ಬಂಟ್ವಾಳ

ಇತಿಹಾಸ ಮರೆತರೆ ಬದುಕಲು ಪರದಾಟ: ನಂಜುಂಡೇಗೌಡ

ನಾವು ಇತಿಹಾಸವನ್ನು ಮರೆತರೆ ಉಣ್ಣಲು ಅನ್ನವಿಲ್ಲದೆ ಪರದಾಡಬೇಕಾದೀತು. ಅಂತರ್ಜಲ ಕಡಿಮೆಯಾಗುತ್ತಿರುವ ಈ ಸನ್ನಿವೇಶದಲ್ಲಿ ನಾವು ಇತಿಹಾಸವನ್ನು ನೋಡುವ ಅಗತ್ಯವಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘ ಉಪಾಧ್ಯಕ್ಷ ಕೆ.ಎಸ್.ನಂಜುಂಡೇಗೌಡ ಹೇಳಿದರು.

ಬಂಟ್ವಾಳ ಬಿ.ಸಿ.ರೋಡಿನ ಸಂಚಯಗಿರಿಯಲ್ಲಿ ರಾಣಿ ಅಬ್ಬಕ್ಕ ತುಳು ಅಧ್ಯಯನ ಕೇಂದ್ರ ಮತ್ತು ತುಳು ಬದುಕು ವಸ್ತುಸಂಗ್ರಹಾಲಯ ಕೇಂದ್ರದಲ್ಲಿ ನಡೆದ  ಮೌಖಿಕ ಕಥನ ಮತ್ತು ಭೌತಿಕ ವಸ್ತುಗಳು, ಸಾಮಾಜಿಕ ಚರಿತ್ರೆಯ ಪುನರ್ ರಚನೆ ಎಂಬ ವಿಷಯದ ಕುರಿತು ನಡೆದ ಎರಡು ದಿನಗಳ ರಾಷ್ಟ್ರಮಟ್ಟದ ವಿಚಾರಸಂಕಿರಣ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಅವರು ಮಾತನಾಡಿದರು.

ಜಾಹೀರಾತು

ಮುಂದಿನ ಪೀಳಿಗೆಗೆ ಪೂರ್ವಿಕರ ಆಲೋಚನೆ ಏನಿತ್ತು ಎಂಬುದು ಗೊತ್ತಿರಬೇಕು. ಇಂದು ಕೃಷಿಯನ್ನು ನಂಬಿದವನು ಯಾವುದೇ ಕಾರಣಕ್ಕೂ ಬದುಕಲು ಅಸಾಧ್ಯ ಎಂಬ ಸ್ಥಿತಿ ಇದೆ. ಕೃಷಿಯಲ್ಲಿ ಸಂಪಾದನೆ, ಸರಿಯಾದ ಬೆಲೆ ಇಲ್ಲದಿದರೆ ಕಾರ್ಮಿಕರು ಸಹಜವಾಗಿಯೇ ಬೇರೆ ದಾರಿ ಕಂಡುಕೊಳ್ಳುತ್ತಾನೆ. ಈಗ ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಇಡೀ ಕೃಷಿಯೇ ನಾಶವಾಗುವ ಸ್ಥಿತಿ ಹಾಗೂ ಅಂತರ್ಜಲ ಸಹಿತ ನೀರಿನ ಸೆಲೆಗಳೇ ನಾಶವಾಗುವ ಪರಿಸ್ಥಿತಿ. ಮಳೆಯೂ ಬರುತ್ತಿಲ್ಲ. ಇದಕ್ಕೆ ಕಾರಣ ನಾವು ಇತಿಹಾಸವನ್ನು ಮರೆತಿರುವುದು ಎಂದು ನಂಜುಂಡೇಗೌಡ ಹೇಳಿದರು.

ಉದ್ಯಮಿ ಸಿ.ಎ.ನಂದಗೋಪಾಲ ಶೆಣೈ ಮಾತನಾಡಿ, ಹಳೆಯ ವಸ್ತುಗಳನ್ನು ಇಂದು ಮಾರ್ಕೆಟಿಂಗ್ ದೃಷ್ಟಿಯಿಂದಲೂ ನೋಡಬೇಕಾದ ಅಗತ್ಯವಿದೆ ಎಂದರು.

ನಿವೃತ್ತ ಪ್ರಾಂಶುಪಾಲ ಡಾ.ಪಿ.ಎನ್.ಎನ್.ಮೂರ್ತಿ, ಸೆಂಟರ್ ಫಾರ್ ಪಬ್ಲಿಕ್ ಹಿಸ್ಟರಿಯ ಸ್ಥಾಪಕ ನಿರ್ದೇಶಕಿ ಡಾ.ಇಂದಿರಾ ಚೌಧುರಿ, ಮಾಜಿ ಶಾಸಕ ಎ.ರುಕ್ಮಯ ಪೂಜಾರಿ, ಕೇಂದ್ರದ ಕಾರ್ಯದರ್ಶಿ ಡಾ.ಆಶಾಲತಾ ಸುವರ್ಣ ಉಪಸ್ಥಿತರಿದ್ದರು.

ಜಾಹೀರಾತು

ಅಧ್ಯಕ್ಷತೆ ವಹಿಸಿದ್ದ ಏರ್ಯ ಲಕ್ಷ್ಮೀನಾರಾಯಣ ಆಳ್ವ ಮಾತನಾಡಿ ತುಳು ಬದುಕಿನ ಜೀವಂತಿಕೆಯನ್ನು ಉಳಿಸುವ ಅಗತ್ಯವನ್ನು ಒತ್ತಿ ಹೇಳಿದರು.

ನಿರೇನ್ ಜೈನ್, ಗೋಪಿ, ಶೋಭಾ ಅನಿಸಿಕೆ ವ್ಯಕ್ತಪಡಿಸಿದರು. ಉಪನ್ಯಾಸಕ ಚೇತನ್ ಮುಂಡಾಜೆ ಸಮಾರಂಭದ ಹಿನ್ನೋಟ ನೀಡಿದರು. ಪ್ರೊ.ತುಕಾರಾಮ ಪೂಜಾರಿ ಸ್ವಾಗತಿಸಿದರು. ಪುರುಷೋತ್ತಮ ಭಂಡಾರಿ ವಂದಿಸಿದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ