ವಿಟ್ಲ

ಯುವಕನ ಅಪಹರಣ ಪ್ರಮುಖ ಆರೋಪಿ ಜೋಗಿಹನೀಫ್ ಬಂಧನ

ವಿಟ್ಲ ಕಸಬ ಗ್ರಾಮದ ಒಕ್ಕೆತ್ತೂರು ನಿವಾಸಿ ಅಬ್ದುಲ್ ರಝಾಕ್ ಮೋನು ಎಂಬವರನ್ನು ಕಾರಿನಲ್ಲಿ ಅಪಹರಿಸಿದ ಕೇಪು ಗ್ರಾಮದ ನೀರ್ಕಜೆ ಕುಕ್ಕೆಬೆಟ್ಟು ನಿವಾಸಿ ಹನೀಫ್ ಯಾನೆ ಜೋಗಿ ಹನೀಫ್ (36) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.

ಜಾಹೀರಾತು

ಹನೀಫ್ ಗಾಂಜಾ ದಂಧೆಯಲ್ಲಿ ತೊಡಗಿದವನಾಗಿದ್ದು ಈತನ ಮೇಲೆ ಗಾಂಜಾ ಮಾರಾಟ, ಸೇವನೆ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಕೇಸ್‌ಗಳಿವೆ. ಅಲ್ಲದೆ ಹಲ್ಲೆ ಸೇರಿದಂತೆ ಇತರ ಹಲವು ಪ್ರಕರಣಗಳು ಈತನ ಮೇಲಿದ್ದು ವಿಟ್ಲ ಪೊಲೀಸ್ ಠಾಣೆಯ ರೌಡಿ ಶೀಟರ್ ಕೂಡಾ ಆಗಿದ್ದಾನೆ. ಅಪಹರಣ ಪ್ರಕರಣದಲ್ಲಿ ಭಾಗಿಯಾದ ಹನೀಫ್‌ನ ಇನ್ನಿಬ್ಬರು ಸಹಚರರು ತಲೆ ಮರೆಸಿಕೊಂಡಿದ್ದು ಅವರ ಬಂಧನಕ್ಕೆ ಬಲೆ ಬೀಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು ನ್ಯಾಯಾಂಗ ಬಂಧನ ವಿಧಿಸಿದೆ.

ಈತ ಹಾಗೂ ಇತರ ಇಬ್ಬರು ಸೇರಿ ಮಾ. 19ರಂದು ರಾತ್ರಿ ವಿಟ್ಲ ಕಸ್ಬಾ ಗ್ರಾಮದ ಒಕ್ಕೆತ್ತೂರು ನಿವಾಸಿ ಅಬ್ದುಲ್ ರಝಾಕ್ ಮೋನು ಎಂಬವರನ್ನು ಕಾರಿನಲ್ಲಿ ಅಪಹರಿಸಿದ್ದರು.

ಏನಾಗಿತ್ತು:

ರಝಾಕ್ ತನ್ನ ಸ್ನೇಹಿತ ಮನ್ಸೂರು ಎಂಬಾತನ ಬೈಕ್‌ನಲ್ಲಿ ವಿಟ್ಲದಿಂದ ಒಕ್ಕೆತ್ತೂರಿಗೆ ತೆರಳುತ್ತಿದ್ದಾಗ ಕಾರಿನಲ್ಲಿ ಬಂದ ಮೂವರ ತಂಡ ರಝಾಕ್‌ನಲ್ಲಿ ಅಪಹರಿಸಿತ್ತು. ಕೂಡಲೇ ಮನ್ಸೂರು ನೀಡಿದ ಮಾಹಿತಿಯಂತೆ ವಿಟ್ಲ ಠಾಣೆ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿದ್ದರು. ಅಪಹರಣಕಾರರ ತಂಡ ಕಾರಿನಲ್ಲಿ ವಿಟ್ಲದಿಂದ ಕಲ್ಲಡ್ಕ ಮೂಲಕ ಬಿಸಿರೋಡು ತೆರಳಿ ಅಲ್ಲಿಂದ ಬಜ್ಬೆ ಮಾರ್ಗವಾಗಿ ಮಂಗಳೂರಿಗೆ ತೆರಳಿದ ಮಾಹಿತಿಯನ್ನು ಪೊಲೀಸ್ ಇಲಾಖೆ ಸಂಗ್ರಹಿಸಿ ಬೆನ್ನತ್ತಲು ಪ್ರಯತ್ನಿಸಿತ್ತು. ರಜಾಕ್ ಗೆ ಚೂರಿಯಿಂದ ಗಾಯಗೊಳಿಸಿ, 10 ಸಾವಿರ ರೂ ನಗದು, ಮೊಬೈಲ್ ಫೋನ್ ದರೋಡೆ ಮಾಡಿದ್ದಅಪಹರಣಾಕಾರರು, ಪೊಲೀಸ್ ಕಾರ್ಯಾಚರಣೆ ನಡೆಸುತ್ತಿರುವ ಮಾಹಿತಿ ಅರಿತು ರಜಾಕ್ ಅವರನ್ನು ದೇರಳಕಟ್ಟೆಯಲ್ಲಿ ಇಳಿಸಿ ಪರಾರಿಯಾಗಿದ್ದರು.

ಸತತ ಹುಡುಕಾಟದ ಬಳಿಕ ಪ್ರಕರಣದ ಪ್ರಮುಖ ಆರೋಪಿ ಹನೀಫ್ ಯಾನೆ ಜೋಗಿ ಹನೀಫ್ ಕೋಡಪದವು ಬಸ್ ನಿಲ್ದಾಣದ ಬಳಿ ಇರುವ ಬಗ್ಗೆ ಪಡೆದ ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿದ ಪೊಲೀಸರು ಆತನನ್ನು ಬಂಧಿಸಿದ್ದಾರೆ. ಆತನಿಂದ ರಝಾಕ್‌ನ ಮೊಬೈಲ್ ಫೋನ್, 4 ಸಾವಿರ ರೂ. ನಗದು, ಹಲ್ಲೆ ನಡೆಸಿದ ಆಯುಧಗಳನ್ನು ವಶಕ್ಕೆ ಪಡೆದಿದ್ದಾರೆ.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಭೂಷಣ್ .ಜಿ. ಬೊರಸೆ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ವೇದಮೂರ್ತಿ ಮಾರ್ಗದರ್ಶನದಂತೆ ಬಂಟ್ವಾಳ ಡಿವೈಎಸ್ಪಿ ಡಾ. ರವೀಶ್ ಸಿ.ಆರ್. ನೇತೃತ್ವದಲ್ಲಿ ಬಂಟ್ವಾಳ ವೃತ್ತ ನಿರೀಕ್ಷಕ ಬಿ.ಕೆ.ಮಂಜಯ್ಯ, ವಿಟ್ಲ ಎಸ್ಸೈ ನಾಗರಾಜ್ ಎಚ್.ಇ., ಸಿಬ್ಬಂದಿಯಾದ ಬಾಲಕೃಷ್ಣ ಗೌಡ, ಪ್ರವೀಣ್ ರೈ, ರಕ್ಷಿತ್ ರೈ, ಲೋಕೇಶ್, ಪ್ರವೀಣ್ ಕುಮಾರ್, ವೃತ್ತ ನಿರೀಕ್ಷಕರ ಕಚೇರಿಯ ಗಿರೀಶ್ ಹಾಗೂ ಚಾಲಕರಾದ ರಘು ರಾಮ, ವಿಜಯೇಶ್ವರ ಬಂಧನ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದರು.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts

ಮಂಗಳೂರು ಕಡಲ ತೀರ ʼಕಡಲ ಪವನ ಶಕ್ತಿ ಉತ್ಪಾದನಾ ವಲಯʼವಾಗಿ ಅಭಿವೃದ್ಧಿಪಡಿಸಲು ಕೇಂದ್ರಕ್ಕೆ ಮನವಿ

ನಿಯಮ 377ರ ಅಡಿಯಲ್ಲಿ ಸಮುದ್ರ ತೀರದ ಪವನ ಸಾಮರ್ಥ್ಯದ ಬಗ್ಗೆ ಲೋಕಸಭೆ ಗಮನಸೆಳೆದ ಸಂಸದ ಕ್ಯಾ. ಚೌಟ (more…)

4 hours ago