ಕಲ್ಲಡ್ಕ

ಅಮ್ಟೂರಿನಲ್ಲಿ 21 ದಿನಗಳ ಯೋಗ ಶಿಬಿರ

ಅಮ್ಟೂರು ಶ್ರೀಕೃಷ್ಣ ಮಂದಿರ ಮತ್ತು ಗ್ರಾಮವಿಕಾಸ ಸಮಿತಿ ಸಂಯುಕ್ತ ಆಶ್ರಯದಲ್ಲಿ ಪತಂಜಲಿ ಯೋಗ ಪೀಠ ಹರಿದ್ವಾರ, ಭಾರತ ಸ್ವಾಭಿಮಾನ ಟ್ರಸ್ಟ್ ಹರಿದ್ವಾರ, ದ.ಕ.ಜಿಲ್ಲಾ ಪತಂಜಲಿ ಯೋಗ ಸಮಿತಿ ನೇತೃತ್ವ ಜೊತೆ 21 ದಿನಗಳ ಯೋಗ ಶಿಬಿರ ಸಭಾಂಗಣದಲ್ಲಿ ನಡೆಯಿತು.


ಬೆಳಗ್ಗೆ 5ರಿಂದ 7 ಗಂಟೆವರೆಗೆ ನಡೆದ ಶಿಬಿರದಲ್ಲಿ ಯೋಗ ಶಿಕ್ಷಕರಾಗಿ ಡಾ.ಜ್ಞಾನೇಶ್ವರ ನಾಯಕ್, ಪ್ರದೀಪ್ ಮುಡಿಪು, ಜಗದೀಶ ಮುಡಿಪು, ಪ್ರಭಾಕರ ಬೋಳ್ಯಾರ್, ಹಾಗೂ ಸರಸ್ವತಿ ಮಾತಾಜಿ ನೆಟ್ಲ ಸಹಕರಿಸಿದರು.
ಸಮಾರೋಪದಲ್ಲಿ ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಶ್ರೀರಾಮ ವಿದ್ಯಾಕೇಂದ್ರದ ಸಂಚಾಲಕ ವಸಂತ ಮಾಧವ ಮಾತನಾಡಿ, ಯೋಗದಿಂದ ನಮ್ಮ ಆರೋಗ್ಯಕ್ಕೆ, ಮತ್ತು ಶರೀರಕ್ಕೆ ಹಲವು ಲಾಭಗಳಿವೆ. ಇದು ಕೇವಲ ನಮಗೆ ಮಾತ್ರ ಸೀಮಿತವಾಗಿರಬಾರದು ನಮ್ಮ ಸಮಾಜದಲ್ಲಿರುವ ಇನ್ನಿತರರಿಗೂ ಇದರ ಪ್ರಯೋಜನವಾಗಬೇಕು. ನಾವು ಕಲಿತದುದನ್ನು ಇತರರಿಗೂ ತಿಳಿಸಿಕೊಡಬೇಕು ಎಂದರು.
ಶಿಬಿರದಲ್ಲಿ ಭಾಗವಹಿಸಿದ ಶಿಬಿರಾರ್ಥಿಗಳು ಯೋಗದಿಂದ ಆದ ಬದಲಾವಣೆಯನ್ನು ಹಂಚಿಕೊಂಡರು. ಎಲ್ಲರಿಗೂ ಪ್ರಮಾಣಪತ್ರವನ್ನು ವಿತರಿಸಲಾಯಿತು. ಸಮಿತಿಯ ವತಿಯಿಂದ ಯೋಗ ಶಿಕ್ಷಕರನ್ನು ಸನ್ಮಾನಿಸಲಾಯಿತು.
ನ್ಯಾಯವಾದಿ ಸತೀಶ್ ಭಟ್ ಶಿವಗಿರಿ ಸ್ವಾಗತಿಸಿ, ಕುಶಾಲಪ್ಪ ಅಮ್ಟೂರು ಕಾರ್‍ಯಕ್ರಮವನ್ನು ನಿರೂಪಿಸಿ, ವಂದಿಸಿದರು.

ಜಾಹೀರಾತು
ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts