ಬಂಟ್ವಾಳ

ಅಸಹಿಷ್ಣುತೆಯಿಂದ ಅಧ್ಯಯನಶೀಲತೆ ಕೊರತೆ: ಡಾ.ವಾನಳ್ಳಿ

ಹೊಸ ಜನಾಂಗದಲ್ಲಿ ನಮ್ಮ ವಿದ್ವಾಂಸರ ಬಗ್ಗೆ ಅಸಹಿಷ್ಣುತೆ ಕಾಣಿಸುತ್ತದೆ. ಇದು ಇತಿಹಾಸದ ಒಟ್ಟು ಸಂಶೋಧನೆ ಕ್ಷೇತ್ರದ ಬೆಳವಣಿಗೆಗೆ ಪೂರಕವಾಗಿಲ್ಲ ಎಂದು ಡಾ.ಗಂಗೂಬಾಯಿ ಹಾನಗಲ್ ಸಂಗೀತ ವಿಶ್ವವಿದ್ಯಾಲಯ ರಿಜಿಸ್ಟ್ರಾರ್ ಡಾ.ನಿರಂಜನ ವಾನಳ್ಳಿ ಹೇಳಿದರು.

ಜಾಹೀರಾತು

ಬಿ.ಸಿ.ರೋಡಿನ ಸಂಚಯಗಿರಿಯಲ್ಲಿರುವ ರಾಣಿ ಅಬ್ಬಕ್ಕ ತುಳು ಅಧ್ಯಯನ ಕೇಂದ್ರ ಮತ್ತು ತುಳು ಬದುಕು ವಸ್ತು ಸಂಗ್ರಹಾಲಯ ವತಿಯಿಂದ ಮೌಖಿಕ ಕಥನ ಮತ್ತು ಭೌತಿಕ ವಸ್ತುಗಳು ಸಾಮಾಜಿಕ ಚರಿತ್ರೆಯ ಪುನರ್ ರಚನೆ ಎಂಬ ವಿಷಯದ ಕುರಿತು ಎರಡು ದಿನಗಳ ರಾಷ್ಟ್ರೀಯ ವಿಚಾರಸಂಕಿರಣಕ್ಕೆ ಸೋಮವಾರ ಚಾಲನೆ ನೀಡಿ ಮಾತನಾಡಿದ ಅವರು, ಇಂದು ಹಲವಾರು ವಿಷಯಗಳ ಬಗ್ಗೆ ಸಂಶೋಧನೆಗಳು ನಡೆಯುತ್ತಿವೆ. ಆದರೆ ಸಂಶೋಧನೆಗೆ ಒಳಪಡದ ವ್ಯಕ್ತಿ, ವಸ್ತುಗಳು ಇನ್ನೂ ಹಲವಾರು ಬಾಕಿ ಉಳಿದಿವೆ. ಇಂಥ ಅಸಹಿಷ್ಣುತೆಯಿಂದಾಗಿ ಸಂಶೋಧಕರ ಕೊರತೆ ಕಾಣಿಸುತ್ತಿದೆ ಎಂದು ಆತಂಕ ವ್ಯಕ್ತಪಡಿಸಿದರು.

ಹಳೆಯ ವಸ್ತುಗಳಲ್ಲಿ ಕೆಲವು ಪೂಜಾಸ್ಥಳದಲ್ಲಿದ್ದರೆ, ಇನ್ನು ಕೆಲವು ವಿನಾಶದ ಅಂಚಿನಲ್ಲಿವೆ. ಇವುಗಳ ಅಧ್ಯಯನ ಆಗಬೇಕಾದ ಅಗತ್ಯವಿದೆ ಎಂದು ಹೇಳಿದ ವಾನಳ್ಳಿ , ಜನರಿಗೆ ನಮ್ಮದು ಎನ್ನುವುದರ ಬಗ್ಗೆ ಗೌರವ ಕಡಿಮೆಯಾಗುತ್ತಿರುವುದು ಕಾರಣ, ಸಂಗ್ರಹಿಸಿದ ಪ್ರತಿಯೊಂದು ವಸ್ತುವಿನ ಹಿಂದೆಯೂ ಅದರದ್ದೇ ಆದ ರೋಚಕ ಕಥೆ ಇದೆ. ಇದನ್ನು ಅಧ್ಯಯನ ಮಾಡುವ ಕೌಶಲ ಅಗತ್ಯ ಎಂದು ಹೇಳಿದರು.

ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದ ವಿಧಾನಪರಿಷತ್ತು ಸದಸ್ಯ ಕ್ಯಾ.ಗಣೇಶ್ ಕಾರ್ಣಿಕ್, ಭಾರತೀಯ ಇತಿಹಾಸವನ್ನು ಭಾರತೀಯ ದೃಷ್ಟಿಕೋನದೊಂದಿಗೆ ನೋಡುವ ಪ್ರಾಮಾಣಿಕ ಪ್ರಯತ್ನ ಆಗಿದೆಯಾ ಎಂಬುದನ್ನು ಗಮನಿಸಬೇಕು. ಕ್ಕರಿಸಿ ಮಾತನಾಡಿದರೆ ಪದವಿ ಪಡೆದುಕೊಳ್ಳುತ್ತಾರೆ, ಹೀಗಾಗಿಯೇ ಭಾರತದ ಇತಿಹಾಸದ ನೆಗೆಟಿವ್ ಅಂಶಗಳನ್ನೇ ವೈಭವೀಕರಿಸಲಾಗಿದ್ದು, ಮೌಲ್ಯಯುತ ವಿಚಾರಗಳನ್ನು ಬದಿಗಿರಿಸಲಾಗಿದೆ. ಇವನ್ನು ನಿವಾರಿಸಬೇಕಾದರೆ ನಮ್ಮ ಪರಿಕಲ್ಪನೆಯಲ್ಲೇ ಇತಿಹಾಸವನ್ನು ಮರುವಿಮರ್ಶೆ ಹಾಗೂ ಮರು ಅಧ್ಯಯನ ಇಂದು ನಡೆಯಬೇಕು ಎಂದು ಹೇಳಿದರು. ಉಪನ್ಯಾಸಕ ಚೇತನ್ ಮುಂಡಾಜೆ ಹಾಜರಿದ್ದರು. ವಿಚಾರಸಂಕಿರಣದ ಸಂಯೋಜಕಿ ಡಾ.ಆಶಾಲತಾ ಸುವರ್ಣ ಪ್ರಾಸ್ತಾವಿಕವಾಗಿ ಮಾತನಾಡಿದರು. ರಾಣಿ ಅಬ್ಬಕ್ಕ ತುಳು ಅಧ್ಯಯನ ಕೇಂದ್ರದ ಅಧ್ಯಕ್ಷ ಪ್ರೊ. ತುಕಾರಾಮ ಪೂಜಾರಿ ಸ್ವಾಗತಿಸಿದರು. ಮಂಗಳೂರು ವಿವಿ ನಿವೃತ್ತ ಇತಿಹಾಸ ಪ್ರಾಧ್ಯಾಪಕ ಡಾ.ಸುರೇಂದ್ರ ರಾವ್ ದಿಕ್ಸೂಚಿ ಭಾಷಣ ಮಾಡಿದರು. ಡಾ.ಸಾಯಿಗೀತಾ ವಂದಿಸಿದರು. ಸಿಂಧೂರ ಕಾರ್ಯಕ್ರಮ ನಿರೂಪಿಸಿದರು.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts