ವಿಟ್ಲ

ಒಡಿಯೂರಿನಲ್ಲಿ ಶ್ರೀಮದ್ರಾಮಾಯಣ ಮಹಾಯಜ್ಞ, ಹನುಮೋತ್ಸವ

ಬಂಟ್ವಾಳ ತಾಲೂಕಿನ ದಕ್ಷಿಣ ಗಾಣಗಾಪುರ ಶ್ರೀ ದತ್ತಾಂಜನೇಯ ಕ್ಷೇತ್ರ ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನಂನಲ್ಲಿ ಏಪ್ರಿಲ್ 11ರಂದು ಶ್ರೀಮದ್ರಾಮಾಯಣ ಮಹಾಯಜ್ಞ ಹನುಮೋತ್ಸವ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ.

ಜಾಹೀರಾತು

4ರಿಂದ 11ವರೆಗೆ ಅಖಂಡ ಭಗವನ್ನಾಮಸಂಕೀರ್ತನೆ ನಡೆಯುವುದು ಎಂದು ಮಠದ ಪ್ರಕಟಣೆ ತಿಳಿಸಿದೆ.

ಕಾರ್ಯಕ್ರಮಗಳ ವಿವರ ಹೀಗಿದೆ.

4ರಂದು ಅಖಂಡ ಭಗವನ್ನಾಮಸಂಕೀರ್ತನೆ ಆರಂಭ. 8ರಂದು ರಾತ್ರಿ ವಿಶೇಷ ಬೆಳ್ಳಿರಥೋತ್ಸವ. 11ರಂದು ಬೆಳಗ್ಗೆ ಶ್ರೀಮದ್ರಾಮಾಯಣ ಮಹಾಯಜ್ಞ. ಬೆಳಗ್ಗೆ 10.30ರಿಂದ ಧರ್ಮಸಭೆ. ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿ ಉಪಸ್ಥಿತಿಯಲ್ಲಿ ನಡೆಯುವ ಧರ್ಮಸಭೆಯಲ್ಲಿ ವಿಶೇಷ ಆಹ್ವಾನಿತರಾಗಿ ಕುಡ್ಪಲ್ತಡ್ಕ ಶ್ರೀ ಭಾರತೀ ಸೇವಾ ಸಮಿತಿ ಗೌರವಾಧ್ಯಕ್ಷ ಬಿ.ಕೃಷ್ಣ ಭಟ್, ಮುಂಬೈ ವಿಶ್ವಾತ್ ಕೆಮಿಕಲ್ಸ್ ಅಧ್ಯಕ್ಷ ವಿವೇಕ್ ಶೆಟ್ಟಿ, ಮಂಗಳೂರಿನ ಚಾರ್ಟರ್ಡ್ ಅಕೌಂಟೆಂಟ್ ರಾಮಮೋಹನ ರೈ, ಪುತ್ತೂರು ಬಿಲ್ಲವ ಸಂಘ ಅಧ್ಯಕ್ಷ ಜಯಂತ ನಡುಬೈಲು, ಬೆಂಗಳೂರು ನೆಟ್ ವರ್ತ್ ಸಿಸ್ಟಮ್ ಸಿಇಒ ಭವಾನಿ ಶಂಕರ ಶೆಟ್ಟಿ, ಮಣಿಪಾಲ ಶಾಂಭವಿ ಬಿಲ್ಡರ್ಸ್ ನ ದಿನೇಶ್ ಶೆಟ್ಟಿ ಹೆರ್ಗ ಭಾಗವಹಿಸುವವರು. 12 ಗಂಟೆಗೆ ಮಹಾಯಜ್ಞ ಪೂರ್ಣಾಹುತಿ ನಡೆಯಲಿದ್ದು, ಮಧ್ಯಾಹ್ನ 3ರಿಂದ ಯಕ್ಷಗಾನ ಬಯಲಾಟ ನಡೆಯಲಿದೆ. ಸಂಜೆ 7.30ರಿಂದ ಬೆಳ್ಳಿರಥೋತ್ಸವ, ಶ್ರೀ ಹನುಮದ್ರ್ವತ ಪೂಜೆ ನಡೆಯುವುದು ಎಂದು ಪ್ರಕಟಣೆ ತಿಳಿಸಿದೆ.

ಜಾಹೀರಾತು

 

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ