ಬಂಟ್ವಾಳ

ಬುಡಾ ಅಧ್ಯಕ್ಷರಾಗಿ ಸದಾಶಿವ ಬಂಗೇರ ಪದಗ್ರಹಣ

  • ಕೋಟಿ ಚೆನ್ನಯರಂತೆ ಕೆಲಸ ಮಾಡುವೆ ಎಂದ ಪುರಸಭಾಧ್ಯಕ್ಷ ಆಳ್ವ
  • ರಾಮಕೃಷ್ಣ ಆಳ್ವರೊಂದಿಗೆ ಜತೆಗೂಡಿ ಕೆಲಸ ಮಾಡುವೆ ಎಂದ ಬಂಗೇರ

ಬಂಟ್ವಾಳ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷರಾಗಿ ಕಾಂಗ್ರೆಸ್ ನ ಪುರಸಭಾ ಸದಸ್ಯ ಸದಾಶಿವ ಬಂಗೇರ ಸೋಮವಾರ ತಮ್ಮ ಅಪಾರ ಬೆಂಬಲಿಗರ ಮಧ್ಯೆ ನಿಕಟಪೂರ್ವ ಅಧ್ಯಕ್ಷ ಪಿಯುಸ್ ಎಲ್. ರೋಡ್ರಿಗಸ್ ಅವರಿಂದ ಅಧಿಕಾರ ಸ್ವೀಕರಿಸಿದರು.

ಜಾಹೀರಾತು

ಬಂಗೇರ ಅವರಿಗೆ ಅಭಿನಂದನೆಗಳ ಮಹಾಪೂರವೇ ಹರಿದುಬಂತು. ಬಂಟ್ವಾಳ ಪುರಸಭಾಧ್ಯಕ್ಷ ಪಿ.ರಾಮಕೃಷ್ಣ ಆಳ್ವ, ಕಾಂಗ್ರೆಸ್ ಹಂಗಾಮಿ ಜಿಲ್ಲಾಧ್ಯಕ್ಷ ಕೋಡಿಜಾಲ್ ಇಬ್ರಾಹಿಂ, ಜಿಲ್ಲಾ ಪಂಚಾಯಿತಿ ಸದಸ್ಯರಾದ ಮಂಜುಳಾ ಮಾವೆ, ಪದ್ಮಶೇಖರ ಜೈನ್, ಚಂದ್ರಪ್ರಕಾಶ ಶೆಟ್ಟಿ, ರವೀಂದ್ರ ಕಂಬಳಿ, ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಾಯಿಲಪ್ಪ ಸಾಲಿಯಾನ್, ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಬ್ಬಾಸ್ ಆಲಿ, ವಿಪಕ್ಷ ಪ್ರಮುಖರಾದ ಎ.ಗೋವಿಂದ ಪ್ರಭು, ದೇವದಾಸ ಶೆಟ್ಟಿ  ವಿದ್ಯುತ್  ಗುತ್ತಿಗೆದಾರರ ಸಂಘದ ಜಿಲ್ಲಾಧ್ಯಕ್ಷ ಉರ್ಬನ್ ಪಿಂಟೊ, ಸಾಮಾಜಿಕ ಕಾರ್ಯಕರ್ತರಾದ ಬಿಲ್ಲವ ಮುಖಂಡ ಹರಿಕೃಷ್ಣ ಬಂಟ್ವಾಳ, ಉದ್ಯಮಿ ಪ್ರಕಾಶ ಕಾರಂತ, ಕಾಂಗ್ರೆಸ್ ಪ್ರಮುಖರಾದ ಶಾಹುಲ್ ಹಮೀದ್, ಯುಸುಫ್ ಕರಂದಾಡಿ, ಮಹಮ್ಮದ್ ನಂದಾವರ, ಕುಮಾರ ಭಟ್, ಚಂದ್ರಶೇಖರ ಪೂಜಾರಿ, ಪ್ರಭಾಕರ ಪ್ರಭು, ಪರಮೇಶ್ವರ ಮೂಲ್ಯ, ಪುರಸಭಾ ಸದಸ್ಯರಾದ ಚಂಚಲಾಕ್ಷಿ, ಯಾಸ್ಮೀನ್, ಸುಗುಣ ಕಿಣಿ, ಮೊನೀಶ್ ಆಲಿ, ವಸಂತಿ ಚಂದಪ್ಪ, ಪ್ರವೀಣ್, ಗಂಗಾಧರ, ಬಂಟ್ವಾಳ ಪರಿಸರದ ನೂರಕ್ಕೂ ಅಧಿಕ ನಾಗರಿಕರು, ಬೆಂಬಲಿಗರು ಆಗಮಿಸಿ ಬಂಗೇರ ಅವರನ್ನು ಅಭಿನಂದಿಸಿದರು.

ಕೋಟಿ ಚೆನ್ನಯರಂತೆ ಕೆಲಸ ಮಾಡುವೆ:

ಈ ಸಂದರ್ಭ ಅಭಿನಂದಿಸಿ ಮಾತನಾಡಿದ ಪುರಸಭಾಧ್ಯಕ್ಷ ರಾಮಕೃಷ್ಣ ಆಳ್ವ ನಾವಿಬ್ಬರೂ ಹಿಂದಿನಿಂದಲೇ ಒಂದೇ ತಂಡದಲ್ಲಿ ದುಡಿದವರು. ಕ್ರೀಡಾಕೂಟಗಳಲ್ಲಿ ಭಾಗವಹಿಸಿದವರು. ಈಗ ಬಂಟ್ವಾಳ ಪುರಸಭೆ ವ್ಯಾಪ್ತಿಯ ಅಭಿವೃದ್ಧಿಗಾಗಿ ಕೋಟಿ ಚೆನ್ನಯರಂತೆ ಕೆಲಸ ಮಾಡುವೆವು ಎಂದು ಹೇಳಿದರು.

ಪ್ರಾಮಾಣಿಕವಾಗಿ ಕರ್ತವ್ಯ ನಿರ್ವಹಣೆ

ಅಭಿವೃದ್ಧಿ ವಿಚಾರದಲ್ಲಿ ಜನರಿಗೆ ತೊಂದರೆ ಆಗದಂತೆ ಕೆಲಸ ನಿರ್ವಹಿಸುವುದಾಗಿ ತಿಳಿಸಿದ ಸದಾಶಿವ ಬಂಗೇರ, ಸರಕಾರದ ನಿರ್ದೇಶನಗಳನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡುವೆ ಎಂದರು. ನೀರಿನ ಸಮಸ್ಯೆ ನೀಗಿಸಲು ಕೆರೆ ಅಭಿವೃದ್ಧಿ ಕುರಿತು ಗಮನಹರಿಸುವೆ, ಕೆರೆ ಒತ್ತುವರಿ ಕುರಿತು ಕ್ರಮ ಕೈಗೊಳ್ಳಲಾಗುವುದು, ಪುರಸಭಾಧ್ಯಕ್ಷ ರಾಮಕೃಷ್ಣ ಆಳ್ವ ಅವರೊಂದಿಗೆ ಜತೆಯಾಗಿ ದುಡಿಯುವೆ ಎಂದು ಸದಾಶಿವ ಬಂಗೇರ ಈ ಸಂದರ್ಭ ಹೇಳಿದರು.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.