುಮಾರ್, ವೃತ್ತ ನಿರೀಕ್ಷಕರ ಕಚೇರಿಯ ಗಿರೀಶ್ ಹಾಗೂ ಚಾಲಕರಾದ ರಘು ರಾಮ, ವಿಜಯೇಶ್ವರ ಬಂಧನ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಯುವಕನ ಅಪಹರಣ ಪ್ರಮುಖ ಆರೋಪಿ ಜೋಗಿಹನೀಫ್ ಬಂಧನ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*